ದೊಡ್ಡಬಳ್ಳಾಪುರ: ನಗರದ ಪ್ರದೇಶಗಳಲ್ಲಿ ನಡೆಯುತ್ತಿದ್ದ ಜೂಜಾಟ ಇತ್ತೀಚೆಗೆ ಗ್ರಾಮೀಣ ಪ್ರದೇಶಗಳಿಗೂ ಹಬ್ಬುತ್ತಿದೆ. ಜೂಜುಕೋರರ ಹಾವಳಿ ಮಿತಿ ಮೀರಿದ್ದು, ನಗರ ಕೇಂದ್ರಿತವಾಗಿದ್ದ ಜೂಜು ಅಡ್ಡೆಗಳು ಈಗ ಗ್ರಾಮಾಂತರ ಪ್ರದೇಶಗಳಲ್ಲಿ ತಮ್ಮ ಜಾಲ ಹಬ್ಬಿದೆ.
ತಾಲೂಕಿನ ಮೆಳೆಕೋಟೆ, ರಾಜಘಟ್ಟ, ರಾಮಯ್ಯನಪಾಳ್ಯ, ಮೇಡಿಹಳ್ಳಿ ಹಾಗೂ ಜಕ್ಕಲಮಡಗು ರಸ್ತೆಗಳ ತೋಟದ ಮನೆಗಳು, ನೀಲಗಿರಿ ತೋಪುಗಳು ಜೂಜುಕೋರರ ಉಪಟಳದಿಂದ ನಲುಗುತ್ತಿವೆ ಎಂಬ ದೂರುಗಳು ಕೇಳಿಬಂದಿವೆ.
ಇಸ್ಪೀಟ್, ಮಟ್ಕಾ, ಬೆಟ್ಟಿಂಗ್ ದಂಧೆಗೆ ಗ್ರಾಮೀಣ ಭಾಗದ ಯುವಜನರೇ ಹೆಚ್ಚು ದಾಸರಾಗುತ್ತಿದ್ದು, ಜೂಜಾಟಕ್ಕೆ ಬಲಿಯಾದ ಕುಟುಂಬಗಳು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕೂಲಿ ಕಾರ್ಮಿಕರು ದಿನವಿಡೀ ಬೆವರು ಹರಿಸಿ ದುಡಿದ ಹಣವನ್ನು ಕ್ಷಣಾರ್ಧದಲ್ಲಿ ಜೂಜಿಗೆ ಬಳಸಿ ಖಾಲಿ ಕೈಯಲ್ಲಿ ಮನೆಗೆ ತೆರಳುವಂತಾಗಿದೆ. ಚಟಕ್ಕೆ ಬಿದ್ದ ಬಹುತೇಕರು ತೋಟ, ಮನೆ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ.
ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ತಲೆ ಎತ್ತಿರುವ ಜೂಜು ಅಡ್ಡೆಗಳಿಗೆ ಯಲಹಂಕ, ವಿಜಯಪುರ, ದೇವನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ತಾಲೂಕುಗಳಿಂದ ಜೂಜು ಕೋರರು ಬರುತ್ತಾರೆ. ತೋಟದ ಮನೆ, ನೀಲಗಿರಿ ತೋಪುಗಳಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಜೂಜಾಟಕ್ಕೆ ಪೊಲೀಸರು ಕೂಡಲೇ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಗ್ರಾಮಾಂತರ ಪ್ರದೇಶದ ಜೂಜು ಅಡ್ಡೆಗಳ ಮೇಲೆ ಪೊಲೀಸರು ನಿಯಮಿತವಾಗಿ ದಾಳಿ ನಡೆಸಿದರೂ ತಹಬದಿಗೆ ಬಂದಿಲ್ಲ. ಪೊಲೀಸರು ಪರಿಣಾಮಕಾರಿ ಗಸ್ತು ವ್ಯವಸ್ಥೆ ಮಾಡಿದರೆ ಸಾಕಷ್ಟು ಕುಟುಂಬಗಳು ಬಚಾವಾಗಲಿವೆ ಎಂಬುದು ಗ್ರಾಮೀಣ ಭಾಗದ ಜನರ ಅಭಿಪ್ರಾಯವಾಗಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…