Categories: ಕೋಲಾರ

ಗ್ರಾಮೀಣ ಪ್ರದೇಶಗಳಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ SFI ಮನವಿ

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ ತೆರಳಲು ಸಮರ್ಪಕವಾಗಿ ಸರ್ಕಾರಿ ಬಸ್ಸುಗಳ ಸೌಲಭ್ಯ ಕಲ್ಪಿಸಿ ಕೊಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ ಮುಳಬಾಗಿಲು ತಾಲೂಕು ಸಮಿತಿ ಘಟಕ ನಿಯಂತ್ರಣಧಿಕಾರಿ ಗಂಗಾಧರೆಡ್ಡಿ ಮುಖಾಂತರ ಘಟಕದ ವ್ಯವಸ್ಥಾಪಕರಿಗೆ ಮನವಿ ಪತ್ರ ನೀಡಲಾಯಿತು.

ಈ ಸಂದರ್ಭದಲ್ಲಿ ಎಸ್ ಎಫ್ ಐ ತಾಲೂಕು ಕಾರ್ಯದರ್ಶಿಯಾದ ಸುದರ್ಶನ್ ಮಾತನಾಡಿ, ಭಾರತ ವಿದ್ಯಾರ್ಥಿ ಫೆಡರೇಶನ್ ಹಲವು ವರ್ಷಗಳಿಂದ ಸಮರ್ಪಕವಾಗಿ ಬಸ್ ಸೌಲಭ್ಯಕ್ಕಾಗಿ ಹೋರಾಟಗಳು ನಡೆಸಿಕೊಂಡು ಬರುತ್ತಿದೆ. ಆದರೂ, ತಾಲೂಕಿನ ಗ್ರಾಮೀಣ ಪ್ರದೇಶಗಳಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಪಟ್ಟಣಕ್ಕೆ ಬರುತ್ತಿದ್ದು, ಸರಿಯಾದ ಸಮಯಕ್ಕೆ ಬಸ್ಸುಗಳ ಸೌಲಭ್ಯ ಇಲ್ಲದೆ ವಿದ್ಯಾರ್ಥಿಗಳು ಬಸ್ ಪಾಸ್ ಇದ್ದರೂ ಶಾಲಾ-ಕಾಲೇಜಿಗೆ ಸಮಯಕ್ಕೆ ಸರಿಯಾಗಿ ಬರಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪಾಲಿಟೆಕ್ನಿಕ್ ಕಾಲೇಜು ಹಾಗೂ ದೇವರಾಯ ಸಮುದ್ರ ಐಟಿಐ ಕಾಲೇಜು ಮಾರ್ಗದಲ್ಲಿ ಹೋಗುವ ಬಸ್ಸುಗಳು ಅಲ್ಲಿ ನಿಲ್ಲಿಸುತ್ತಿರುವುದಿಲ್ಲ ಹಾಗೂ ಕೋವಿಡ್ ಮುಂಚೆ ತಾಯಲೂರು ಮುಖಾಂತರ ಯಳಚೇಪಲ್ಲಿ ಗ್ರಾಮಕ್ಕೆ ಹಾಗೂ ಗುಮ್ಲಾಪುರ ಮಾರ್ಗದಿಂದ ಮೇಲ್ತಾಯಲೂರು ಗ್ರಾಮಗಳಿಗೆ ಬಸ್ಸಿನ ಸೌಲಭ್ಯವಿತ್ತು. ಆದರೆ, ಈಗ ಎಲ್ಲವನ್ನು ಮುಕ್ತಾಯಗೊಳಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ಸಮಸ್ಯೆ ಎದುರಾಗುತ್ತಿದ್ದು, ಆದಷ್ಟು ಬೇಗ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲದಿದ್ದರೆ ತಾಲೂಕು ಘಟಕದ ಮುಂದೆ ಬೃಹತ್ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಎಸ್ ಎಫ್ ಐ ತಾಲೂಕು ಅಧ್ಯಕ್ಷ ಅರ್ಚನಾ, ಉಪಾಧ್ಯಕ್ಷ ಸುಭಾಷ್ ಹಾಗೂ ಯಶ್, ಜಿಲ್ಲಾ ಸಮಿತಿ ಸದಸ್ಯರಾದ ಅಜಯ್ ಕುಮಾರ್ ಹಾಗೂ ಯಲಚೇನಹಳ್ಳಿ ವಿದ್ಯಾರ್ಥಿಗಳಾದ ವಾಸುದೇವ ರಾವ್ ತಾರುಣ್ಗಾವ್ ಮುನಿಯಪ್ಪಾದ ಪವಿತ್ರ ಬಾಯಿ ಮಂಜುನಾಥರಾವ್ ಹಾಜರಿದ್ದರು.

Ramesh Babu

Journalist

Recent Posts

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

2 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

24 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago