ಸೋಮವಾರಪೇಟೆ ತಾಲೂಕು ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಹಿರೇಶ್ ಗುತ್ತಿಗೆದಾರನೊಬ್ಬನಿಂದ 25,000 ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಸಿಲುಕಿದ್ದಾರೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 14.70 ಲಕ್ಷ ಮೊತ್ತದ ಕಾಮಗಾರಿ ಗುತ್ತಿಗೆಯನ್ನು ಪಡೆದಿದ್ದ ಗುತ್ತಿಗೆದಾರನಿಂದ 1 ಲಕ್ಷ ಲಂಚಕ್ಕೆ ಆಕೆ ಬೇಡಿಕೆ ಇಟ್ಟಿದ್ದಳು ಎಂದು ಹೇಳಲಾಗಿದೆ. ಲಂಚದ ಮೊದಲ ಕಂತು ಇಪ್ಪತ್ತೈದು ಸಾವಿರ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತರು ಬೀಸಿದ ಬಲೆಗೆ ಆಕೆ ಸಿಲುಕಿದ್ದಾಳೆ.
ಕೊಡಗು ಜಿಲ್ಲೆಯ ಕೆಲವು ಕಡೆ ಇದೀಗ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರ ಲಂಚದ ಹಾವಳಿ ಹೆಚ್ಚಾಗಿದೆ. ಹಿಂದೆ ಅಧಿಕಾರಿ ವರ್ಗದವರು ಗುತ್ತಿಗೆದಾರರು ಹಾಗೂ ಸಾರ್ವಜನಿಕರಿಂದ ಕೆಲಸ ಕಾರ್ಯಗಳಿಗೆ ಹಣದ ಬೇಡಿಕೆಯನ್ನು ಇಡುತ್ತಿದ್ದರು, ಆದರೆ ಇದೀಗ ಜನಪ್ರತಿನಿಧಿಗಳೇ ಮುಂದೆ ನಿಂತು ಈ ಕಾಯಕವನ್ನು ನಡೆಸುತ್ತಿದ್ದಾರೆ ಎಂಬ ಆರೋಪ ಎಲ್ಲಾ ಕಡೆ ಕೇಳಿ ಬರುತ್ತಿದೆ.
ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಕಳೆದ ನಾಲ್ಕು ವರ್ಷಗಳಿಂದ ನಡೆಯದಿರುವುದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚು ಭ್ರಷ್ಟಾಚಾರ ನಡೆದರೂ ಯಾರು ಅದರ ಬಗ್ಗೆ ಪ್ರಶ್ನಿಸುತ್ತಿಲ್ಲ. ಹಿಂದೆ ತಾ.ಪಂ ಹಾಗೂ ಜಿ.ಪಂ ಸಭೆಗಳಲ್ಲಿ ಸ್ಥಳೀಯ ಪ್ರತಿನಿಧಿಗಳು ಚರ್ಚೆಯನ್ನು ಕೈಗೆತ್ತಿಕೊಂಡು ಕ್ರಮಕ್ಕಾಗಿ ಒತ್ತಾಯಿಸುತ್ತಿದ್ದರು, ಆದರೆ ಇದೀಗ ಆಡಳಿತ ಅಧಿಕಾರಿಗಳ ಅಧಿಕಾರದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಹೆಚ್ಚಿನ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದು ಹಲವರ ಆರೋಪವಾಗಿದೆ.
ಕೆಲವು ನಗರಸಭೆ ಪುರಸಭೆ ಪಟ್ಟಣ ಪಂಚಾಯಿತಿಗಳಲ್ಲಿ ಈ ಕಾಯಕ ಮಾಮೂಲಾಗಿದ್ದು, ಇದೀಗ ಗ್ರಾಮ ಪಂಚಾಯಿತಿ ವ್ಯಾಪ್ತಿಗೂ ಜನಪ್ರತಿನಿಧಿಗಳ ಭ್ರಷ್ಟಾಚಾರ ಎಗ್ಗಿಲ್ಲದೆ ನಡೆಯುತ್ತಿದೆ.
ಚಿಕ್ಕನಾಯಕನಹಳ್ಳಿ: ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ, ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ…
ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…
ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…