ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಸ್ಥಳೀಯ ಸಮರ್ಥ ವಿಕಲಚೇತನರನ್ನು ಗ್ರಾಮ ಪಂಚಾಯಿತಿಗಳಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ಹಾಗೂ ತಾಲ್ಲೂಕು ಪಂಚಾಯಿತಿಗೆ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನಾಗಿ ಗೌರವಧನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿಕಲಚೇತನ ವ್ಯಕ್ತಿಗಳು ಷರತ್ತುಗಳಿಗೆ ಒಳಪಟ್ಟು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು 2024 ರ ಫೆಬ್ರವರಿ 29 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ ನಂ 01, ನೆಲಮಹಡಿ, ಜಿಲ್ಲಾಡಳಿತ ಭವನ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ನೆಲಮಂಗಲ ತಾಲ್ಲೂಕು ಪಂಚಾಯಿತಿಗೆ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಹುದ್ದೆ-01, ನೆಲಮಂಗಲ ತಾಲ್ಲೂಕಿನ ದೊಡ್ಡಬೆಲೆ ಗ್ರಾಮಪಂಚಾಯಿತಿ, ಸೋಲದೇವನಹಳ್ಳಿ ಗ್ರಾಮ ಪಂಚಾಯತಿಗೆ ತಲಾ ಒಂದು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿ ಮಾಡಲಾಗುತ್ತದೆ.

ಷರತ್ತುಗಳು

1) ಶೇಕಡಾ 40 ಹಾಗೂ ಅದಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರಬೇಕು. (ಯು.ಡಿ.ಐ.ಡಿ. ಲಗತ್ತಿಸಬೇಕು.)
2) ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀಣ೯ರದವರಿಗೆ ಆದ್ಯತೆ. ಉತ್ತೀರ್ಣರಾದವರು ಸಿಗದೆ ಇದ್ದ ಸಂದರ್ಭದಲ್ಲಿ ಅನುತ್ತೀರ್ಣರಾದವರನ್ನು
ಪರಿಗಣಿಸಲಾಗುವುದು.
3) 18-45 ವಯೋಮಿತಿಯಲ್ಲಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ/ಸೌಲಭ್ಯ ಕಲ್ಪಿಸಲು ಸಮರ್ಥರಾಗಿರಬೇಕು
4) ಗೌರವಧನದ ನೇಮಕಾತಿಯು ಒಂದು ವರ್ಷದ ನಂತರ ಪುನರ್‌ಪರಿಶೀಲನೆಗೆ ಒಳಪಟ್ಟಿರುತ್ತದೆ. ಪುನರ್ ಪರಿಶೀಲನೆಯಲ್ಲಿ ಕೆಲಸ ಕಾರ್ಯಗಳ ನಿರ್ವಹಣೆ, ಅಂಗವಿಕಲರೊಂದಿಗೆ ಸಂಬಂಧ ವಿವಿಧ ಇಲಾಖೆಗಳೊಂದಿಗೆ/ಸ್ವಯಂ ಸೇವಾ ಸಂಸ್ಥೆ ಸಮುದಾಯದೊಂದಿಗೆ ವಿಕಲಚೇತನ ಅಭಿವೃದ್ಧಿಗಾಗಿ ಇಟ್ಟುಕೊಂಡಿರುವ ಸಂಬಂಧಗಳನ್ನು ಪರಿಶೀಲಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು,
5) ಹುದ್ದೆಯು ಗೌರವಧನದ ಆಧಾರದ ಮೇಲೆ ಇರುವುದರಿಂದ ಇವರನ್ನು ಯಾವಾಗ ಬೇಕಾದರೂ ಕೆಲಸದಿಂದ ತೆಗೆದು ಹಾಕಬಹುದಾಗಿದೆ – ಬಿಡುಗಡೆ ಮಾಡಬಹುದಾಗಿದೆ.
6) ಗೌರವಧನ ಆಧಾರದ ಮೇಲೆ ಕೆಲಸ ನಿರ್ವಹಿಸುವುದರಿಂದ ಖಾಯಂಗೊಳಿಸಲು ಕೋರಲು ಅವಕಾಶವಿರುವುದಿಲ್ಲ.
7, ಸಮರ್ಥ ವಿಕಲಚೇತನರಾಗಿರಬೇಕು ತೀರ್ವತರ ವಿಕಲಚೇತನರಾಗಿರಬಾರದು.
8) ಸಂಬಂಧಪಟ್ಟ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಬಗ್ಗೆ ತಹಸೀಲ್ದಾರರಿಂದ ವಾಸಸ್ಥಳ ದೃಢೀಕರಣ ಪತ್ರ ಲಗತ್ತಿಸುವುದು.
9) ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಮಾಹೆಯಾನ ಗೌರವಧನ ರೂ.15,000/- ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ರೂ.9000/-ಗೌರವಧನ ನೀಡಲಾಗುವುದು. ಇಲಾಖೆಯಿಂದ ಕಾಲಕಾಲಕ್ಕೆ ವಿಧಿಸುವ ಷರತ್ತುಗಳಿಗೆ ಬದ್ಧರಾಗಿರಬೇಕು ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ್ ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

3 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

18 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

18 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

19 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

20 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

22 hours ago