Categories: ಕೋಲಾರ

ಗ್ರಾ.ಪಂ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ

ಕೋಲಾರ: ಗ್ರಾ.ಪಂಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯತಿ ನೌಕರರಿಗೆ ವಿವಿಧ ಹುದ್ದೆಗಳಿಗೆ ಬಡ್ತಿ ನೀಡಬೇಕು ಮತ್ತು ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಬುಧವಾರ ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಗೌರವ ಅಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಗ್ರಾಮ ಪಂಚಾಯತಿಗಳಲ್ಲಿ ಕನಿಷ್ಠ 6 ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ ನೌಕರರಿಗೆ ಜೇಷ್ಠತಾ ಪಟ್ಟಿಯಂತೆ ಬಡ್ತಿ ಆದೇಶ ನೀಡಬೇಕು. ಅನುಕುಂಪದ ಹುದ್ದೆಗಳಿಗೆ ನೌಕರನ ಕುಟಂಬದವರ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಕ್ಕೆ ಪರಿಗಣಿಸಬೇಕು. ಗ್ರಾಮ ಪಂಚಾಯಿತಿ ಕಾರ್ಯನಿರ್ವಹಿಸಿದ ನೌಕರರಿಗೆ ನಿವೃತ್ತಿ ನಂತರ ಉಪದಾನ (ಗ್ರ್ಯಾಚ್ಯುಟಿ)ನೀಡಬೇಕು ಎಂದು ಒತ್ತಾಯಿಸಿದರು.

ಸುಮಾರು ವರ್ಷಗಳಿಂದ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇದ್ದ ಬಿಲ್ ಕಲೆಕ್ಟರ್ ಹಾಗೂ ಕ್ಲರ್ಕ್ ಹುದ್ದೆಗಳಿಗೆ ನಮ್ಮಲ್ಲಿಯೇ ಸೇವೆ ಸಲ್ಲಿಸಿದ ನೌಕರರನ್ನು ಪರಿಗಣಿಸಬೇಕು. ಜೊತೆಗೆ ಕರ ವಸೂಲಿಗಾರರು, ಕ್ಲರ್ಕ್‌, ಡಾಟಾ ಎಂಟ್ರಿ ಆಪರೇಟರ್ಸ್, ನೀರುಗಂಟಿಗಳು, ಜವಾನ್, ಸ್ವಚ್ಛತಾಗಾರರು ಕೆಲಸ ಮಾಡುತ್ತಿದ್ದಾರೆ. ಇವರೆಲ್ಲರೂ ಸರ್ಕಾರಿ ನೌಕರರೆಂದು ಘೋಷಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಜನಸಂಖ್ಯೆಗೆ ಆಧರಿಸಿ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಬೇಕು. ಲೆಕ್ಕ ಸಹಾಯಕ ಹುದ್ದೆ ಸೃಷ್ಟಿಸಬೇಕು. ಸೇವಾ ಹಿರಿತನ ಪರಿಗಣಿಸಿ ವೇತನ ಹೆಚ್ಚಳ ಮಾಡಬೇಕು. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಲವು ಬಾರಿ ಪ್ರತಿಭಟನೆ ನಡೆಸಲಾಗಿದೆ. ಮುಖ್ಯಮಂತ್ರಿ ಹಾಗೂ ಸಚಿವರಿಗೂ ಮನವಿ ಸಲ್ಲಿಸಲಾಗಿದೆ. ಆದರೆ, ಇದುವರೆಗೂ ನಮ್ಮ ಬೇಡಿಕೆ ಈಡೇರಿಲ್ಲ ಮುಂಬರುವ ದಿನಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ, ಗಂಭೀರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಪಂ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಅಮರಾನಾರಾಯಣಪ್ಪ ಮಾತನಾಡಿ, ಗ್ರಾಪಂ ನೌಕರರಿಗೆ ಕನಿಷ್ಠ ವೇತನ, ತುಟ್ಟಿ ಭತ್ಯೆಯನ್ನು ಇಎಫ್‌ಎಂಎಸ್‌ ಮುಖಾಂತರ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ನೇರವಾಗಿ ನೌಕರನ ಖಾತೆಗೆ ಜಮಾವಣೆ ಮಾಡಬೇಕು. ಬಾಕಿ ಇರುವ ಎಲ್ಲ ನೌಕರರ ವೇತನವನ್ನು 14ನೇ ಹಣಕಾಸು ಯೋಜನೆ ಸೇರಿದಂತೆ ಇತರೆ ಸರಕಾರದ ಅನುದಾನವನ್ನು ಸೇರಿಸಿ ನೀಡಬೇಕು. 60 ವರ್ಷ ಮೇಲ್ಪಟ್ಟ ನಿವೃತ್ತಿ ಹೊಂದಿದ ನೌಕರರಿಗೆ ಉಪಧನ ಮತ್ತು ಮರಣ ಪರಿಹಾರ ಧನವನ್ನು ನೀಡಬೇಕು. ಡಾಟಾ ಎಂಟ್ರಿ ಅಪರೇಟರ್‌ಗಳನ್ನು ಪದೋನ್ನತಿಗೆ ಅವಕಾಶ ಕಲ್ಪಿಸಬೇಕು. ಅಕ್ರಮ ನೇಮಕಾತಿ ನಿಲ್ಲಿಸಬೇಕು ಎಂದು ಅಗ್ರಹಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ನೌಕರರ ಸಂಘದ ಜಿಲ್ಲಾ ಖಜಾಂಚಿ ಕೇಶವರಾವ್, ಸಂಘಟನಾ ಸಂಚಾಲಕ ಎಂ.ವಿಜಯಕೃಷ್ಣ, ವಿವಿಧ ತಾಲೂಕು ಅಧ್ಯಕ್ಷ ಕಾರ್ಯದರ್ಶಿಗಳಾದ ಶಿವರಾಮಯ್ಯ, ರೆಡ್ಡೆಪ್ಪ, ವೆಂಕಟರಾಮೇಗೌಡ, ಶಿವಶಂಕರ್, ನಾರಾಯಣಸ್ವಾಮಿ, ಚಂದ್ರಪ್ಪ, ಮೋಹನ್, ರಾಮಕೃಷ್ಣ, ಜಯಶಂಕರ್, ಮುಂತಾದವರು ಇದ್ದರು

Ramesh Babu

Journalist

Recent Posts

How To Choose The Best Real Money Casino Sites And Utilize Them

There are many benefits to playing at real money casino sites. Whether you are looking…

4 hours ago

ವಿಧಾನಸೌಧದಲ್ಲಿ ಐತಿಹಾಸಿಕ ತೀರ್ಮಾನ: ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ- ಸಚಿವ ಕೆ.ಎಚ್ ಮುನಿಯಪ್ಪ

ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago

ನಟಸಾರ್ವಭೌಮ ಡಾ.ರಾಜ್ ಉದ್ಯಾನ ಜನಾರ್ಪಣೆಗೊಳಿಸಿದ ಸಚಿವ ಕೆ.ಜೆ ಜಾರ್ಜ್

ಕನ್ನಡದ ಕಣ್ಮಣಿ ಡಾ.ರಾಜ್‌ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…

6 hours ago

ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ. ಪಿ.ಪಾಂಡುಸಿಂಧೆ ಆಯ್ಕೆ

ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…

6 hours ago

ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಣೆ: ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಕಾಡನೂರು ಗ್ರಾ.ಪಂ ಗೆ ಬಹುಮಾನ ವಿತರಣೆ

ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…

8 hours ago

ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…

9 hours ago