ದೊಡ್ಡಬಳ್ಳಾಪುರ: ನಗರದ ಪ್ರದೇಶಗಳಲ್ಲಿ ನಡೆಯುತ್ತಿದ್ದ ಜೂಜಾಟ ಇತ್ತೀಚೆಗೆ ಗ್ರಾಮೀಣ ಪ್ರದೇಶಗಳಿಗೂ ಹಬ್ಬುತ್ತಿದೆ. ಜೂಜುಕೋರರ ಹಾವಳಿ ಮಿತಿ ಮೀರಿದ್ದು, ನಗರ ಕೇಂದ್ರಿತವಾಗಿದ್ದ ಜೂಜು ಅಡ್ಡೆಗಳು ಈಗ ಗ್ರಾಮಾಂತರ ಪ್ರದೇಶಗಳಲ್ಲಿ ತಮ್ಮ ಜಾಲ ಹಬ್ಬಿದೆ.
ತಾಲೂಕಿನ ಮೆಳೆಕೋಟೆ, ರಾಜಘಟ್ಟ, ರಾಮಯ್ಯನಪಾಳ್ಯ, ಮೇಡಿಹಳ್ಳಿ ಹಾಗೂ ಜಕ್ಕಲಮಡಗು ರಸ್ತೆಗಳ ತೋಟದ ಮನೆಗಳು, ನೀಲಗಿರಿ ತೋಪುಗಳು ಜೂಜುಕೋರರ ಉಪಟಳದಿಂದ ನಲುಗುತ್ತಿವೆ ಎಂಬ ದೂರುಗಳು ಕೇಳಿಬಂದಿವೆ.
ಇಸ್ಪೀಟ್, ಮಟ್ಕಾ, ಬೆಟ್ಟಿಂಗ್ ದಂಧೆಗೆ ಗ್ರಾಮೀಣ ಭಾಗದ ಯುವಜನರೇ ಹೆಚ್ಚು ದಾಸರಾಗುತ್ತಿದ್ದು, ಜೂಜಾಟಕ್ಕೆ ಬಲಿಯಾದ ಕುಟುಂಬಗಳು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕೂಲಿ ಕಾರ್ಮಿಕರು ದಿನವಿಡೀ ಬೆವರು ಹರಿಸಿ ದುಡಿದ ಹಣವನ್ನು ಕ್ಷಣಾರ್ಧದಲ್ಲಿ ಜೂಜಿಗೆ ಬಳಸಿ ಖಾಲಿ ಕೈಯಲ್ಲಿ ಮನೆಗೆ ತೆರಳುವಂತಾಗಿದೆ. ಚಟಕ್ಕೆ ಬಿದ್ದ ಬಹುತೇಕರು ತೋಟ, ಮನೆ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ.
ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ತಲೆ ಎತ್ತಿರುವ ಜೂಜು ಅಡ್ಡೆಗಳಿಗೆ ಯಲಹಂಕ, ವಿಜಯಪುರ, ದೇವನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ತಾಲೂಕುಗಳಿಂದ ಜೂಜು ಕೋರರು ಬರುತ್ತಾರೆ. ತೋಟದ ಮನೆ, ನೀಲಗಿರಿ ತೋಪುಗಳಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಜೂಜಾಟಕ್ಕೆ ಪೊಲೀಸರು ಕೂಡಲೇ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಗ್ರಾಮಾಂತರ ಪ್ರದೇಶದ ಜೂಜು ಅಡ್ಡೆಗಳ ಮೇಲೆ ಪೊಲೀಸರು ನಿಯಮಿತವಾಗಿ ದಾಳಿ ನಡೆಸಿದರೂ ತಹಬದಿಗೆ ಬಂದಿಲ್ಲ. ಪೊಲೀಸರು ಪರಿಣಾಮಕಾರಿ ಗಸ್ತು ವ್ಯವಸ್ಥೆ ಮಾಡಿದರೆ ಸಾಕಷ್ಟು ಕುಟುಂಬಗಳು ಬಚಾವಾಗಲಿವೆ ಎಂಬುದು ಗ್ರಾಮೀಣ ಭಾಗದ ಜನರ ಅಭಿಪ್ರಾಯವಾಗಿದೆ.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…