ಹುಲುಕುಂಟೆ ಗ್ರಾಮ ಪಂಚಾಯತಿ ಮುಂದೆ ಏಕಾಂಗಿಯಾಗಿ ಧರಣಿ ಆರಂಭಿಸಿದ್ದ ಪತ್ರಿಕಾ ವಿತರಕ ಹಾಗೂ ವಕೀಲರಾದ ಹುಲುಕುಂಟೆ ಮಹೇಶ ಅವರು ಧರಣಿ ಆರಂಭಿಸುತ್ತಿದ್ದಂತೆಯೇ ಆಗಮಿಸಿದ ಹುಲುಕುಂಟೆ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರುಗಳು ಫೆಬ್ರವರಿ ಅಂತ್ಯದ ವೇಳೆಗೆ ಆಂಜನೇಯ ಸ್ವಾಮಿ ಇನಾಮ್ತ ಜಮೀನು ಹಾಗೂ ಸರ್ವೆ ನಂ.162 ರಲ್ಲಿ ಕಟ್ಟಿಕೊಂಡಿರುವ ಮನೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಕಾರಣ ಧರಣಿಯನ್ನು ಸದ್ಯ ನಿಲ್ಲಿಸಲಾಗಿದೆ.
ಫೆಬ್ರುವರಿ 28 ರೊಳಗೆ ಕ್ರಮ ಕೈಗೊಳ್ಳದಿದ್ದರೆ ಮಾರ್ಚ್ 1 ರಿಂದ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ವಕೀಲರ ಸಂಘ, ಮಾನವ ಹಕ್ಕುಗಳ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ದೊಡ್ಡ ಮಟ್ಟದ ಧರಣಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹುಲುಕುಂಟೆ ಮಹೇಶ ಅವರು ತಿಳಿಸಿದ್ದಾರೆ.
ಗ್ರಾಮ ಪಂಚಾಯ್ತಿ ಅಧ್ಯಕ್ಷ ಚಿಕ್ಕೀರಪ್ಪ ಮಾತನಾಡಿ, ಮಹೇಶ್ ಅವರ ಬೇಡಿಕೆಗಳು ನ್ಯಾಯಯುತವಾಗಿದ್ದು, ಹೊಸ ದಿಶಾಂಕ್ ಅಪ್ಲಿಕೇಷನ್ ಇಂದ ಸಮಸ್ಯೆ ಆಗಿದೆ. ಇದನ್ನು ಸರಿಪಡಿಸಲು ದೊಡ್ಡಬಳ್ಳಾಪುರ ತಹಶೀಲ್ದಾರ್ ಹಾಗೂ ಸರ್ವೇಯರ್ ರವರಿಗೆ ಅನೇಕ ಬಾರಿ ಮನವಿ ಮಾಡಿದರೂ ಕ್ರಮ ಕೈಗೊಳ್ಳದ ಕಾರಣ ಸಮಸ್ಯೆ ಉದ್ಭವವಾಗಿದೆ. ಸಚಿವರ ಮೂಲಕ ತಹಶೀಲ್ದಾರ್ ಗಮನಕ್ಕೆ ವಿಷಯ ತಂದು ಫೆಬ್ರವರಿ ಅಂತ್ಯದೊಳಗೆ ಸಮಸ್ಯೆ ಪರಿಹರಿಸಲಾಗುವುದು ಎಂದರು.
ಸ್ಥಳದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಗೀತಾ, ಸದಸ್ಯರಾದ ಸವಿತ, ಕೆಂಪವೆಂಕಟಯ್ಯ, ಮೂರ್ತಿ, ಗ್ರಾಮಸ್ಥರಾದ ಶಿವಕುಮಾರ್, ಕುಮಾರ್, ಮುನಿರಾಜು, ಮುಂತಾದವರು ಉಪಸ್ಥಿತರಿದ್ದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…