Oplus_0
ಗ್ರಾಮ ಪಂಚಾಯ್ತಿ ಪಿಡಿಒಯೊಬ್ಬರು ಗ್ರಾ.ಪಂ ಅಧ್ಯಕ್ಷೆಗೆ ವಾಟ್ಸಾಪ್ ಚಾಟಿಂಗ್ ಮೂಲಕ ಎಂದು ಐಲವ್ ಯೂ ಎಂದು ಮೆಸೇಜ್ ಕಳುಸಿ ಜಾತಿ ನಿಂದನೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲ್ಲೂಕಿ ರಾಶ್ಚರುವು ಗ್ರಾಮ ಪಂಚಾಯ್ತಿಯಲ್ಲಿ ನಡೆದಿದೆ.
ಎರಡನೇ ಅವಧಿಗೆ ರಾಶ್ಚರುವು ಗ್ರಾಮ ಪಂಚಾಯ್ತಿಯಲ್ಲಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಗೆ ಕಳೆದ ಐದು ತಿಂಗಳ ಹಿಂದೆ ಪಂಚಾಯ್ತಿಗೆ ಬಂದ ಪಿಡಿಒ ಅಶೋಕ್ ಎಂಬಾತ ಅಧ್ಯಕ್ಷೆಯೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿರುವ ಆರೋಪ ಕೇಳಿಬಂದಿದೆ.
ಗ್ರಾಮ ಪಂಚಾಯ್ತಿಯಲ್ಲಿ ಯಾರು ಇಲ್ಲದ ವೇಳೆ ಅಸಭ್ಯವಾಗಿ ನೋಡುವುದು, ವಾಟ್ಸಾಪ್ ನಲ್ಲಿ ಐಲವ್ಯೂ ಎಂದು ಮೆಸೇಜ್ ಮಾಡಿ ಪ್ರಪೋಸ್ ಮಾಡಿರುವ ಆರೋಪ ಕೇಳಿಬಂದಿದೆ.
ಅನ್ಯ ಪುರುಷರೊಟ್ಟಿಗೆ ಲೈಂಗಿಕ ಕ್ರಿಯೆಗೆ ಸಹಕರಿಸು ಎಂದು ಒತ್ತಾಯಿಸಿರುವುದು, ಜಾತಿನಿಂದನೇ ಮಾಡಿ ದೌರ್ಜನ್ಯ ಎಸಗಿದ್ದಾನೆ ಎಂದು ದೂರಲಾಗಿದೆ.
ಮಹಿಳಾ ಸದಸ್ಯರುಗಳ ಗಂಡಂದಿರು ಏನು ಹೇಳಿದ್ರೂ ಮಾಡಬೇಕು, ಅಕ್ರಮ ಕಾಮಗಾರಿಗಳ ಖಾಲಿ ಚೆಕ್ ಗಳಿಗೆ ಸಹಿ ಮಾಡಬೇಕು. ಖಾಲಿ ಚೆಕ್ ಮೂಲಕ ಇಪ್ಪತ್ತು ಸಾವಿರ ರೂಪಾಯಿ ಕೊಡುವಂತೆ ಪಿಡಿಒ ಅಶೋಕ್ ಅದ್ಯಕ್ಷರಿಗೆ ಧಮ್ಕಿ ಹಾಕಿದ್ದಾನೆಂದು ದೂರು ಕೇಳಿಬಂದಿದೆ.
ಇನ್ನೂ ಈ ಬಗ್ಗೆ ತಾಲೂಕು ಪಂ ಇಒ , ಜಿಲ್ಲಾ ಪಂ ಸಿಇಒಗೆ ದೂರು ಕೊಟ್ಟರು ಕ್ರಮ ಕೈಗೊಳ್ಳದ ಕಾರಣ ಪಿಡಿಒ ಆಶೋಕ್ ವಿರುದ್ದ ಗ್ರಾ,ಪಂ ಅಧ್ಯಕ್ಷೆ ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…