ಗ್ರಾಮ ಸಹಾಯಕರು, ರೆವಿನ್ಯೂ ಇನ್ಸ್‌ಪೆಕ್ಟರ್ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಕೆಲಸವೇನು..? ಅವರ ಜವಾಬ್ದಾರಿ ಏನು..? ತಾಲೂಕು ಕಚೇರಿಯಲ್ಲಿ ಬ್ರೋಕರ್ ಕೆಲಸ ಮಾಡೋದು ಬಿಟ್ಟು ಸಾರ್ವಜನಿಕರ ಸಮಸ್ಯೆ ಆಲಿಸಿ ಶೀಘ್ರ ಪರಿಹರಿಸುವ ಕೆಲಸ ಮಾಡಬೇಕು- ಭ್ರಷ್ಟಾಚಾರ ಸಹಿಸುವುದಿಲ್ಲ- ಭ್ರಷ್ಟತೆ ಕಂಡುಬಂದಲ್ಲಿ ಕ್ರಮ ಗ್ಯಾರೆಂಟಿ- ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ಶಾಸಕ ಧೀರಜ್ ಮುನಿರಾಜ್

ಕಂದಾಯ ಇಲಾಖೆಯಲ್ಲಿ ಗ್ರಾಮ ಸಹಾಯಕರು, ರೆವಿನ್ಯೂ ಇನ್ಸ್‌ಪೆಕ್ಟರ್ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಕೆಲಸವೇನು..? ಅವರ ಜವಾಬ್ದಾರಿ ಏನು..? ಎಷ್ಟು ಪೆನ್ಷನ್ ನೋಂದಣಿ ಮಾಡಿಸುತ್ತಿದ್ದಾರೆ..? ಎಷ್ಟು ಹೌಸ್ ಸರ್ವೇ ಮಾಡುತ್ತಿದ್ದಾರೆ..? ಎಷ್ಟು ಜಮೀನುಗಳ ಬೆಳೆ ಸಮೀಕ್ಷೆ ಮಾಡುತ್ತಿದ್ದಾರೆ..? ಇವರ ನಿಜವಾದ ಕೆಲಸ ಕಾರ್ಯವೇನು..? ನಿಜವಾಗಿ ಇವರು ಅವರ ಅವರ ವ್ಯಾಪ್ತಿಯಲ್ಲಿ ಕೂತು ಕೆಲಸ ಮಾಡುತ್ತಿದ್ದಾರಾ…? ಗ್ರಾಮ ಲೆಕ್ಕಾಧಿಕಾರಿಗಳು ಕನಿಷ್ಠ ಇಬ್ಬರನ್ನು ಆಪ್ತ ಸಹಾಯಕರನ್ನ ಇಟ್ಟಿಕೊಂಡಿರುತ್ತಾರೆ. ರೆವೆನ್ಯೂ ಇನ್ಸ್ ಪೆಕ್ಟರ್ ನಾಡಕಚೇರಿಯಲ್ಲಿ ಕುಳಿತುಕೊಳ್ಳುವುದು ಬಿಟ್ಟು‌ ನಗರದಲ್ಲಿ ಬಂದು ಕಮರ್ಷಿಯಲ್ ಕಟ್ಟಡದಲ್ಲಿ ಆಫೀಸ್ ಮಾಡಿಕೊಂಡಿರುತ್ತಾರೆ… ಇದರ ಬಗ್ಗೆ ಸಾರ್ವಜನಿಕವಾಗಿ ಹಾಗೂ ಸದನದಲ್ಲೂ ಮಾತನಾಡುತ್ತೇನೆ ಎಂದು ಶಾಸಕ ಧೀರಜ್ ಮುನಿರಾಜ್ ಅವರು ಗ್ರಾಮ ಸಹಾಯಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ವಿರುದ್ಧ ಕಿಡಿಕಾರಿದರು.

ತಾಲೂಕು ಪಂಚಾಯಿತಿ ಕಚೇರಿಯಲ್ಲಿಂದು ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ಕೆಡಿಪಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತವರಿಂದ ಜನಕ್ಕೆ ಯಾವ ಕೆಲಸ ಆಗುತ್ತದೆ. ಗ್ರಾಮಗಳು ಎಷ್ಟರ ಮಟ್ಟಿಗೆ ಉದ್ಧಾರ ಆಗುತ್ತವೆ. ಜನರ ಕಷ್ಟಗಳನ್ನು ಕೇಳುವವರು ಯಾರು..? ಎಂದು ಪ್ರಶ್ನೆ ಮಾಡಿದರು.

1999-2004 ಸಾಲಿನಲ್ಲಿ ದೊಡ್ಡಬಳ್ಳಾಪುರದಲ್ಲಿ ಅತಿಹೆಚ್ಚು‌ ಮಂಜೂರಾತಿ ಆಗಿತ್ತು. ಇಂದಿಗೂ ಸಹ ಶೇ.50ರಷ್ಟು ಮಂದಿಗೆ ಸಾಗುವಳಿ ಚೀಟಿ ನೀಡಿಲ್ಲ. ಸುಮಾರು 20ವರ್ಷವಾದರೂ ಶೇ.50ರಷ್ಟು ರೈತರು ಸಾಗುವಳಿ ಚೀಟಿ ತೆಗೆದುಕೊಳ್ಳಲು ಆಗಲಿಲ್ಲ. ಇದರ ಅರ್ಥ ಏನು..? ತಾಲೂಕಿನ 50, 53 ಅರ್ಜಿಗಳ ಮಾಹಿತಿಯನ್ನು ಇಲ್ಲಿ ಕೊಡಲ್ಲ ಎಂದು ಗೊತ್ತಾಗಿ ಸದನದಲ್ಲಿ ಕೇಳಿದ್ದೇನೆ. 53 ಅರ್ಜಿಗಳನ್ನು, ಕೆಲ ಬುಕ್ಕುಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ. ಕೆಲ ಅಧಿಕಾರಿಗಳಿಂದ ಭ್ರಷ್ಟಾಚಾರ ಇನ್ನೂ ಹೆಚ್ಚಾಗುತ್ತಿದೆ. ಕೆಲ ಮೂಲ ಕಡತ, ದಾಖಲೆಗಳನ್ನು ಕಣ್ಮರೆ ಮಾಡಿಬಿಟ್ಟಿದ್ದಾರೆ. ಮೊದಲು ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಕೈಗೆ ಸಿಗಬೇಕು, ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಕೆಲಸ‌ ಮಾಡಬೇಕು. ಅದನ್ನು ಬಿಟ್ಟು ತಾಲೂಕು ಕಚೇರಿಯಲ್ಲಿ ಬ್ರೋಕರ್ ಕೆಲಸ ಮಾಡಿಕೊಂಡಿದ್ದರೆ ಹೇಗೆ ಎಂದು ಪ್ರಶ್ನೆ ಮಾಡಿದರು.

ಎಲ್ಲಾ ಇಲಾಖೆಗಳಲ್ಲಿ ಭ್ರಷ್ಟಾಚಾರ ರಹಿತವಾಗಿ ಕೆಲಸ ಮಾಡಬೇಕು ಎಂದು ನನ್ನ ಅಪೇಕ್ಷೆ. ಅಧಿಕಾರಿಗಳ ಬಳಿ ಯಾವುದಾದರೂ ಸರ್ಕಾರಿ ಕೆಲಸ ಮಾಡಿಸಿಕೊಳ್ಳಬೇಕೆಂದರೆ ನಮಗೇ ಜಿಗುಪ್ಸೆ ಬಂದು ನಾವೇ ದುಡ್ಡು ಕೊಟ್ಟು ಕೆಲಸ ಮಾಡಿಸಿಕೊಳ್ಳುತ್ತೇವೆ ಆ ಮಟ್ಟಕ್ಕೆ ಇವರು ನಮಗೆ ಕಾಟ ಕೊಡುತ್ತಾರೆ ಎಂದು ಆರೋಪಿಸಿದರು. ಹಣ ಕೇಳುವ ಅಧಿಕಾರಿಗಳ ಬಗ್ಗೆ ಸಾಕ್ಷಿ, ದಾಖಲೆ ಸಮೇತ ನಮ್ಮ ಗಮನಕ್ಕೆ ತಂದರೆ ನಾವು ಅದಕ್ಕೆ ಕ್ರಮ ಕೈಗೊಳ್ಳುತ್ತೇವೆ ಎಂದರು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

1 day ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago