ನಮ್ಮ ಗ್ರಾಮೀಣ ಪ್ರದೇಶದ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಯುವ ಸಮುದಾಯ ಮಹತ್ವದ ಪಾತ್ರವನ್ನು ವಹಿಸಬೇಕಾಗಿದೆ ಎಂದು ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ವೀರಾಪುರ ಗ್ರಾಮದಲ್ಲಿ ನಡೆಯುತ್ತಿರುವ ಮಾರಸಂದ್ರ ಪಿಕೆಬಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ಶಿಬಿರದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಮ್ಮ ಗ್ರಾಮೀಣರು ತಮ್ಮ ಭಾವನೆಗಳನ್ನು ಜಾನಪದ ಕಲೆ ಮತ್ತು ಸಾಹಿತ್ಯದ ಮೂಲಕ ಅಭಿವ್ಯಕ್ತಿಗೊಳಿಸಿದರು. ಇಂತಹ ಜಾನಪದ ಕಲಾವಿದರನ್ನು ಗೌರವಿಸುವ ಮತ್ತು ಪ್ರೋತ್ಸಾಹಿಸುವ ಕೆಲಸ ಆಗಬೇಕು. ಜನದರ ಕಲೆ ಮತ್ತು ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳ ಮಹತ್ವವಿದೆ ಎಂದರು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಂಡಿದೆ. “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಧ್ಯೇಯವಾಕ್ಯದ ಅಡಿಯಲ್ಲಿ ರಾಜ್ಯದ ಎಲ್ಲೆಡೆ ಕರ್ನಾಟಕ ಸುವರ್ಣ ಸಂಭ್ರಮದ ಆಚರಣೆ ನಡೆಯುತ್ತಿದೆ. ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದ್ದರೆ ಕನ್ನಡ ಎಲ್ಲೆಡೆ ಪಸರಿಸಲು ಸಾಧ್ಯವಾಗುತ್ತದೆ ಎಂದರು.
ಪ್ರಾಂಶುಪಾಲ ಎಂ.ಆನಂದ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಿಲ್ಲೊಂದು ಪ್ರತಿಭೆ ಅಡಗಿರುತ್ತದೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಅಭಿವ್ಯಕ್ತಿ ಪಡಿಸಿಕೊಂಡರೆ ಪ್ರತಿಭಾವಂತ ವ್ಯಕ್ತಿಗಳಾಗಿ ಹೊರಹೊಮ್ಮುತ್ತಾರೆ. ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ ಸಹಕಾರಿ ಆಗಲಿದೆ. ವಿದ್ಯಾರ್ಥಿಗಳು ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಪಿಕೆಬಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಎ.ಆರ್.ಗಂಗಾಧರೇಶ್ವರ, ಶಿಬಿರಾಧಿಕಾರಿ ಕೆ.ಆರ್.ಪ್ರಸನ್ನಕುಮಾರ್, ಕಲಾವಿದರುಗಳಾದ ಎಂ.ರಾಮಕೃಷ್ಣ, ಮುನಿರತ್ನಮ್ಮ, ಕನ್ನಡ ಸಾಹಿತ್ಯ ಪರಿಷತ್ತು ಪ್ರತಿನಿಧಿ ಸಫೀರ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…