ದೊಡ್ಡಬಳ್ಳಾಪುರ: ನಗರದ ಪ್ರದೇಶಗಳಲ್ಲಿ ನಡೆಯುತ್ತಿದ್ದ ಜೂಜಾಟ ಇತ್ತೀಚೆಗೆ ಗ್ರಾಮೀಣ ಪ್ರದೇಶಗಳಿಗೂ ಹಬ್ಬುತ್ತಿದೆ. ಜೂಜುಕೋರರ ಹಾವಳಿ ಮಿತಿ ಮೀರಿದ್ದು, ನಗರ ಕೇಂದ್ರಿತವಾಗಿದ್ದ ಜೂಜು ಅಡ್ಡೆಗಳು ಈಗ ಗ್ರಾಮಾಂತರ ಪ್ರದೇಶಗಳಲ್ಲಿ ತಮ್ಮ ಜಾಲ ಹಬ್ಬಿದೆ.
ತಾಲೂಕಿನ ಮೆಳೆಕೋಟೆ, ರಾಜಘಟ್ಟ, ರಾಮಯ್ಯನಪಾಳ್ಯ, ಮೇಡಿಹಳ್ಳಿ ಹಾಗೂ ಜಕ್ಕಲಮಡಗು ರಸ್ತೆಗಳ ತೋಟದ ಮನೆಗಳು, ನೀಲಗಿರಿ ತೋಪುಗಳು ಜೂಜುಕೋರರ ಉಪಟಳದಿಂದ ನಲುಗುತ್ತಿವೆ ಎಂಬ ದೂರುಗಳು ಕೇಳಿಬಂದಿವೆ.
ಇಸ್ಪೀಟ್, ಮಟ್ಕಾ, ಬೆಟ್ಟಿಂಗ್ ದಂಧೆಗೆ ಗ್ರಾಮೀಣ ಭಾಗದ ಯುವಜನರೇ ಹೆಚ್ಚು ದಾಸರಾಗುತ್ತಿದ್ದು, ಜೂಜಾಟಕ್ಕೆ ಬಲಿಯಾದ ಕುಟುಂಬಗಳು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕೂಲಿ ಕಾರ್ಮಿಕರು ದಿನವಿಡೀ ಬೆವರು ಹರಿಸಿ ದುಡಿದ ಹಣವನ್ನು ಕ್ಷಣಾರ್ಧದಲ್ಲಿ ಜೂಜಿಗೆ ಬಳಸಿ ಖಾಲಿ ಕೈಯಲ್ಲಿ ಮನೆಗೆ ತೆರಳುವಂತಾಗಿದೆ. ಚಟಕ್ಕೆ ಬಿದ್ದ ಬಹುತೇಕರು ತೋಟ, ಮನೆ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ.
ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ತಲೆ ಎತ್ತಿರುವ ಜೂಜು ಅಡ್ಡೆಗಳಿಗೆ ಯಲಹಂಕ, ವಿಜಯಪುರ, ದೇವನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ತಾಲೂಕುಗಳಿಂದ ಜೂಜು ಕೋರರು ಬರುತ್ತಾರೆ. ತೋಟದ ಮನೆ, ನೀಲಗಿರಿ ತೋಪುಗಳಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಜೂಜಾಟಕ್ಕೆ ಪೊಲೀಸರು ಕೂಡಲೇ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಗ್ರಾಮಾಂತರ ಪ್ರದೇಶದ ಜೂಜು ಅಡ್ಡೆಗಳ ಮೇಲೆ ಪೊಲೀಸರು ನಿಯಮಿತವಾಗಿ ದಾಳಿ ನಡೆಸಿದರೂ ತಹಬದಿಗೆ ಬಂದಿಲ್ಲ. ಪೊಲೀಸರು ಪರಿಣಾಮಕಾರಿ ಗಸ್ತು ವ್ಯವಸ್ಥೆ ಮಾಡಿದರೆ ಸಾಕಷ್ಟು ಕುಟುಂಬಗಳು ಬಚಾವಾಗಲಿವೆ ಎಂಬುದು ಗ್ರಾಮೀಣ ಭಾಗದ ಜನರ ಅಭಿಪ್ರಾಯವಾಗಿದೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…