ಗ್ರಾಮೀಣ ಬದುಕನ್ನು ಅರಿತುಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಹಕಾರಿ- ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್‌

ದೊಡ್ಡಬಳ್ಳಾಪುರ: ಗ್ರಾಮೀಣ ಬದುಕನ್ನು ಅರಿತುಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಸಹಕಾರಿಯಾಗಿದ್ದು, ಸೇವಾ ಮನೋಭಾವವನ್ನು ಉತ್ತೇಜಿಸುತ್ತವೆ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್‌ ಹೇಳಿದರು.

ತಾಲೂಕಿನ ತಳಗವಾರ ಗ್ರಾಮದಲ್ಲಿ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಗುರುವಾರ ಆಯೋಜಿಸಿದ್ದ 7 ದಿನಗಳ ವಿಶೇಷ ಯುವಜನ ಸೇವಾ ಶಿಬಿರದ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಶೈಕ್ಷಣಿಕವಾದ ಜ್ಞಾನವನ್ನು ಗ್ರಹಿಸುವ ಜೊತೆಗೆ ಸಾಮಾಜಿಕ ಪ್ರಜ್ಞೆಯನ್ನು ರೂಢಿಸಿಕೊಳ್ಳಲು ಇದರಿಂದ ಸಹಾಯಕವಾಗುತ್ತದೆ. ಶ್ರಮದಾನದ ಮಹತ್ವವನ್ನು ಎನ್‌ಎಸ್‌ಎಸ್‌ ವ್ಯವಸ್ಥಿತವಾಗಿ ಪ್ರತಿಪಾದಿಸುತ್ತದೆ. ಗ್ರಾಮೀಣರ ಜನಜೀವನವನ್ನು ಹತ್ತಿರದಿಂದ ನೋಡುವ ಮತ್ತು ಅದ್ಯಯನ ನಡೆಸುವ ಅವಕಾಶವನ್ನು ಕಲ್ಪಿಸುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಹಲವು ಸಾಮಾಜಿಕ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಜನರ ಆರೋಗ್ಯ, ನೈರ್ಮಲ್ಯ, ಪರಿಸರ ಸಂರಕ್ಷಣೆ, ಶೈಕ್ಷಣಿಕ ಅಭಿವೃದ್ದಿ ಸೇರಿದಂತೆ ವಿವಿಧ ವಿಚಾರಗಳನ್ನು ಆದ್ಯತೆಯನ್ನಾಗಿ ಪರಿಗಣಿಸಿ ಚಟುವಟಿಕೆಗಳನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಗ್ರಾಮದ ಮನೆಮನೆಗೂ ತೆರಳಿ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಬೇಕು. ಶ್ರಮದಾನದ ಜೊತೆಗೆ ವ್ಯಕ್ತಿತ್ವ ವಿಕಸನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಆದ್ಯತೆ ನೀಡುವುದು ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್ ಮತ್ತು ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಾಂಶುಪಾಲ ಡಾ.ಆರ್.ನಾಗರಾಜ್, ಉಪಪ್ರಾಂಶುಪಾಲ ಪ್ರೊ.ದಕ್ಷಿಣಾಮೂರ್ತಿ, ಎನ್‌ಎಸ್‌ಎಸ್‌ ಅಧಿಕಾರಿ ಕೆ.ಸಿ.ಲಕ್ಷ್ಮೀಶ, ಸಹಾಯಕ ಅಧಿಕಾರಿಗಳಾದ ವೆಂಕಟೇಶ್, ಪೂಜಾ, ಗ್ರಾಪಂ ಮಾಜಿ ಅಧ್ಯಕ್ಷ ಮುನಿಯಪ್ಪ, ಮಾಜಿ ಉಪಾಧ್ಯಕ್ಷ ಟಿ.ಎಸ್.ರುದ್ರಪ್ಪ, ತಾಪಂ ಮಾಜಿ ಸದಸ್ಯ ರೋಜಿಪುರ ಪ್ರಕಾಶ್, ಎಂಪಿಸಿಎಸ್‌ ಸದಸ್ಯ ಟಿ.ವಿ.ರವಿಕುಮಾರ್, ಗ್ರಾಪಂ ಸದಸ್ಯೆ ಅನ್ನಪೂರ್ಣ ಸುರೇಶ್, ಮುಖಂಡರಾದ ಅನಿಲ್‌ಕುಮಾರ್, ಮೈಲಾರಪ್ಪ, ಶಿವಕುಮಾರ್, ನಾಗರಾಜ, ಜಗನ್ನಾಥ್, ಹನುಮಂತರಾಯಪ್ಪ, ಸುರೇಶ್, ಶಾಲಾ ಶಿಕ್ಷಕ ಜಗನ್ನಾಥ್, ಅಂಗನವಾಡಿ ಕಾರ್ಯಕರ್ತೆ ಕೆಂಚಮ್ಮ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

1 hour ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

13 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

13 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

15 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

15 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

22 hours ago