Categories: ಬೆಳಗಾವಿ

ಗ್ರಾಮ ಪಂಚಾಯತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶಗಳ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಿಸಲಾಗುವುದು :-ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಇಂದು ವಿಧಾನ ಪರಿಷತ್ ನಲ್ಲಿ ವಿರೋಧ ಪಕ್ಷದ ಸದಸ್ಯರು  ರಾಜ್ಯದಲ್ಲಿನ ಬಿಪಿಎಲ್ ಪಡಿತರ ಕಾರ್ಡ್ ರದ್ದು ಕುರಿತು  ಕೇಳಿದ ಪ್ರಶ್ನೆಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಎಚ್ ಮುನಿಯಪ್ಪ ಉತ್ತರಿಸಿದರು.

ಪಡಿತರ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡಲು ನಾವು ಮುಂದಾದಾಗ ಕೇಂದ್ರ ಸರ್ಕಾರದ ಮಾನದಂಡಗಳ ಅಡಿಯಲ್ಲಿಯೇ ನಾವು ಪರಿಷ್ಕರಣೆ ಮಾಡಲು ಹೋಗಿದ್ದು ಕೆಲವು ಗೊಂದಲಗಳಿಂದ ನಾವು ಅದನ್ನು ತಡೆಹಿಡಿದಿದ್ದೀವಿ.

ಅರ್ಹರ ಬಿಪಿಎಲ್ ಪಡಿತರ ಕಾರ್ಡ್ ದಾರರ ಯಾವುದೇ ಕಾರ್ಡ್ ಗಳು ರದ್ದಾಗದಂತೆ ಅಧಿಕಾರಿಗಳಿಗೆ ಸೂಚಿಸಿ ರದ್ದಾದ ಬಿಪಿಎಲ್ ಕಾರ್ಡ್ ಗಳನ್ನು ಪುನರ್ ಸ್ಥಾಪಿಸಲಾಯಿತು.

ಆದರೂ, ಪ್ರಸ್ತುತ ಬಿಪಿಎಲ್ ಪಡಿತರ ಕಾರ್ಡ್ ಗಳಲ್ಲಿ ಅನರ್ಹ ಫಲಾನುಭವಿಗಳ ಪತ್ತೆಹಚ್ಚಲು ಗ್ರಾಮ ಪಂಚಾಯತಿ ಮಟ್ಟದಲ್ಲಿ ನಮ್ಮ ಅಧಿಕಾರಿಗಳು ಪರಿಪಕ್ವವಾದ ಅಂಕಿ ಅಂಶಗಳನ್ನು ಗುರುತಿಸಿ ನಂತರ ಅರ್ಹರಿಗೆ  ಬಿಪಿಎಲ್ ಪಡಿತರ ಕಾರ್ಡ್ ವಿತರಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಪ್ರಸ್ತುತ ಈಗಿರುವ ಬಿಪಿಎಲ್ ಕಾರ್ಡ್ ಗಳಲ್ಲಿ ಶೇಕಡಾ 20 ರಷ್ಟು ಕಾರ್ಡ್ ಗಳು ಎಪಿಎಲ್ ನವರು ಸೇರಿದ್ದಾರೆ ಎಂದು ಅಂದಾಜಿಸಲಾಗಿದ್ದು ಇದನ್ನು ಅತಿ ಶೀಘ್ರದಲ್ಲಿ ಪರಿಷ್ಕರಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ ಎಂದರು.

ರಾಜ್ಯದಲ್ಲಿ ಸುಮಾರು ಶೇಕಡ 65%. ರಿಂದ 75% ರಷ್ಟು ಜನಸಂಖ್ಯೆಗೆ  ಬಡತನ ರೇಖೆಗಿಂತ ಕೆಳಗಿರುವಂತೆ ಕಾರ್ಡ್ ಗಳನ್ನು ನೀಡಲಾಗಿದ್ದು ಅದನ್ನು ಪರಿಷ್ಕರಿಸಿಲಾಗುತ್ತಿದ್ದು  ಈ ಪ್ರಕ್ರಿಯೆ ಪೂರ್ಣ ಗೊಂಡ ನಂತರ ನಿಜವಾದ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ ತೊಂದರೆಯಾಗದಂತೆ ಜಾಗ್ರತೆ ವಹಿಸಿ  ನೀಡಲಾಗುವುದು ಎಂದು ಸದನದಲ್ಲಿ ಉತ್ತರಿಸಿದರು..

ಅಕ್ರಮ ಪಡಿತರ ವಿರುದ್ದ ವಿಶೇಷ ಕಾರ್ಯಾಚರಣೆ- ಕೆ.ಎಚ್.ಮುನಿಯಪ್ಪ
ಅಕ್ರಮ ಪಡಿತರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಆರೋಪ ಸಾಬೀತಾದಲ್ಲಿ ನ್ಯಾಯಾಲಯದ ಆದೇಶದಂತೆ ಕಾನೂನು ರೀತಿ ಕ್ರಮ ವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತç ಇಲಾಖೆಯ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು.
ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಎಂದು ಇದೇ ಸಂದರ್ಭದಲ್ಲಿ ಸದನಕ್ಕೆ ಅವರು ತಿಳಿಸಿದರು.

ವಿಧಾನ ಪರಿಷತನಲ್ಲಿ ಡಿಸೆಂಬರ್ 9ರಂದು ಸದಸ್ಯರಾದ ಟಿ.ಎನ್.ಜವರಾಯಿಗೌಡ, ಐವನ್ ಡಿ ಸೋಜಾ, ಸಿ.ಟಿ.ರವಿ, ಶರವಣ.ಟಿ.ಎ, ನಿರಾಣಿ ರುದ್ರಪ್ರ ಹನುಮಂತಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ರಾಜ್ಯಾದ್ಯಂತ ಜನವರಿ-2021 ರಿಂದ ಮೇ 2023ರ ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು, ಇವರಿಂದ ರೂ. 13,51,30,858 ಗಳ ದಂಡ ವಿಧಿಸಿ, ಅನರ್ಹರಿಗೆ ನೀಡಿದ ಸವಲತ್ತುಗಳಿಂದ ಉಂಟಾದ ನಷ್ಟವನ್ನು ಭರಿಸಲು ಸರ್ಕಾರ ಕ್ರಮವಹಿಸಿದೆ.

ಆಹಾರ ಇಲಾಖೆಯ ಉಗ್ರಾಣಗಳಿಂದ ಅಕ್ರಮವಾಗಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ಕ್ರಮ ವಹಿಸಿದೆ. ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಪಡಿತರ ಅಕ್ರಮ ಸಾಗಣೆ ಕಂಡು ಬಂದಲ್ಲಿ ಕೂಡಲೇ ದಾಳಿ ನಡೆಸಿ, ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಪ್ರಕರಣ ದಾಖಲಿಸಿ, ಅಕ್ರಮ ಪಡಿತರ ದಾಸ್ತಾನು ಮುಟ್ಟುಗೋಲು ಹಾಕಿಕೊಂಡು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಮುಟ್ಟುಗೋಲು ದಾಸ್ತಾನನ್ನು ವಿಲೇ ಮಾಡಿ, ವಿಲೇ ಪಡಿಸಿದ ಪಡಿತರ ಮೊತ್ತವನ್ನು ಸರ್ಕಾರಕ್ಕೆ ಜಮೆ ಮಾಡಲಾಗುತ್ತಿದೆ ಎಂದರು.
ರಾಜ್ಯಾದ್ಯಂತ 2024-25ನೇ ಸಾಲಿನಲ್ಲಿ 213 ಎಫ್.ಐ.ಆರ್ ದಾಖಲಿಸಿ ಒಟ್ಟು ರೂ. 2,68,07,872 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು, 238 ಆರೋಪಿಗಳನ್ನು ಬಂಧಿಸಲಾಗಿರುತ್ತದೆ. ಈ ಕುರಿತು ಪರಿಶೀಲಿಸಲು ಮೇಲ್ವಿಚಾರಣೆ ಮಾಡಲು ಇಲಾಖಾ ವತಿಯಿಂದ ನೋಡಲ್ ಅಧಿಕಾರಿಗಳನ್ನು ವಿಭಾಗವಾರು ನೇಮಕ ಮಾಡಲಾಗಿದೆ ಎಂದರು.

ಈ ಹಿಂದೆ ಕೆಲವು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಿದ್ದ ಫಲಾನುಭವಿಗಳು ಹಾಲಿ ಬಡತನ ರೇಖೆಗಿಂತ ಮೇಲೆ ಬಂದಿದ್ದು, ಸದರಿ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.

ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಜಿಎಸ್ ಟಿ ಅಥವಾ ಸಿಎಸ್ ಟಿ ಪಾವತಿದಾರರ ವಿವರಗಳನ್ನು ಕುಟುಂಬ ತಂತ್ರಾಂಶದಿಂದ ಪಡೆದು ದಂಡ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಸ್ತುತ ಆಹಾರ ಇಲಾಖೆಯಲ್ಲಿ ಬಳಸುವ ಸರ್ವರ್ ಹಳೆಯದಾಗಿದೆ. ಈ ಕಾರಣದಿಂದಾಗಿ ಎನ್ ಐಸಿಯಿಂದ ಕೆಎಸ್ ಡಿಸಿ ಗೆ ಆಹಾರ ತಂತ್ರಾಂಶದ ಮೈಗ್ರೇಶನ್ ಕಾರ್ಯ ಅಂತಿಮ ಹಂತದಲ್ಲಿದ್ದು, ಈ ಕಾರ್ಯಪೂರ್ಣವಾದ ನಂತರ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಹಾಗೂ ಪಡಿತರ ತಿದ್ದುಪಡಿ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಬಾಕಿ ಅರ್ಜಿಗಳ ಕಾಲಮಿತಿ ವಿಲೇಯ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

Ramesh Babu

Journalist

Recent Posts

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ವೈದ್ಯ, ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

13 hours ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರು ಸೇರಿದಂತೆ ಇತರೆ ಸಾಧಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

14 hours ago

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ₹400 ಕೋಟಿ ದರೋಡೆ ಪ್ರಕರಣ: ದಟ್ಟಾರಣ್ಯದ ಮೌನದಲ್ಲಿ ಅಡಗಿದ್ದ ಭೀಕರ ರಹಸ್ಯ..ಬೆಚ್ಚಿಬೀಳಿಸುವ ಪ್ರಮುಖ ಅಂಶಗಳು…ಇಲ್ಲಿವೆ ಓದಿ…

ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…

23 hours ago

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಕರ್ನಾಟಕದ 8 ಮಂದಿಯು ಈ ನಾಗರಿಕ ಗೌರವಕ್ಕೆ ಭಾಜನ

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…

1 day ago

ಹುಲುಕುಡಿ ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ

ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…

2 days ago

ರಘುನಾಥಪುರ ಬಳಿ ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು

ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…

2 days ago