ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ ತೆರಳಲು ಸಮರ್ಪಕವಾಗಿ ಸರ್ಕಾರಿ ಬಸ್ಸುಗಳ ಸೌಲಭ್ಯ ಕಲ್ಪಿಸಿ ಕೊಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ ಮುಳಬಾಗಿಲು ತಾಲೂಕು ಸಮಿತಿ ಘಟಕ ನಿಯಂತ್ರಣಧಿಕಾರಿ ಗಂಗಾಧರೆಡ್ಡಿ ಮುಖಾಂತರ ಘಟಕದ ವ್ಯವಸ್ಥಾಪಕರಿಗೆ ಮನವಿ ಪತ್ರ ನೀಡಲಾಯಿತು.
ಈ ಸಂದರ್ಭದಲ್ಲಿ ಎಸ್ ಎಫ್ ಐ ತಾಲೂಕು ಕಾರ್ಯದರ್ಶಿಯಾದ ಸುದರ್ಶನ್ ಮಾತನಾಡಿ, ಭಾರತ ವಿದ್ಯಾರ್ಥಿ ಫೆಡರೇಶನ್ ಹಲವು ವರ್ಷಗಳಿಂದ ಸಮರ್ಪಕವಾಗಿ ಬಸ್ ಸೌಲಭ್ಯಕ್ಕಾಗಿ ಹೋರಾಟಗಳು ನಡೆಸಿಕೊಂಡು ಬರುತ್ತಿದೆ. ಆದರೂ, ತಾಲೂಕಿನ ಗ್ರಾಮೀಣ ಪ್ರದೇಶಗಳಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಪಟ್ಟಣಕ್ಕೆ ಬರುತ್ತಿದ್ದು, ಸರಿಯಾದ ಸಮಯಕ್ಕೆ ಬಸ್ಸುಗಳ ಸೌಲಭ್ಯ ಇಲ್ಲದೆ ವಿದ್ಯಾರ್ಥಿಗಳು ಬಸ್ ಪಾಸ್ ಇದ್ದರೂ ಶಾಲಾ-ಕಾಲೇಜಿಗೆ ಸಮಯಕ್ಕೆ ಸರಿಯಾಗಿ ಬರಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪಾಲಿಟೆಕ್ನಿಕ್ ಕಾಲೇಜು ಹಾಗೂ ದೇವರಾಯ ಸಮುದ್ರ ಐಟಿಐ ಕಾಲೇಜು ಮಾರ್ಗದಲ್ಲಿ ಹೋಗುವ ಬಸ್ಸುಗಳು ಅಲ್ಲಿ ನಿಲ್ಲಿಸುತ್ತಿರುವುದಿಲ್ಲ ಹಾಗೂ ಕೋವಿಡ್ ಮುಂಚೆ ತಾಯಲೂರು ಮುಖಾಂತರ ಯಳಚೇಪಲ್ಲಿ ಗ್ರಾಮಕ್ಕೆ ಹಾಗೂ ಗುಮ್ಲಾಪುರ ಮಾರ್ಗದಿಂದ ಮೇಲ್ತಾಯಲೂರು ಗ್ರಾಮಗಳಿಗೆ ಬಸ್ಸಿನ ಸೌಲಭ್ಯವಿತ್ತು. ಆದರೆ, ಈಗ ಎಲ್ಲವನ್ನು ಮುಕ್ತಾಯಗೊಳಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ಸಮಸ್ಯೆ ಎದುರಾಗುತ್ತಿದ್ದು, ಆದಷ್ಟು ಬೇಗ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲದಿದ್ದರೆ ತಾಲೂಕು ಘಟಕದ ಮುಂದೆ ಬೃಹತ್ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಎಸ್ ಎಫ್ ಐ ತಾಲೂಕು ಅಧ್ಯಕ್ಷ ಅರ್ಚನಾ, ಉಪಾಧ್ಯಕ್ಷ ಸುಭಾಷ್ ಹಾಗೂ ಯಶ್, ಜಿಲ್ಲಾ ಸಮಿತಿ ಸದಸ್ಯರಾದ ಅಜಯ್ ಕುಮಾರ್ ಹಾಗೂ ಯಲಚೇನಹಳ್ಳಿ ವಿದ್ಯಾರ್ಥಿಗಳಾದ ವಾಸುದೇವ ರಾವ್ ತಾರುಣ್ಗಾವ್ ಮುನಿಯಪ್ಪಾದ ಪವಿತ್ರ ಬಾಯಿ ಮಂಜುನಾಥರಾವ್ ಹಾಜರಿದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…