ದೊಡ್ಡಬಳ್ಳಾಪುರ: ನಗರದ ಪ್ರದೇಶಗಳಲ್ಲಿ ನಡೆಯುತ್ತಿದ್ದ ಜೂಜಾಟ ಇತ್ತೀಚೆಗೆ ಗ್ರಾಮೀಣ ಪ್ರದೇಶಗಳಿಗೂ ಹಬ್ಬುತ್ತಿದೆ. ಜೂಜುಕೋರರ ಹಾವಳಿ ಮಿತಿ ಮೀರಿದ್ದು, ನಗರ ಕೇಂದ್ರಿತವಾಗಿದ್ದ ಜೂಜು ಅಡ್ಡೆಗಳು ಈಗ ಗ್ರಾಮಾಂತರ ಪ್ರದೇಶಗಳಲ್ಲಿ ತಮ್ಮ ಜಾಲ ಹಬ್ಬಿದೆ.
ತಾಲೂಕಿನ ಮೆಳೆಕೋಟೆ, ರಾಜಘಟ್ಟ, ರಾಮಯ್ಯನಪಾಳ್ಯ, ಮೇಡಿಹಳ್ಳಿ ಹಾಗೂ ಜಕ್ಕಲಮಡಗು ರಸ್ತೆಗಳ ತೋಟದ ಮನೆಗಳು, ನೀಲಗಿರಿ ತೋಪುಗಳು ಜೂಜುಕೋರರ ಉಪಟಳದಿಂದ ನಲುಗುತ್ತಿವೆ ಎಂಬ ದೂರುಗಳು ಕೇಳಿಬಂದಿವೆ.
ಇಸ್ಪೀಟ್, ಮಟ್ಕಾ, ಬೆಟ್ಟಿಂಗ್ ದಂಧೆಗೆ ಗ್ರಾಮೀಣ ಭಾಗದ ಯುವಜನರೇ ಹೆಚ್ಚು ದಾಸರಾಗುತ್ತಿದ್ದು, ಜೂಜಾಟಕ್ಕೆ ಬಲಿಯಾದ ಕುಟುಂಬಗಳು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕೂಲಿ ಕಾರ್ಮಿಕರು ದಿನವಿಡೀ ಬೆವರು ಹರಿಸಿ ದುಡಿದ ಹಣವನ್ನು ಕ್ಷಣಾರ್ಧದಲ್ಲಿ ಜೂಜಿಗೆ ಬಳಸಿ ಖಾಲಿ ಕೈಯಲ್ಲಿ ಮನೆಗೆ ತೆರಳುವಂತಾಗಿದೆ. ಚಟಕ್ಕೆ ಬಿದ್ದ ಬಹುತೇಕರು ತೋಟ, ಮನೆ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ.
ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ತಲೆ ಎತ್ತಿರುವ ಜೂಜು ಅಡ್ಡೆಗಳಿಗೆ ಯಲಹಂಕ, ವಿಜಯಪುರ, ದೇವನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ತಾಲೂಕುಗಳಿಂದ ಜೂಜು ಕೋರರು ಬರುತ್ತಾರೆ. ತೋಟದ ಮನೆ, ನೀಲಗಿರಿ ತೋಪುಗಳಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಜೂಜಾಟಕ್ಕೆ ಪೊಲೀಸರು ಕೂಡಲೇ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಗ್ರಾಮಾಂತರ ಪ್ರದೇಶದ ಜೂಜು ಅಡ್ಡೆಗಳ ಮೇಲೆ ಪೊಲೀಸರು ನಿಯಮಿತವಾಗಿ ದಾಳಿ ನಡೆಸಿದರೂ ತಹಬದಿಗೆ ಬಂದಿಲ್ಲ. ಪೊಲೀಸರು ಪರಿಣಾಮಕಾರಿ ಗಸ್ತು ವ್ಯವಸ್ಥೆ ಮಾಡಿದರೆ ಸಾಕಷ್ಟು ಕುಟುಂಬಗಳು ಬಚಾವಾಗಲಿವೆ ಎಂಬುದು ಗ್ರಾಮೀಣ ಭಾಗದ ಜನರ ಅಭಿಪ್ರಾಯವಾಗಿದೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…