ಸೋಮವಾರಪೇಟೆ ತಾಲೂಕು ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಹಿರೇಶ್ ಗುತ್ತಿಗೆದಾರನೊಬ್ಬನಿಂದ 25,000 ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಸಿಲುಕಿದ್ದಾರೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 14.70 ಲಕ್ಷ ಮೊತ್ತದ ಕಾಮಗಾರಿ ಗುತ್ತಿಗೆಯನ್ನು ಪಡೆದಿದ್ದ ಗುತ್ತಿಗೆದಾರನಿಂದ 1 ಲಕ್ಷ ಲಂಚಕ್ಕೆ ಆಕೆ ಬೇಡಿಕೆ ಇಟ್ಟಿದ್ದಳು ಎಂದು ಹೇಳಲಾಗಿದೆ. ಲಂಚದ ಮೊದಲ ಕಂತು ಇಪ್ಪತ್ತೈದು ಸಾವಿರ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತರು ಬೀಸಿದ ಬಲೆಗೆ ಆಕೆ ಸಿಲುಕಿದ್ದಾಳೆ.
ಕೊಡಗು ಜಿಲ್ಲೆಯ ಕೆಲವು ಕಡೆ ಇದೀಗ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರ ಲಂಚದ ಹಾವಳಿ ಹೆಚ್ಚಾಗಿದೆ. ಹಿಂದೆ ಅಧಿಕಾರಿ ವರ್ಗದವರು ಗುತ್ತಿಗೆದಾರರು ಹಾಗೂ ಸಾರ್ವಜನಿಕರಿಂದ ಕೆಲಸ ಕಾರ್ಯಗಳಿಗೆ ಹಣದ ಬೇಡಿಕೆಯನ್ನು ಇಡುತ್ತಿದ್ದರು, ಆದರೆ ಇದೀಗ ಜನಪ್ರತಿನಿಧಿಗಳೇ ಮುಂದೆ ನಿಂತು ಈ ಕಾಯಕವನ್ನು ನಡೆಸುತ್ತಿದ್ದಾರೆ ಎಂಬ ಆರೋಪ ಎಲ್ಲಾ ಕಡೆ ಕೇಳಿ ಬರುತ್ತಿದೆ.
ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಕಳೆದ ನಾಲ್ಕು ವರ್ಷಗಳಿಂದ ನಡೆಯದಿರುವುದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚು ಭ್ರಷ್ಟಾಚಾರ ನಡೆದರೂ ಯಾರು ಅದರ ಬಗ್ಗೆ ಪ್ರಶ್ನಿಸುತ್ತಿಲ್ಲ. ಹಿಂದೆ ತಾ.ಪಂ ಹಾಗೂ ಜಿ.ಪಂ ಸಭೆಗಳಲ್ಲಿ ಸ್ಥಳೀಯ ಪ್ರತಿನಿಧಿಗಳು ಚರ್ಚೆಯನ್ನು ಕೈಗೆತ್ತಿಕೊಂಡು ಕ್ರಮಕ್ಕಾಗಿ ಒತ್ತಾಯಿಸುತ್ತಿದ್ದರು, ಆದರೆ ಇದೀಗ ಆಡಳಿತ ಅಧಿಕಾರಿಗಳ ಅಧಿಕಾರದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಹೆಚ್ಚಿನ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದು ಹಲವರ ಆರೋಪವಾಗಿದೆ.
ಕೆಲವು ನಗರಸಭೆ ಪುರಸಭೆ ಪಟ್ಟಣ ಪಂಚಾಯಿತಿಗಳಲ್ಲಿ ಈ ಕಾಯಕ ಮಾಮೂಲಾಗಿದ್ದು, ಇದೀಗ ಗ್ರಾಮ ಪಂಚಾಯಿತಿ ವ್ಯಾಪ್ತಿಗೂ ಜನಪ್ರತಿನಿಧಿಗಳ ಭ್ರಷ್ಟಾಚಾರ ಎಗ್ಗಿಲ್ಲದೆ ನಡೆಯುತ್ತಿದೆ.
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…