ಗ್ರಾಮ ಪಂಚಾಯತಿ ಅಧ್ಯಕ್ಷ ಮನವಿ ಮೇರೆಗೆ ಧರಣಿ ಮುಂದೂಡಿದ ವಕೀಲ ಹುಲುಕುಂಟೆ ಮಹೇಶ್

ಹುಲುಕುಂಟೆ ಗ್ರಾಮ ಪಂಚಾಯತಿ ಮುಂದೆ ಏಕಾಂಗಿಯಾಗಿ ಧರಣಿ ಆರಂಭಿಸಿದ್ದ ಪತ್ರಿಕಾ ವಿತರಕ ಹಾಗೂ ವಕೀಲರಾದ ಹುಲುಕುಂಟೆ ಮಹೇಶ ಅವರು ಧರಣಿ ಆರಂಭಿಸುತ್ತಿದ್ದಂತೆಯೇ ಆಗಮಿಸಿದ ಹುಲುಕುಂಟೆ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರುಗಳು ಫೆಬ್ರವರಿ ಅಂತ್ಯದ ವೇಳೆಗೆ ಆಂಜನೇಯ ಸ್ವಾಮಿ ಇನಾಮ್ತ ಜಮೀನು ಹಾಗೂ ಸರ್ವೆ ನಂ.162 ರಲ್ಲಿ ಕಟ್ಟಿಕೊಂಡಿರುವ ಮನೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಕಾರಣ ಧರಣಿಯನ್ನು ಸದ್ಯ ನಿಲ್ಲಿಸಲಾಗಿದೆ.

ಫೆಬ್ರುವರಿ 28 ರೊಳಗೆ ಕ್ರಮ ಕೈಗೊಳ್ಳದಿದ್ದರೆ ಮಾರ್ಚ್ 1 ರಿಂದ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ವಕೀಲರ ಸಂಘ, ಮಾನವ ಹಕ್ಕುಗಳ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ದೊಡ್ಡ ಮಟ್ಟದ ಧರಣಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹುಲುಕುಂಟೆ ಮಹೇಶ ಅವರು ತಿಳಿಸಿದ್ದಾರೆ.

ಗ್ರಾಮ ಪಂಚಾಯ್ತಿ ಅಧ್ಯಕ್ಷ ಚಿಕ್ಕೀರಪ್ಪ ಮಾತನಾಡಿ, ಮಹೇಶ್ ಅವರ ಬೇಡಿಕೆಗಳು ನ್ಯಾಯಯುತವಾಗಿದ್ದು, ಹೊಸ ದಿಶಾಂಕ್ ಅಪ್ಲಿಕೇಷನ್ ಇಂದ ಸಮಸ್ಯೆ ಆಗಿದೆ. ಇದನ್ನು ಸರಿಪಡಿಸಲು ದೊಡ್ಡಬಳ್ಳಾಪುರ ತಹಶೀಲ್ದಾರ್ ಹಾಗೂ ಸರ್ವೇಯರ್ ರವರಿಗೆ ಅನೇಕ ಬಾರಿ ಮನವಿ ಮಾಡಿದರೂ ಕ್ರಮ ಕೈಗೊಳ್ಳದ ಕಾರಣ ಸಮಸ್ಯೆ ಉದ್ಭವವಾಗಿದೆ. ಸಚಿವರ ಮೂಲಕ ತಹಶೀಲ್ದಾರ್  ಗಮನಕ್ಕೆ ವಿಷಯ ತಂದು ಫೆಬ್ರವರಿ ಅಂತ್ಯದೊಳಗೆ ಸಮಸ್ಯೆ ಪರಿಹರಿಸಲಾಗುವುದು ಎಂದರು.

ಸ್ಥಳದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಗೀತಾ, ಸದಸ್ಯರಾದ ಸವಿತ, ಕೆಂಪವೆಂಕಟಯ್ಯ, ಮೂರ್ತಿ, ಗ್ರಾಮಸ್ಥರಾದ ಶಿವಕುಮಾರ್, ಕುಮಾರ್, ಮುನಿರಾಜು, ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

9 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

11 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

14 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

15 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

16 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

22 hours ago