Categories: ಕೋಲಾರ

ಗ್ರಾ.ಪಂ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ

ಕೋಲಾರ: ಗ್ರಾ.ಪಂಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯತಿ ನೌಕರರಿಗೆ ವಿವಿಧ ಹುದ್ದೆಗಳಿಗೆ ಬಡ್ತಿ ನೀಡಬೇಕು ಮತ್ತು ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಬುಧವಾರ ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಗೌರವ ಅಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಗ್ರಾಮ ಪಂಚಾಯತಿಗಳಲ್ಲಿ ಕನಿಷ್ಠ 6 ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ ನೌಕರರಿಗೆ ಜೇಷ್ಠತಾ ಪಟ್ಟಿಯಂತೆ ಬಡ್ತಿ ಆದೇಶ ನೀಡಬೇಕು. ಅನುಕುಂಪದ ಹುದ್ದೆಗಳಿಗೆ ನೌಕರನ ಕುಟಂಬದವರ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಕ್ಕೆ ಪರಿಗಣಿಸಬೇಕು. ಗ್ರಾಮ ಪಂಚಾಯಿತಿ ಕಾರ್ಯನಿರ್ವಹಿಸಿದ ನೌಕರರಿಗೆ ನಿವೃತ್ತಿ ನಂತರ ಉಪದಾನ (ಗ್ರ್ಯಾಚ್ಯುಟಿ)ನೀಡಬೇಕು ಎಂದು ಒತ್ತಾಯಿಸಿದರು.

ಸುಮಾರು ವರ್ಷಗಳಿಂದ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇದ್ದ ಬಿಲ್ ಕಲೆಕ್ಟರ್ ಹಾಗೂ ಕ್ಲರ್ಕ್ ಹುದ್ದೆಗಳಿಗೆ ನಮ್ಮಲ್ಲಿಯೇ ಸೇವೆ ಸಲ್ಲಿಸಿದ ನೌಕರರನ್ನು ಪರಿಗಣಿಸಬೇಕು. ಜೊತೆಗೆ ಕರ ವಸೂಲಿಗಾರರು, ಕ್ಲರ್ಕ್‌, ಡಾಟಾ ಎಂಟ್ರಿ ಆಪರೇಟರ್ಸ್, ನೀರುಗಂಟಿಗಳು, ಜವಾನ್, ಸ್ವಚ್ಛತಾಗಾರರು ಕೆಲಸ ಮಾಡುತ್ತಿದ್ದಾರೆ. ಇವರೆಲ್ಲರೂ ಸರ್ಕಾರಿ ನೌಕರರೆಂದು ಘೋಷಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಜನಸಂಖ್ಯೆಗೆ ಆಧರಿಸಿ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಬೇಕು. ಲೆಕ್ಕ ಸಹಾಯಕ ಹುದ್ದೆ ಸೃಷ್ಟಿಸಬೇಕು. ಸೇವಾ ಹಿರಿತನ ಪರಿಗಣಿಸಿ ವೇತನ ಹೆಚ್ಚಳ ಮಾಡಬೇಕು. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಲವು ಬಾರಿ ಪ್ರತಿಭಟನೆ ನಡೆಸಲಾಗಿದೆ. ಮುಖ್ಯಮಂತ್ರಿ ಹಾಗೂ ಸಚಿವರಿಗೂ ಮನವಿ ಸಲ್ಲಿಸಲಾಗಿದೆ. ಆದರೆ, ಇದುವರೆಗೂ ನಮ್ಮ ಬೇಡಿಕೆ ಈಡೇರಿಲ್ಲ ಮುಂಬರುವ ದಿನಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ, ಗಂಭೀರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಪಂ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಅಮರಾನಾರಾಯಣಪ್ಪ ಮಾತನಾಡಿ, ಗ್ರಾಪಂ ನೌಕರರಿಗೆ ಕನಿಷ್ಠ ವೇತನ, ತುಟ್ಟಿ ಭತ್ಯೆಯನ್ನು ಇಎಫ್‌ಎಂಎಸ್‌ ಮುಖಾಂತರ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ನೇರವಾಗಿ ನೌಕರನ ಖಾತೆಗೆ ಜಮಾವಣೆ ಮಾಡಬೇಕು. ಬಾಕಿ ಇರುವ ಎಲ್ಲ ನೌಕರರ ವೇತನವನ್ನು 14ನೇ ಹಣಕಾಸು ಯೋಜನೆ ಸೇರಿದಂತೆ ಇತರೆ ಸರಕಾರದ ಅನುದಾನವನ್ನು ಸೇರಿಸಿ ನೀಡಬೇಕು. 60 ವರ್ಷ ಮೇಲ್ಪಟ್ಟ ನಿವೃತ್ತಿ ಹೊಂದಿದ ನೌಕರರಿಗೆ ಉಪಧನ ಮತ್ತು ಮರಣ ಪರಿಹಾರ ಧನವನ್ನು ನೀಡಬೇಕು. ಡಾಟಾ ಎಂಟ್ರಿ ಅಪರೇಟರ್‌ಗಳನ್ನು ಪದೋನ್ನತಿಗೆ ಅವಕಾಶ ಕಲ್ಪಿಸಬೇಕು. ಅಕ್ರಮ ನೇಮಕಾತಿ ನಿಲ್ಲಿಸಬೇಕು ಎಂದು ಅಗ್ರಹಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ನೌಕರರ ಸಂಘದ ಜಿಲ್ಲಾ ಖಜಾಂಚಿ ಕೇಶವರಾವ್, ಸಂಘಟನಾ ಸಂಚಾಲಕ ಎಂ.ವಿಜಯಕೃಷ್ಣ, ವಿವಿಧ ತಾಲೂಕು ಅಧ್ಯಕ್ಷ ಕಾರ್ಯದರ್ಶಿಗಳಾದ ಶಿವರಾಮಯ್ಯ, ರೆಡ್ಡೆಪ್ಪ, ವೆಂಕಟರಾಮೇಗೌಡ, ಶಿವಶಂಕರ್, ನಾರಾಯಣಸ್ವಾಮಿ, ಚಂದ್ರಪ್ಪ, ಮೋಹನ್, ರಾಮಕೃಷ್ಣ, ಜಯಶಂಕರ್, ಮುಂತಾದವರು ಇದ್ದರು

Ramesh Babu

Journalist

Recent Posts

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

33 minutes ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

6 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

9 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

11 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

22 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

1 day ago