Oplus_0
ಗ್ರಾಮ ಪಂಚಾಯ್ತಿ ಪಿಡಿಒಯೊಬ್ಬರು ಗ್ರಾ.ಪಂ ಅಧ್ಯಕ್ಷೆಗೆ ವಾಟ್ಸಾಪ್ ಚಾಟಿಂಗ್ ಮೂಲಕ ಎಂದು ಐಲವ್ ಯೂ ಎಂದು ಮೆಸೇಜ್ ಕಳುಸಿ ಜಾತಿ ನಿಂದನೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲ್ಲೂಕಿ ರಾಶ್ಚರುವು ಗ್ರಾಮ ಪಂಚಾಯ್ತಿಯಲ್ಲಿ ನಡೆದಿದೆ.
ಎರಡನೇ ಅವಧಿಗೆ ರಾಶ್ಚರುವು ಗ್ರಾಮ ಪಂಚಾಯ್ತಿಯಲ್ಲಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಗೆ ಕಳೆದ ಐದು ತಿಂಗಳ ಹಿಂದೆ ಪಂಚಾಯ್ತಿಗೆ ಬಂದ ಪಿಡಿಒ ಅಶೋಕ್ ಎಂಬಾತ ಅಧ್ಯಕ್ಷೆಯೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿರುವ ಆರೋಪ ಕೇಳಿಬಂದಿದೆ.
ಗ್ರಾಮ ಪಂಚಾಯ್ತಿಯಲ್ಲಿ ಯಾರು ಇಲ್ಲದ ವೇಳೆ ಅಸಭ್ಯವಾಗಿ ನೋಡುವುದು, ವಾಟ್ಸಾಪ್ ನಲ್ಲಿ ಐಲವ್ಯೂ ಎಂದು ಮೆಸೇಜ್ ಮಾಡಿ ಪ್ರಪೋಸ್ ಮಾಡಿರುವ ಆರೋಪ ಕೇಳಿಬಂದಿದೆ.
ಅನ್ಯ ಪುರುಷರೊಟ್ಟಿಗೆ ಲೈಂಗಿಕ ಕ್ರಿಯೆಗೆ ಸಹಕರಿಸು ಎಂದು ಒತ್ತಾಯಿಸಿರುವುದು, ಜಾತಿನಿಂದನೇ ಮಾಡಿ ದೌರ್ಜನ್ಯ ಎಸಗಿದ್ದಾನೆ ಎಂದು ದೂರಲಾಗಿದೆ.
ಮಹಿಳಾ ಸದಸ್ಯರುಗಳ ಗಂಡಂದಿರು ಏನು ಹೇಳಿದ್ರೂ ಮಾಡಬೇಕು, ಅಕ್ರಮ ಕಾಮಗಾರಿಗಳ ಖಾಲಿ ಚೆಕ್ ಗಳಿಗೆ ಸಹಿ ಮಾಡಬೇಕು. ಖಾಲಿ ಚೆಕ್ ಮೂಲಕ ಇಪ್ಪತ್ತು ಸಾವಿರ ರೂಪಾಯಿ ಕೊಡುವಂತೆ ಪಿಡಿಒ ಅಶೋಕ್ ಅದ್ಯಕ್ಷರಿಗೆ ಧಮ್ಕಿ ಹಾಕಿದ್ದಾನೆಂದು ದೂರು ಕೇಳಿಬಂದಿದೆ.
ಇನ್ನೂ ಈ ಬಗ್ಗೆ ತಾಲೂಕು ಪಂ ಇಒ , ಜಿಲ್ಲಾ ಪಂ ಸಿಇಒಗೆ ದೂರು ಕೊಟ್ಟರು ಕ್ರಮ ಕೈಗೊಳ್ಳದ ಕಾರಣ ಪಿಡಿಒ ಆಶೋಕ್ ವಿರುದ್ದ ಗ್ರಾ,ಪಂ ಅಧ್ಯಕ್ಷೆ ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…