Categories: ಕೋಲಾರ

ಗ್ರಾಮೀಣ ಪ್ರದೇಶಗಳಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ SFI ಮನವಿ

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ ತೆರಳಲು ಸಮರ್ಪಕವಾಗಿ ಸರ್ಕಾರಿ ಬಸ್ಸುಗಳ ಸೌಲಭ್ಯ ಕಲ್ಪಿಸಿ ಕೊಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ ಮುಳಬಾಗಿಲು ತಾಲೂಕು ಸಮಿತಿ ಘಟಕ ನಿಯಂತ್ರಣಧಿಕಾರಿ ಗಂಗಾಧರೆಡ್ಡಿ ಮುಖಾಂತರ ಘಟಕದ ವ್ಯವಸ್ಥಾಪಕರಿಗೆ ಮನವಿ ಪತ್ರ ನೀಡಲಾಯಿತು.

ಈ ಸಂದರ್ಭದಲ್ಲಿ ಎಸ್ ಎಫ್ ಐ ತಾಲೂಕು ಕಾರ್ಯದರ್ಶಿಯಾದ ಸುದರ್ಶನ್ ಮಾತನಾಡಿ, ಭಾರತ ವಿದ್ಯಾರ್ಥಿ ಫೆಡರೇಶನ್ ಹಲವು ವರ್ಷಗಳಿಂದ ಸಮರ್ಪಕವಾಗಿ ಬಸ್ ಸೌಲಭ್ಯಕ್ಕಾಗಿ ಹೋರಾಟಗಳು ನಡೆಸಿಕೊಂಡು ಬರುತ್ತಿದೆ. ಆದರೂ, ತಾಲೂಕಿನ ಗ್ರಾಮೀಣ ಪ್ರದೇಶಗಳಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಪಟ್ಟಣಕ್ಕೆ ಬರುತ್ತಿದ್ದು, ಸರಿಯಾದ ಸಮಯಕ್ಕೆ ಬಸ್ಸುಗಳ ಸೌಲಭ್ಯ ಇಲ್ಲದೆ ವಿದ್ಯಾರ್ಥಿಗಳು ಬಸ್ ಪಾಸ್ ಇದ್ದರೂ ಶಾಲಾ-ಕಾಲೇಜಿಗೆ ಸಮಯಕ್ಕೆ ಸರಿಯಾಗಿ ಬರಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪಾಲಿಟೆಕ್ನಿಕ್ ಕಾಲೇಜು ಹಾಗೂ ದೇವರಾಯ ಸಮುದ್ರ ಐಟಿಐ ಕಾಲೇಜು ಮಾರ್ಗದಲ್ಲಿ ಹೋಗುವ ಬಸ್ಸುಗಳು ಅಲ್ಲಿ ನಿಲ್ಲಿಸುತ್ತಿರುವುದಿಲ್ಲ ಹಾಗೂ ಕೋವಿಡ್ ಮುಂಚೆ ತಾಯಲೂರು ಮುಖಾಂತರ ಯಳಚೇಪಲ್ಲಿ ಗ್ರಾಮಕ್ಕೆ ಹಾಗೂ ಗುಮ್ಲಾಪುರ ಮಾರ್ಗದಿಂದ ಮೇಲ್ತಾಯಲೂರು ಗ್ರಾಮಗಳಿಗೆ ಬಸ್ಸಿನ ಸೌಲಭ್ಯವಿತ್ತು. ಆದರೆ, ಈಗ ಎಲ್ಲವನ್ನು ಮುಕ್ತಾಯಗೊಳಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ಸಮಸ್ಯೆ ಎದುರಾಗುತ್ತಿದ್ದು, ಆದಷ್ಟು ಬೇಗ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲದಿದ್ದರೆ ತಾಲೂಕು ಘಟಕದ ಮುಂದೆ ಬೃಹತ್ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಎಸ್ ಎಫ್ ಐ ತಾಲೂಕು ಅಧ್ಯಕ್ಷ ಅರ್ಚನಾ, ಉಪಾಧ್ಯಕ್ಷ ಸುಭಾಷ್ ಹಾಗೂ ಯಶ್, ಜಿಲ್ಲಾ ಸಮಿತಿ ಸದಸ್ಯರಾದ ಅಜಯ್ ಕುಮಾರ್ ಹಾಗೂ ಯಲಚೇನಹಳ್ಳಿ ವಿದ್ಯಾರ್ಥಿಗಳಾದ ವಾಸುದೇವ ರಾವ್ ತಾರುಣ್ಗಾವ್ ಮುನಿಯಪ್ಪಾದ ಪವಿತ್ರ ಬಾಯಿ ಮಂಜುನಾಥರಾವ್ ಹಾಜರಿದ್ದರು.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 hour ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

2 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

5 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

11 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

22 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago