Categories: ಕೊಡಗು

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತ ಬಲೆಗೆ

ಸೋಮವಾರಪೇಟೆ ತಾಲೂಕು ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಹಿರೇಶ್ ಗುತ್ತಿಗೆದಾರನೊಬ್ಬನಿಂದ 25,000 ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಸಿಲುಕಿದ್ದಾರೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 14.70 ಲಕ್ಷ ಮೊತ್ತದ ಕಾಮಗಾರಿ ಗುತ್ತಿಗೆಯನ್ನು ಪಡೆದಿದ್ದ ಗುತ್ತಿಗೆದಾರನಿಂದ 1 ಲಕ್ಷ ಲಂಚಕ್ಕೆ ಆಕೆ ಬೇಡಿಕೆ ಇಟ್ಟಿದ್ದಳು ಎಂದು ಹೇಳಲಾಗಿದೆ. ಲಂಚದ ಮೊದಲ ಕಂತು ಇಪ್ಪತ್ತೈದು ಸಾವಿರ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತರು ಬೀಸಿದ ಬಲೆಗೆ ಆಕೆ ಸಿಲುಕಿದ್ದಾಳೆ.

ಕೊಡಗು ಜಿಲ್ಲೆಯ ಕೆಲವು ಕಡೆ ಇದೀಗ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರ ಲಂಚದ ಹಾವಳಿ ಹೆಚ್ಚಾಗಿದೆ. ಹಿಂದೆ ಅಧಿಕಾರಿ ವರ್ಗದವರು ಗುತ್ತಿಗೆದಾರರು ಹಾಗೂ ಸಾರ್ವಜನಿಕರಿಂದ ಕೆಲಸ ಕಾರ್ಯಗಳಿಗೆ ಹಣದ ಬೇಡಿಕೆಯನ್ನು ಇಡುತ್ತಿದ್ದರು, ಆದರೆ ಇದೀಗ ಜನಪ್ರತಿನಿಧಿಗಳೇ ಮುಂದೆ ನಿಂತು ಈ ಕಾಯಕವನ್ನು ನಡೆಸುತ್ತಿದ್ದಾರೆ ಎಂಬ ಆರೋಪ ಎಲ್ಲಾ ಕಡೆ ಕೇಳಿ ಬರುತ್ತಿದೆ.

ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಕಳೆದ ನಾಲ್ಕು  ವರ್ಷಗಳಿಂದ ನಡೆಯದಿರುವುದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚು ಭ್ರಷ್ಟಾಚಾರ ನಡೆದರೂ ಯಾರು ಅದರ ಬಗ್ಗೆ ಪ್ರಶ್ನಿಸುತ್ತಿಲ್ಲ. ಹಿಂದೆ ತಾ.ಪಂ ಹಾಗೂ ಜಿ.ಪಂ ಸಭೆಗಳಲ್ಲಿ ಸ್ಥಳೀಯ ಪ್ರತಿನಿಧಿಗಳು ಚರ್ಚೆಯನ್ನು ಕೈಗೆತ್ತಿಕೊಂಡು ಕ್ರಮಕ್ಕಾಗಿ ಒತ್ತಾಯಿಸುತ್ತಿದ್ದರು, ಆದರೆ ಇದೀಗ ಆಡಳಿತ ಅಧಿಕಾರಿಗಳ ಅಧಿಕಾರದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಹೆಚ್ಚಿನ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದು ಹಲವರ ಆರೋಪವಾಗಿದೆ.

ಕೆಲವು ನಗರಸಭೆ ಪುರಸಭೆ ಪಟ್ಟಣ ಪಂಚಾಯಿತಿಗಳಲ್ಲಿ ಈ ಕಾಯಕ ಮಾಮೂಲಾಗಿದ್ದು, ಇದೀಗ ಗ್ರಾಮ ಪಂಚಾಯಿತಿ ವ್ಯಾಪ್ತಿಗೂ ಜನಪ್ರತಿನಿಧಿಗಳ ಭ್ರಷ್ಟಾಚಾರ ಎಗ್ಗಿಲ್ಲದೆ ನಡೆಯುತ್ತಿದೆ.

Ramesh Babu

Journalist

Recent Posts

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

4 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

5 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

18 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

19 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

20 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

1 day ago