ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ ತೆರಳಲು ಸಮರ್ಪಕವಾಗಿ ಸರ್ಕಾರಿ ಬಸ್ಸುಗಳ ಸೌಲಭ್ಯ ಕಲ್ಪಿಸಿ ಕೊಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ ಮುಳಬಾಗಿಲು ತಾಲೂಕು ಸಮಿತಿ ಘಟಕ ನಿಯಂತ್ರಣಧಿಕಾರಿ ಗಂಗಾಧರೆಡ್ಡಿ ಮುಖಾಂತರ ಘಟಕದ ವ್ಯವಸ್ಥಾಪಕರಿಗೆ ಮನವಿ ಪತ್ರ ನೀಡಲಾಯಿತು.
ಈ ಸಂದರ್ಭದಲ್ಲಿ ಎಸ್ ಎಫ್ ಐ ತಾಲೂಕು ಕಾರ್ಯದರ್ಶಿಯಾದ ಸುದರ್ಶನ್ ಮಾತನಾಡಿ, ಭಾರತ ವಿದ್ಯಾರ್ಥಿ ಫೆಡರೇಶನ್ ಹಲವು ವರ್ಷಗಳಿಂದ ಸಮರ್ಪಕವಾಗಿ ಬಸ್ ಸೌಲಭ್ಯಕ್ಕಾಗಿ ಹೋರಾಟಗಳು ನಡೆಸಿಕೊಂಡು ಬರುತ್ತಿದೆ. ಆದರೂ, ತಾಲೂಕಿನ ಗ್ರಾಮೀಣ ಪ್ರದೇಶಗಳಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಪಟ್ಟಣಕ್ಕೆ ಬರುತ್ತಿದ್ದು, ಸರಿಯಾದ ಸಮಯಕ್ಕೆ ಬಸ್ಸುಗಳ ಸೌಲಭ್ಯ ಇಲ್ಲದೆ ವಿದ್ಯಾರ್ಥಿಗಳು ಬಸ್ ಪಾಸ್ ಇದ್ದರೂ ಶಾಲಾ-ಕಾಲೇಜಿಗೆ ಸಮಯಕ್ಕೆ ಸರಿಯಾಗಿ ಬರಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪಾಲಿಟೆಕ್ನಿಕ್ ಕಾಲೇಜು ಹಾಗೂ ದೇವರಾಯ ಸಮುದ್ರ ಐಟಿಐ ಕಾಲೇಜು ಮಾರ್ಗದಲ್ಲಿ ಹೋಗುವ ಬಸ್ಸುಗಳು ಅಲ್ಲಿ ನಿಲ್ಲಿಸುತ್ತಿರುವುದಿಲ್ಲ ಹಾಗೂ ಕೋವಿಡ್ ಮುಂಚೆ ತಾಯಲೂರು ಮುಖಾಂತರ ಯಳಚೇಪಲ್ಲಿ ಗ್ರಾಮಕ್ಕೆ ಹಾಗೂ ಗುಮ್ಲಾಪುರ ಮಾರ್ಗದಿಂದ ಮೇಲ್ತಾಯಲೂರು ಗ್ರಾಮಗಳಿಗೆ ಬಸ್ಸಿನ ಸೌಲಭ್ಯವಿತ್ತು. ಆದರೆ, ಈಗ ಎಲ್ಲವನ್ನು ಮುಕ್ತಾಯಗೊಳಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ಸಮಸ್ಯೆ ಎದುರಾಗುತ್ತಿದ್ದು, ಆದಷ್ಟು ಬೇಗ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲದಿದ್ದರೆ ತಾಲೂಕು ಘಟಕದ ಮುಂದೆ ಬೃಹತ್ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಎಸ್ ಎಫ್ ಐ ತಾಲೂಕು ಅಧ್ಯಕ್ಷ ಅರ್ಚನಾ, ಉಪಾಧ್ಯಕ್ಷ ಸುಭಾಷ್ ಹಾಗೂ ಯಶ್, ಜಿಲ್ಲಾ ಸಮಿತಿ ಸದಸ್ಯರಾದ ಅಜಯ್ ಕುಮಾರ್ ಹಾಗೂ ಯಲಚೇನಹಳ್ಳಿ ವಿದ್ಯಾರ್ಥಿಗಳಾದ ವಾಸುದೇವ ರಾವ್ ತಾರುಣ್ಗಾವ್ ಮುನಿಯಪ್ಪಾದ ಪವಿತ್ರ ಬಾಯಿ ಮಂಜುನಾಥರಾವ್ ಹಾಜರಿದ್ದರು.
ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…
ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…
ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…
ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…
ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…
ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…