Categories: ಕೊಡಗು

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತ ಬಲೆಗೆ

ಸೋಮವಾರಪೇಟೆ ತಾಲೂಕು ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಹಿರೇಶ್ ಗುತ್ತಿಗೆದಾರನೊಬ್ಬನಿಂದ 25,000 ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಸಿಲುಕಿದ್ದಾರೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 14.70 ಲಕ್ಷ ಮೊತ್ತದ ಕಾಮಗಾರಿ ಗುತ್ತಿಗೆಯನ್ನು ಪಡೆದಿದ್ದ ಗುತ್ತಿಗೆದಾರನಿಂದ 1 ಲಕ್ಷ ಲಂಚಕ್ಕೆ ಆಕೆ ಬೇಡಿಕೆ ಇಟ್ಟಿದ್ದಳು ಎಂದು ಹೇಳಲಾಗಿದೆ. ಲಂಚದ ಮೊದಲ ಕಂತು ಇಪ್ಪತ್ತೈದು ಸಾವಿರ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತರು ಬೀಸಿದ ಬಲೆಗೆ ಆಕೆ ಸಿಲುಕಿದ್ದಾಳೆ.

ಕೊಡಗು ಜಿಲ್ಲೆಯ ಕೆಲವು ಕಡೆ ಇದೀಗ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರ ಲಂಚದ ಹಾವಳಿ ಹೆಚ್ಚಾಗಿದೆ. ಹಿಂದೆ ಅಧಿಕಾರಿ ವರ್ಗದವರು ಗುತ್ತಿಗೆದಾರರು ಹಾಗೂ ಸಾರ್ವಜನಿಕರಿಂದ ಕೆಲಸ ಕಾರ್ಯಗಳಿಗೆ ಹಣದ ಬೇಡಿಕೆಯನ್ನು ಇಡುತ್ತಿದ್ದರು, ಆದರೆ ಇದೀಗ ಜನಪ್ರತಿನಿಧಿಗಳೇ ಮುಂದೆ ನಿಂತು ಈ ಕಾಯಕವನ್ನು ನಡೆಸುತ್ತಿದ್ದಾರೆ ಎಂಬ ಆರೋಪ ಎಲ್ಲಾ ಕಡೆ ಕೇಳಿ ಬರುತ್ತಿದೆ.

ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಕಳೆದ ನಾಲ್ಕು  ವರ್ಷಗಳಿಂದ ನಡೆಯದಿರುವುದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚು ಭ್ರಷ್ಟಾಚಾರ ನಡೆದರೂ ಯಾರು ಅದರ ಬಗ್ಗೆ ಪ್ರಶ್ನಿಸುತ್ತಿಲ್ಲ. ಹಿಂದೆ ತಾ.ಪಂ ಹಾಗೂ ಜಿ.ಪಂ ಸಭೆಗಳಲ್ಲಿ ಸ್ಥಳೀಯ ಪ್ರತಿನಿಧಿಗಳು ಚರ್ಚೆಯನ್ನು ಕೈಗೆತ್ತಿಕೊಂಡು ಕ್ರಮಕ್ಕಾಗಿ ಒತ್ತಾಯಿಸುತ್ತಿದ್ದರು, ಆದರೆ ಇದೀಗ ಆಡಳಿತ ಅಧಿಕಾರಿಗಳ ಅಧಿಕಾರದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಹೆಚ್ಚಿನ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದು ಹಲವರ ಆರೋಪವಾಗಿದೆ.

ಕೆಲವು ನಗರಸಭೆ ಪುರಸಭೆ ಪಟ್ಟಣ ಪಂಚಾಯಿತಿಗಳಲ್ಲಿ ಈ ಕಾಯಕ ಮಾಮೂಲಾಗಿದ್ದು, ಇದೀಗ ಗ್ರಾಮ ಪಂಚಾಯಿತಿ ವ್ಯಾಪ್ತಿಗೂ ಜನಪ್ರತಿನಿಧಿಗಳ ಭ್ರಷ್ಟಾಚಾರ ಎಗ್ಗಿಲ್ಲದೆ ನಡೆಯುತ್ತಿದೆ.

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

4 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

4 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

23 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

23 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

23 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago