ಗ್ರಾಮೀಣ ಬದುಕನ್ನು ಅರಿತುಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಹಕಾರಿ- ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್‌

ದೊಡ್ಡಬಳ್ಳಾಪುರ: ಗ್ರಾಮೀಣ ಬದುಕನ್ನು ಅರಿತುಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಸಹಕಾರಿಯಾಗಿದ್ದು, ಸೇವಾ ಮನೋಭಾವವನ್ನು ಉತ್ತೇಜಿಸುತ್ತವೆ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್‌ ಹೇಳಿದರು.

ತಾಲೂಕಿನ ತಳಗವಾರ ಗ್ರಾಮದಲ್ಲಿ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಗುರುವಾರ ಆಯೋಜಿಸಿದ್ದ 7 ದಿನಗಳ ವಿಶೇಷ ಯುವಜನ ಸೇವಾ ಶಿಬಿರದ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಶೈಕ್ಷಣಿಕವಾದ ಜ್ಞಾನವನ್ನು ಗ್ರಹಿಸುವ ಜೊತೆಗೆ ಸಾಮಾಜಿಕ ಪ್ರಜ್ಞೆಯನ್ನು ರೂಢಿಸಿಕೊಳ್ಳಲು ಇದರಿಂದ ಸಹಾಯಕವಾಗುತ್ತದೆ. ಶ್ರಮದಾನದ ಮಹತ್ವವನ್ನು ಎನ್‌ಎಸ್‌ಎಸ್‌ ವ್ಯವಸ್ಥಿತವಾಗಿ ಪ್ರತಿಪಾದಿಸುತ್ತದೆ. ಗ್ರಾಮೀಣರ ಜನಜೀವನವನ್ನು ಹತ್ತಿರದಿಂದ ನೋಡುವ ಮತ್ತು ಅದ್ಯಯನ ನಡೆಸುವ ಅವಕಾಶವನ್ನು ಕಲ್ಪಿಸುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಹಲವು ಸಾಮಾಜಿಕ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಜನರ ಆರೋಗ್ಯ, ನೈರ್ಮಲ್ಯ, ಪರಿಸರ ಸಂರಕ್ಷಣೆ, ಶೈಕ್ಷಣಿಕ ಅಭಿವೃದ್ದಿ ಸೇರಿದಂತೆ ವಿವಿಧ ವಿಚಾರಗಳನ್ನು ಆದ್ಯತೆಯನ್ನಾಗಿ ಪರಿಗಣಿಸಿ ಚಟುವಟಿಕೆಗಳನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಗ್ರಾಮದ ಮನೆಮನೆಗೂ ತೆರಳಿ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಬೇಕು. ಶ್ರಮದಾನದ ಜೊತೆಗೆ ವ್ಯಕ್ತಿತ್ವ ವಿಕಸನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಆದ್ಯತೆ ನೀಡುವುದು ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್ ಮತ್ತು ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಾಂಶುಪಾಲ ಡಾ.ಆರ್.ನಾಗರಾಜ್, ಉಪಪ್ರಾಂಶುಪಾಲ ಪ್ರೊ.ದಕ್ಷಿಣಾಮೂರ್ತಿ, ಎನ್‌ಎಸ್‌ಎಸ್‌ ಅಧಿಕಾರಿ ಕೆ.ಸಿ.ಲಕ್ಷ್ಮೀಶ, ಸಹಾಯಕ ಅಧಿಕಾರಿಗಳಾದ ವೆಂಕಟೇಶ್, ಪೂಜಾ, ಗ್ರಾಪಂ ಮಾಜಿ ಅಧ್ಯಕ್ಷ ಮುನಿಯಪ್ಪ, ಮಾಜಿ ಉಪಾಧ್ಯಕ್ಷ ಟಿ.ಎಸ್.ರುದ್ರಪ್ಪ, ತಾಪಂ ಮಾಜಿ ಸದಸ್ಯ ರೋಜಿಪುರ ಪ್ರಕಾಶ್, ಎಂಪಿಸಿಎಸ್‌ ಸದಸ್ಯ ಟಿ.ವಿ.ರವಿಕುಮಾರ್, ಗ್ರಾಪಂ ಸದಸ್ಯೆ ಅನ್ನಪೂರ್ಣ ಸುರೇಶ್, ಮುಖಂಡರಾದ ಅನಿಲ್‌ಕುಮಾರ್, ಮೈಲಾರಪ್ಪ, ಶಿವಕುಮಾರ್, ನಾಗರಾಜ, ಜಗನ್ನಾಥ್, ಹನುಮಂತರಾಯಪ್ಪ, ಸುರೇಶ್, ಶಾಲಾ ಶಿಕ್ಷಕ ಜಗನ್ನಾಥ್, ಅಂಗನವಾಡಿ ಕಾರ್ಯಕರ್ತೆ ಕೆಂಚಮ್ಮ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

7 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

10 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

23 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

24 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago