Oplus_0
ಗ್ರಾಮ ಪಂಚಾಯ್ತಿ ಪಿಡಿಒಯೊಬ್ಬರು ಗ್ರಾ.ಪಂ ಅಧ್ಯಕ್ಷೆಗೆ ವಾಟ್ಸಾಪ್ ಚಾಟಿಂಗ್ ಮೂಲಕ ಎಂದು ಐಲವ್ ಯೂ ಎಂದು ಮೆಸೇಜ್ ಕಳುಸಿ ಜಾತಿ ನಿಂದನೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲ್ಲೂಕಿ ರಾಶ್ಚರುವು ಗ್ರಾಮ ಪಂಚಾಯ್ತಿಯಲ್ಲಿ ನಡೆದಿದೆ.
ಎರಡನೇ ಅವಧಿಗೆ ರಾಶ್ಚರುವು ಗ್ರಾಮ ಪಂಚಾಯ್ತಿಯಲ್ಲಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಗೆ ಕಳೆದ ಐದು ತಿಂಗಳ ಹಿಂದೆ ಪಂಚಾಯ್ತಿಗೆ ಬಂದ ಪಿಡಿಒ ಅಶೋಕ್ ಎಂಬಾತ ಅಧ್ಯಕ್ಷೆಯೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿರುವ ಆರೋಪ ಕೇಳಿಬಂದಿದೆ.
ಗ್ರಾಮ ಪಂಚಾಯ್ತಿಯಲ್ಲಿ ಯಾರು ಇಲ್ಲದ ವೇಳೆ ಅಸಭ್ಯವಾಗಿ ನೋಡುವುದು, ವಾಟ್ಸಾಪ್ ನಲ್ಲಿ ಐಲವ್ಯೂ ಎಂದು ಮೆಸೇಜ್ ಮಾಡಿ ಪ್ರಪೋಸ್ ಮಾಡಿರುವ ಆರೋಪ ಕೇಳಿಬಂದಿದೆ.
ಅನ್ಯ ಪುರುಷರೊಟ್ಟಿಗೆ ಲೈಂಗಿಕ ಕ್ರಿಯೆಗೆ ಸಹಕರಿಸು ಎಂದು ಒತ್ತಾಯಿಸಿರುವುದು, ಜಾತಿನಿಂದನೇ ಮಾಡಿ ದೌರ್ಜನ್ಯ ಎಸಗಿದ್ದಾನೆ ಎಂದು ದೂರಲಾಗಿದೆ.
ಮಹಿಳಾ ಸದಸ್ಯರುಗಳ ಗಂಡಂದಿರು ಏನು ಹೇಳಿದ್ರೂ ಮಾಡಬೇಕು, ಅಕ್ರಮ ಕಾಮಗಾರಿಗಳ ಖಾಲಿ ಚೆಕ್ ಗಳಿಗೆ ಸಹಿ ಮಾಡಬೇಕು. ಖಾಲಿ ಚೆಕ್ ಮೂಲಕ ಇಪ್ಪತ್ತು ಸಾವಿರ ರೂಪಾಯಿ ಕೊಡುವಂತೆ ಪಿಡಿಒ ಅಶೋಕ್ ಅದ್ಯಕ್ಷರಿಗೆ ಧಮ್ಕಿ ಹಾಕಿದ್ದಾನೆಂದು ದೂರು ಕೇಳಿಬಂದಿದೆ.
ಇನ್ನೂ ಈ ಬಗ್ಗೆ ತಾಲೂಕು ಪಂ ಇಒ , ಜಿಲ್ಲಾ ಪಂ ಸಿಇಒಗೆ ದೂರು ಕೊಟ್ಟರು ಕ್ರಮ ಕೈಗೊಳ್ಳದ ಕಾರಣ ಪಿಡಿಒ ಆಶೋಕ್ ವಿರುದ್ದ ಗ್ರಾ,ಪಂ ಅಧ್ಯಕ್ಷೆ ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…