ಗ್ರಾಮ ಸಹಾಯಕರು, ರೆವಿನ್ಯೂ ಇನ್ಸ್‌ಪೆಕ್ಟರ್ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಕೆಲಸವೇನು..? ಅವರ ಜವಾಬ್ದಾರಿ ಏನು..? ತಾಲೂಕು ಕಚೇರಿಯಲ್ಲಿ ಬ್ರೋಕರ್ ಕೆಲಸ ಮಾಡೋದು ಬಿಟ್ಟು ಸಾರ್ವಜನಿಕರ ಸಮಸ್ಯೆ ಆಲಿಸಿ ಶೀಘ್ರ ಪರಿಹರಿಸುವ ಕೆಲಸ ಮಾಡಬೇಕು- ಭ್ರಷ್ಟಾಚಾರ ಸಹಿಸುವುದಿಲ್ಲ- ಭ್ರಷ್ಟತೆ ಕಂಡುಬಂದಲ್ಲಿ ಕ್ರಮ ಗ್ಯಾರೆಂಟಿ- ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ಶಾಸಕ ಧೀರಜ್ ಮುನಿರಾಜ್

ಕಂದಾಯ ಇಲಾಖೆಯಲ್ಲಿ ಗ್ರಾಮ ಸಹಾಯಕರು, ರೆವಿನ್ಯೂ ಇನ್ಸ್‌ಪೆಕ್ಟರ್ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಕೆಲಸವೇನು..? ಅವರ ಜವಾಬ್ದಾರಿ ಏನು..? ಎಷ್ಟು ಪೆನ್ಷನ್ ನೋಂದಣಿ ಮಾಡಿಸುತ್ತಿದ್ದಾರೆ..? ಎಷ್ಟು ಹೌಸ್ ಸರ್ವೇ ಮಾಡುತ್ತಿದ್ದಾರೆ..? ಎಷ್ಟು ಜಮೀನುಗಳ ಬೆಳೆ ಸಮೀಕ್ಷೆ ಮಾಡುತ್ತಿದ್ದಾರೆ..? ಇವರ ನಿಜವಾದ ಕೆಲಸ ಕಾರ್ಯವೇನು..? ನಿಜವಾಗಿ ಇವರು ಅವರ ಅವರ ವ್ಯಾಪ್ತಿಯಲ್ಲಿ ಕೂತು ಕೆಲಸ ಮಾಡುತ್ತಿದ್ದಾರಾ…? ಗ್ರಾಮ ಲೆಕ್ಕಾಧಿಕಾರಿಗಳು ಕನಿಷ್ಠ ಇಬ್ಬರನ್ನು ಆಪ್ತ ಸಹಾಯಕರನ್ನ ಇಟ್ಟಿಕೊಂಡಿರುತ್ತಾರೆ. ರೆವೆನ್ಯೂ ಇನ್ಸ್ ಪೆಕ್ಟರ್ ನಾಡಕಚೇರಿಯಲ್ಲಿ ಕುಳಿತುಕೊಳ್ಳುವುದು ಬಿಟ್ಟು‌ ನಗರದಲ್ಲಿ ಬಂದು ಕಮರ್ಷಿಯಲ್ ಕಟ್ಟಡದಲ್ಲಿ ಆಫೀಸ್ ಮಾಡಿಕೊಂಡಿರುತ್ತಾರೆ… ಇದರ ಬಗ್ಗೆ ಸಾರ್ವಜನಿಕವಾಗಿ ಹಾಗೂ ಸದನದಲ್ಲೂ ಮಾತನಾಡುತ್ತೇನೆ ಎಂದು ಶಾಸಕ ಧೀರಜ್ ಮುನಿರಾಜ್ ಅವರು ಗ್ರಾಮ ಸಹಾಯಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ವಿರುದ್ಧ ಕಿಡಿಕಾರಿದರು.

ತಾಲೂಕು ಪಂಚಾಯಿತಿ ಕಚೇರಿಯಲ್ಲಿಂದು ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ಕೆಡಿಪಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತವರಿಂದ ಜನಕ್ಕೆ ಯಾವ ಕೆಲಸ ಆಗುತ್ತದೆ. ಗ್ರಾಮಗಳು ಎಷ್ಟರ ಮಟ್ಟಿಗೆ ಉದ್ಧಾರ ಆಗುತ್ತವೆ. ಜನರ ಕಷ್ಟಗಳನ್ನು ಕೇಳುವವರು ಯಾರು..? ಎಂದು ಪ್ರಶ್ನೆ ಮಾಡಿದರು.

1999-2004 ಸಾಲಿನಲ್ಲಿ ದೊಡ್ಡಬಳ್ಳಾಪುರದಲ್ಲಿ ಅತಿಹೆಚ್ಚು‌ ಮಂಜೂರಾತಿ ಆಗಿತ್ತು. ಇಂದಿಗೂ ಸಹ ಶೇ.50ರಷ್ಟು ಮಂದಿಗೆ ಸಾಗುವಳಿ ಚೀಟಿ ನೀಡಿಲ್ಲ. ಸುಮಾರು 20ವರ್ಷವಾದರೂ ಶೇ.50ರಷ್ಟು ರೈತರು ಸಾಗುವಳಿ ಚೀಟಿ ತೆಗೆದುಕೊಳ್ಳಲು ಆಗಲಿಲ್ಲ. ಇದರ ಅರ್ಥ ಏನು..? ತಾಲೂಕಿನ 50, 53 ಅರ್ಜಿಗಳ ಮಾಹಿತಿಯನ್ನು ಇಲ್ಲಿ ಕೊಡಲ್ಲ ಎಂದು ಗೊತ್ತಾಗಿ ಸದನದಲ್ಲಿ ಕೇಳಿದ್ದೇನೆ. 53 ಅರ್ಜಿಗಳನ್ನು, ಕೆಲ ಬುಕ್ಕುಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ. ಕೆಲ ಅಧಿಕಾರಿಗಳಿಂದ ಭ್ರಷ್ಟಾಚಾರ ಇನ್ನೂ ಹೆಚ್ಚಾಗುತ್ತಿದೆ. ಕೆಲ ಮೂಲ ಕಡತ, ದಾಖಲೆಗಳನ್ನು ಕಣ್ಮರೆ ಮಾಡಿಬಿಟ್ಟಿದ್ದಾರೆ. ಮೊದಲು ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಕೈಗೆ ಸಿಗಬೇಕು, ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಕೆಲಸ‌ ಮಾಡಬೇಕು. ಅದನ್ನು ಬಿಟ್ಟು ತಾಲೂಕು ಕಚೇರಿಯಲ್ಲಿ ಬ್ರೋಕರ್ ಕೆಲಸ ಮಾಡಿಕೊಂಡಿದ್ದರೆ ಹೇಗೆ ಎಂದು ಪ್ರಶ್ನೆ ಮಾಡಿದರು.

ಎಲ್ಲಾ ಇಲಾಖೆಗಳಲ್ಲಿ ಭ್ರಷ್ಟಾಚಾರ ರಹಿತವಾಗಿ ಕೆಲಸ ಮಾಡಬೇಕು ಎಂದು ನನ್ನ ಅಪೇಕ್ಷೆ. ಅಧಿಕಾರಿಗಳ ಬಳಿ ಯಾವುದಾದರೂ ಸರ್ಕಾರಿ ಕೆಲಸ ಮಾಡಿಸಿಕೊಳ್ಳಬೇಕೆಂದರೆ ನಮಗೇ ಜಿಗುಪ್ಸೆ ಬಂದು ನಾವೇ ದುಡ್ಡು ಕೊಟ್ಟು ಕೆಲಸ ಮಾಡಿಸಿಕೊಳ್ಳುತ್ತೇವೆ ಆ ಮಟ್ಟಕ್ಕೆ ಇವರು ನಮಗೆ ಕಾಟ ಕೊಡುತ್ತಾರೆ ಎಂದು ಆರೋಪಿಸಿದರು. ಹಣ ಕೇಳುವ ಅಧಿಕಾರಿಗಳ ಬಗ್ಗೆ ಸಾಕ್ಷಿ, ದಾಖಲೆ ಸಮೇತ ನಮ್ಮ ಗಮನಕ್ಕೆ ತಂದರೆ ನಾವು ಅದಕ್ಕೆ ಕ್ರಮ ಕೈಗೊಳ್ಳುತ್ತೇವೆ ಎಂದರು.

Ramesh Babu

Journalist

Recent Posts

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

40 minutes ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

3 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

14 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

14 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

15 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

16 hours ago