Oplus_0
ಗ್ರಾಮ ಪಂಚಾಯ್ತಿ ಪಿಡಿಒಯೊಬ್ಬರು ಗ್ರಾ.ಪಂ ಅಧ್ಯಕ್ಷೆಗೆ ವಾಟ್ಸಾಪ್ ಚಾಟಿಂಗ್ ಮೂಲಕ ಎಂದು ಐಲವ್ ಯೂ ಎಂದು ಮೆಸೇಜ್ ಕಳುಸಿ ಜಾತಿ ನಿಂದನೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲ್ಲೂಕಿ ರಾಶ್ಚರುವು ಗ್ರಾಮ ಪಂಚಾಯ್ತಿಯಲ್ಲಿ ನಡೆದಿದೆ.
ಎರಡನೇ ಅವಧಿಗೆ ರಾಶ್ಚರುವು ಗ್ರಾಮ ಪಂಚಾಯ್ತಿಯಲ್ಲಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಗೆ ಕಳೆದ ಐದು ತಿಂಗಳ ಹಿಂದೆ ಪಂಚಾಯ್ತಿಗೆ ಬಂದ ಪಿಡಿಒ ಅಶೋಕ್ ಎಂಬಾತ ಅಧ್ಯಕ್ಷೆಯೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿರುವ ಆರೋಪ ಕೇಳಿಬಂದಿದೆ.
ಗ್ರಾಮ ಪಂಚಾಯ್ತಿಯಲ್ಲಿ ಯಾರು ಇಲ್ಲದ ವೇಳೆ ಅಸಭ್ಯವಾಗಿ ನೋಡುವುದು, ವಾಟ್ಸಾಪ್ ನಲ್ಲಿ ಐಲವ್ಯೂ ಎಂದು ಮೆಸೇಜ್ ಮಾಡಿ ಪ್ರಪೋಸ್ ಮಾಡಿರುವ ಆರೋಪ ಕೇಳಿಬಂದಿದೆ.
ಅನ್ಯ ಪುರುಷರೊಟ್ಟಿಗೆ ಲೈಂಗಿಕ ಕ್ರಿಯೆಗೆ ಸಹಕರಿಸು ಎಂದು ಒತ್ತಾಯಿಸಿರುವುದು, ಜಾತಿನಿಂದನೇ ಮಾಡಿ ದೌರ್ಜನ್ಯ ಎಸಗಿದ್ದಾನೆ ಎಂದು ದೂರಲಾಗಿದೆ.
ಮಹಿಳಾ ಸದಸ್ಯರುಗಳ ಗಂಡಂದಿರು ಏನು ಹೇಳಿದ್ರೂ ಮಾಡಬೇಕು, ಅಕ್ರಮ ಕಾಮಗಾರಿಗಳ ಖಾಲಿ ಚೆಕ್ ಗಳಿಗೆ ಸಹಿ ಮಾಡಬೇಕು. ಖಾಲಿ ಚೆಕ್ ಮೂಲಕ ಇಪ್ಪತ್ತು ಸಾವಿರ ರೂಪಾಯಿ ಕೊಡುವಂತೆ ಪಿಡಿಒ ಅಶೋಕ್ ಅದ್ಯಕ್ಷರಿಗೆ ಧಮ್ಕಿ ಹಾಕಿದ್ದಾನೆಂದು ದೂರು ಕೇಳಿಬಂದಿದೆ.
ಇನ್ನೂ ಈ ಬಗ್ಗೆ ತಾಲೂಕು ಪಂ ಇಒ , ಜಿಲ್ಲಾ ಪಂ ಸಿಇಒಗೆ ದೂರು ಕೊಟ್ಟರು ಕ್ರಮ ಕೈಗೊಳ್ಳದ ಕಾರಣ ಪಿಡಿಒ ಆಶೋಕ್ ವಿರುದ್ದ ಗ್ರಾ,ಪಂ ಅಧ್ಯಕ್ಷೆ ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…