ಗ್ರಾಮೀಣ ಬದುಕನ್ನು ಅರಿತುಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಹಕಾರಿ- ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್‌

ದೊಡ್ಡಬಳ್ಳಾಪುರ: ಗ್ರಾಮೀಣ ಬದುಕನ್ನು ಅರಿತುಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಸಹಕಾರಿಯಾಗಿದ್ದು, ಸೇವಾ ಮನೋಭಾವವನ್ನು ಉತ್ತೇಜಿಸುತ್ತವೆ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್‌ ಹೇಳಿದರು.

ತಾಲೂಕಿನ ತಳಗವಾರ ಗ್ರಾಮದಲ್ಲಿ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಗುರುವಾರ ಆಯೋಜಿಸಿದ್ದ 7 ದಿನಗಳ ವಿಶೇಷ ಯುವಜನ ಸೇವಾ ಶಿಬಿರದ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಶೈಕ್ಷಣಿಕವಾದ ಜ್ಞಾನವನ್ನು ಗ್ರಹಿಸುವ ಜೊತೆಗೆ ಸಾಮಾಜಿಕ ಪ್ರಜ್ಞೆಯನ್ನು ರೂಢಿಸಿಕೊಳ್ಳಲು ಇದರಿಂದ ಸಹಾಯಕವಾಗುತ್ತದೆ. ಶ್ರಮದಾನದ ಮಹತ್ವವನ್ನು ಎನ್‌ಎಸ್‌ಎಸ್‌ ವ್ಯವಸ್ಥಿತವಾಗಿ ಪ್ರತಿಪಾದಿಸುತ್ತದೆ. ಗ್ರಾಮೀಣರ ಜನಜೀವನವನ್ನು ಹತ್ತಿರದಿಂದ ನೋಡುವ ಮತ್ತು ಅದ್ಯಯನ ನಡೆಸುವ ಅವಕಾಶವನ್ನು ಕಲ್ಪಿಸುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಹಲವು ಸಾಮಾಜಿಕ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಜನರ ಆರೋಗ್ಯ, ನೈರ್ಮಲ್ಯ, ಪರಿಸರ ಸಂರಕ್ಷಣೆ, ಶೈಕ್ಷಣಿಕ ಅಭಿವೃದ್ದಿ ಸೇರಿದಂತೆ ವಿವಿಧ ವಿಚಾರಗಳನ್ನು ಆದ್ಯತೆಯನ್ನಾಗಿ ಪರಿಗಣಿಸಿ ಚಟುವಟಿಕೆಗಳನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಗ್ರಾಮದ ಮನೆಮನೆಗೂ ತೆರಳಿ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಬೇಕು. ಶ್ರಮದಾನದ ಜೊತೆಗೆ ವ್ಯಕ್ತಿತ್ವ ವಿಕಸನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಆದ್ಯತೆ ನೀಡುವುದು ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್ ಮತ್ತು ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಾಂಶುಪಾಲ ಡಾ.ಆರ್.ನಾಗರಾಜ್, ಉಪಪ್ರಾಂಶುಪಾಲ ಪ್ರೊ.ದಕ್ಷಿಣಾಮೂರ್ತಿ, ಎನ್‌ಎಸ್‌ಎಸ್‌ ಅಧಿಕಾರಿ ಕೆ.ಸಿ.ಲಕ್ಷ್ಮೀಶ, ಸಹಾಯಕ ಅಧಿಕಾರಿಗಳಾದ ವೆಂಕಟೇಶ್, ಪೂಜಾ, ಗ್ರಾಪಂ ಮಾಜಿ ಅಧ್ಯಕ್ಷ ಮುನಿಯಪ್ಪ, ಮಾಜಿ ಉಪಾಧ್ಯಕ್ಷ ಟಿ.ಎಸ್.ರುದ್ರಪ್ಪ, ತಾಪಂ ಮಾಜಿ ಸದಸ್ಯ ರೋಜಿಪುರ ಪ್ರಕಾಶ್, ಎಂಪಿಸಿಎಸ್‌ ಸದಸ್ಯ ಟಿ.ವಿ.ರವಿಕುಮಾರ್, ಗ್ರಾಪಂ ಸದಸ್ಯೆ ಅನ್ನಪೂರ್ಣ ಸುರೇಶ್, ಮುಖಂಡರಾದ ಅನಿಲ್‌ಕುಮಾರ್, ಮೈಲಾರಪ್ಪ, ಶಿವಕುಮಾರ್, ನಾಗರಾಜ, ಜಗನ್ನಾಥ್, ಹನುಮಂತರಾಯಪ್ಪ, ಸುರೇಶ್, ಶಾಲಾ ಶಿಕ್ಷಕ ಜಗನ್ನಾಥ್, ಅಂಗನವಾಡಿ ಕಾರ್ಯಕರ್ತೆ ಕೆಂಚಮ್ಮ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

8 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

12 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

19 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

20 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago