ಗ್ರಾಮ ಸಹಾಯಕರು, ರೆವಿನ್ಯೂ ಇನ್ಸ್‌ಪೆಕ್ಟರ್ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಕೆಲಸವೇನು..? ಅವರ ಜವಾಬ್ದಾರಿ ಏನು..? ತಾಲೂಕು ಕಚೇರಿಯಲ್ಲಿ ಬ್ರೋಕರ್ ಕೆಲಸ ಮಾಡೋದು ಬಿಟ್ಟು ಸಾರ್ವಜನಿಕರ ಸಮಸ್ಯೆ ಆಲಿಸಿ ಶೀಘ್ರ ಪರಿಹರಿಸುವ ಕೆಲಸ ಮಾಡಬೇಕು- ಭ್ರಷ್ಟಾಚಾರ ಸಹಿಸುವುದಿಲ್ಲ- ಭ್ರಷ್ಟತೆ ಕಂಡುಬಂದಲ್ಲಿ ಕ್ರಮ ಗ್ಯಾರೆಂಟಿ- ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ಶಾಸಕ ಧೀರಜ್ ಮುನಿರಾಜ್

ಕಂದಾಯ ಇಲಾಖೆಯಲ್ಲಿ ಗ್ರಾಮ ಸಹಾಯಕರು, ರೆವಿನ್ಯೂ ಇನ್ಸ್‌ಪೆಕ್ಟರ್ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಕೆಲಸವೇನು..? ಅವರ ಜವಾಬ್ದಾರಿ ಏನು..? ಎಷ್ಟು ಪೆನ್ಷನ್ ನೋಂದಣಿ ಮಾಡಿಸುತ್ತಿದ್ದಾರೆ..? ಎಷ್ಟು ಹೌಸ್ ಸರ್ವೇ ಮಾಡುತ್ತಿದ್ದಾರೆ..? ಎಷ್ಟು ಜಮೀನುಗಳ ಬೆಳೆ ಸಮೀಕ್ಷೆ ಮಾಡುತ್ತಿದ್ದಾರೆ..? ಇವರ ನಿಜವಾದ ಕೆಲಸ ಕಾರ್ಯವೇನು..? ನಿಜವಾಗಿ ಇವರು ಅವರ ಅವರ ವ್ಯಾಪ್ತಿಯಲ್ಲಿ ಕೂತು ಕೆಲಸ ಮಾಡುತ್ತಿದ್ದಾರಾ…? ಗ್ರಾಮ ಲೆಕ್ಕಾಧಿಕಾರಿಗಳು ಕನಿಷ್ಠ ಇಬ್ಬರನ್ನು ಆಪ್ತ ಸಹಾಯಕರನ್ನ ಇಟ್ಟಿಕೊಂಡಿರುತ್ತಾರೆ. ರೆವೆನ್ಯೂ ಇನ್ಸ್ ಪೆಕ್ಟರ್ ನಾಡಕಚೇರಿಯಲ್ಲಿ ಕುಳಿತುಕೊಳ್ಳುವುದು ಬಿಟ್ಟು‌ ನಗರದಲ್ಲಿ ಬಂದು ಕಮರ್ಷಿಯಲ್ ಕಟ್ಟಡದಲ್ಲಿ ಆಫೀಸ್ ಮಾಡಿಕೊಂಡಿರುತ್ತಾರೆ… ಇದರ ಬಗ್ಗೆ ಸಾರ್ವಜನಿಕವಾಗಿ ಹಾಗೂ ಸದನದಲ್ಲೂ ಮಾತನಾಡುತ್ತೇನೆ ಎಂದು ಶಾಸಕ ಧೀರಜ್ ಮುನಿರಾಜ್ ಅವರು ಗ್ರಾಮ ಸಹಾಯಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ವಿರುದ್ಧ ಕಿಡಿಕಾರಿದರು.

ತಾಲೂಕು ಪಂಚಾಯಿತಿ ಕಚೇರಿಯಲ್ಲಿಂದು ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ಕೆಡಿಪಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತವರಿಂದ ಜನಕ್ಕೆ ಯಾವ ಕೆಲಸ ಆಗುತ್ತದೆ. ಗ್ರಾಮಗಳು ಎಷ್ಟರ ಮಟ್ಟಿಗೆ ಉದ್ಧಾರ ಆಗುತ್ತವೆ. ಜನರ ಕಷ್ಟಗಳನ್ನು ಕೇಳುವವರು ಯಾರು..? ಎಂದು ಪ್ರಶ್ನೆ ಮಾಡಿದರು.

1999-2004 ಸಾಲಿನಲ್ಲಿ ದೊಡ್ಡಬಳ್ಳಾಪುರದಲ್ಲಿ ಅತಿಹೆಚ್ಚು‌ ಮಂಜೂರಾತಿ ಆಗಿತ್ತು. ಇಂದಿಗೂ ಸಹ ಶೇ.50ರಷ್ಟು ಮಂದಿಗೆ ಸಾಗುವಳಿ ಚೀಟಿ ನೀಡಿಲ್ಲ. ಸುಮಾರು 20ವರ್ಷವಾದರೂ ಶೇ.50ರಷ್ಟು ರೈತರು ಸಾಗುವಳಿ ಚೀಟಿ ತೆಗೆದುಕೊಳ್ಳಲು ಆಗಲಿಲ್ಲ. ಇದರ ಅರ್ಥ ಏನು..? ತಾಲೂಕಿನ 50, 53 ಅರ್ಜಿಗಳ ಮಾಹಿತಿಯನ್ನು ಇಲ್ಲಿ ಕೊಡಲ್ಲ ಎಂದು ಗೊತ್ತಾಗಿ ಸದನದಲ್ಲಿ ಕೇಳಿದ್ದೇನೆ. 53 ಅರ್ಜಿಗಳನ್ನು, ಕೆಲ ಬುಕ್ಕುಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ. ಕೆಲ ಅಧಿಕಾರಿಗಳಿಂದ ಭ್ರಷ್ಟಾಚಾರ ಇನ್ನೂ ಹೆಚ್ಚಾಗುತ್ತಿದೆ. ಕೆಲ ಮೂಲ ಕಡತ, ದಾಖಲೆಗಳನ್ನು ಕಣ್ಮರೆ ಮಾಡಿಬಿಟ್ಟಿದ್ದಾರೆ. ಮೊದಲು ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಕೈಗೆ ಸಿಗಬೇಕು, ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಕೆಲಸ‌ ಮಾಡಬೇಕು. ಅದನ್ನು ಬಿಟ್ಟು ತಾಲೂಕು ಕಚೇರಿಯಲ್ಲಿ ಬ್ರೋಕರ್ ಕೆಲಸ ಮಾಡಿಕೊಂಡಿದ್ದರೆ ಹೇಗೆ ಎಂದು ಪ್ರಶ್ನೆ ಮಾಡಿದರು.

ಎಲ್ಲಾ ಇಲಾಖೆಗಳಲ್ಲಿ ಭ್ರಷ್ಟಾಚಾರ ರಹಿತವಾಗಿ ಕೆಲಸ ಮಾಡಬೇಕು ಎಂದು ನನ್ನ ಅಪೇಕ್ಷೆ. ಅಧಿಕಾರಿಗಳ ಬಳಿ ಯಾವುದಾದರೂ ಸರ್ಕಾರಿ ಕೆಲಸ ಮಾಡಿಸಿಕೊಳ್ಳಬೇಕೆಂದರೆ ನಮಗೇ ಜಿಗುಪ್ಸೆ ಬಂದು ನಾವೇ ದುಡ್ಡು ಕೊಟ್ಟು ಕೆಲಸ ಮಾಡಿಸಿಕೊಳ್ಳುತ್ತೇವೆ ಆ ಮಟ್ಟಕ್ಕೆ ಇವರು ನಮಗೆ ಕಾಟ ಕೊಡುತ್ತಾರೆ ಎಂದು ಆರೋಪಿಸಿದರು. ಹಣ ಕೇಳುವ ಅಧಿಕಾರಿಗಳ ಬಗ್ಗೆ ಸಾಕ್ಷಿ, ದಾಖಲೆ ಸಮೇತ ನಮ್ಮ ಗಮನಕ್ಕೆ ತಂದರೆ ನಾವು ಅದಕ್ಕೆ ಕ್ರಮ ಕೈಗೊಳ್ಳುತ್ತೇವೆ ಎಂದರು.

Ramesh Babu

Journalist

Recent Posts

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 hour ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

3 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

5 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

22 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

1 day ago