ಗ್ರಾಮೀಣ ಬದುಕನ್ನು ಅರಿತುಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಹಕಾರಿ- ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್‌

ದೊಡ್ಡಬಳ್ಳಾಪುರ: ಗ್ರಾಮೀಣ ಬದುಕನ್ನು ಅರಿತುಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಸಹಕಾರಿಯಾಗಿದ್ದು, ಸೇವಾ ಮನೋಭಾವವನ್ನು ಉತ್ತೇಜಿಸುತ್ತವೆ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್‌ ಹೇಳಿದರು.

ತಾಲೂಕಿನ ತಳಗವಾರ ಗ್ರಾಮದಲ್ಲಿ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಗುರುವಾರ ಆಯೋಜಿಸಿದ್ದ 7 ದಿನಗಳ ವಿಶೇಷ ಯುವಜನ ಸೇವಾ ಶಿಬಿರದ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಶೈಕ್ಷಣಿಕವಾದ ಜ್ಞಾನವನ್ನು ಗ್ರಹಿಸುವ ಜೊತೆಗೆ ಸಾಮಾಜಿಕ ಪ್ರಜ್ಞೆಯನ್ನು ರೂಢಿಸಿಕೊಳ್ಳಲು ಇದರಿಂದ ಸಹಾಯಕವಾಗುತ್ತದೆ. ಶ್ರಮದಾನದ ಮಹತ್ವವನ್ನು ಎನ್‌ಎಸ್‌ಎಸ್‌ ವ್ಯವಸ್ಥಿತವಾಗಿ ಪ್ರತಿಪಾದಿಸುತ್ತದೆ. ಗ್ರಾಮೀಣರ ಜನಜೀವನವನ್ನು ಹತ್ತಿರದಿಂದ ನೋಡುವ ಮತ್ತು ಅದ್ಯಯನ ನಡೆಸುವ ಅವಕಾಶವನ್ನು ಕಲ್ಪಿಸುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಹಲವು ಸಾಮಾಜಿಕ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಜನರ ಆರೋಗ್ಯ, ನೈರ್ಮಲ್ಯ, ಪರಿಸರ ಸಂರಕ್ಷಣೆ, ಶೈಕ್ಷಣಿಕ ಅಭಿವೃದ್ದಿ ಸೇರಿದಂತೆ ವಿವಿಧ ವಿಚಾರಗಳನ್ನು ಆದ್ಯತೆಯನ್ನಾಗಿ ಪರಿಗಣಿಸಿ ಚಟುವಟಿಕೆಗಳನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಗ್ರಾಮದ ಮನೆಮನೆಗೂ ತೆರಳಿ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಬೇಕು. ಶ್ರಮದಾನದ ಜೊತೆಗೆ ವ್ಯಕ್ತಿತ್ವ ವಿಕಸನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಆದ್ಯತೆ ನೀಡುವುದು ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್ ಮತ್ತು ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಾಂಶುಪಾಲ ಡಾ.ಆರ್.ನಾಗರಾಜ್, ಉಪಪ್ರಾಂಶುಪಾಲ ಪ್ರೊ.ದಕ್ಷಿಣಾಮೂರ್ತಿ, ಎನ್‌ಎಸ್‌ಎಸ್‌ ಅಧಿಕಾರಿ ಕೆ.ಸಿ.ಲಕ್ಷ್ಮೀಶ, ಸಹಾಯಕ ಅಧಿಕಾರಿಗಳಾದ ವೆಂಕಟೇಶ್, ಪೂಜಾ, ಗ್ರಾಪಂ ಮಾಜಿ ಅಧ್ಯಕ್ಷ ಮುನಿಯಪ್ಪ, ಮಾಜಿ ಉಪಾಧ್ಯಕ್ಷ ಟಿ.ಎಸ್.ರುದ್ರಪ್ಪ, ತಾಪಂ ಮಾಜಿ ಸದಸ್ಯ ರೋಜಿಪುರ ಪ್ರಕಾಶ್, ಎಂಪಿಸಿಎಸ್‌ ಸದಸ್ಯ ಟಿ.ವಿ.ರವಿಕುಮಾರ್, ಗ್ರಾಪಂ ಸದಸ್ಯೆ ಅನ್ನಪೂರ್ಣ ಸುರೇಶ್, ಮುಖಂಡರಾದ ಅನಿಲ್‌ಕುಮಾರ್, ಮೈಲಾರಪ್ಪ, ಶಿವಕುಮಾರ್, ನಾಗರಾಜ, ಜಗನ್ನಾಥ್, ಹನುಮಂತರಾಯಪ್ಪ, ಸುರೇಶ್, ಶಾಲಾ ಶಿಕ್ಷಕ ಜಗನ್ನಾಥ್, ಅಂಗನವಾಡಿ ಕಾರ್ಯಕರ್ತೆ ಕೆಂಚಮ್ಮ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

7 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

8 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

10 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

11 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

11 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

13 hours ago