ಬಾಗಲಕೋಟೆ ಜಿಲ್ಲೆ: ಸ್ಮಶಾನ ಜಾಗಕ್ಕೆ ಒತ್ತಾಯಿಸಿ ಬಾಗಲಕೋಟೆ ತಾಲೂಕಿನ ಹಳ್ಳೂರು ಗ್ರಾಮಸ್ಥರು ಗ್ರಾ.ಪಂ ಕಚೇರಿಯ ಮುಂದೆ ಕಟ್ಟಿಗೆ ಹಾಕಿ ಶವ ಸಂಸ್ಕಾರಕ್ಕೆ ಮುಂದಾದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ಮೀಸಲಾಗಿದ್ದ ದಾನದ ಜಮೀನು ವಿವಾದಕ್ಕೊಳಗಾದ ಹಿನ್ನೆಲೆಯಲ್ಲಿ ಗ್ರಾಮದಲ್ಲೀಗ ಶವಸಂಸ್ಕಾರಕ್ಕೆ ತೊಂದರೆಯಾಗಿದೆ.
ಗ್ರಾಮದಲ್ಲಿ ಬುಧವಾರ ಮೃತಪಟ್ಟ ಸಂಗನಗೌಡ ಮೇಟಿ ಉರ್ಪ ಮುಗಳೊಳ್ಳಿ ಅವರ ಶವಸಂಸ್ಕಾರಕ್ಕೆ ಜಾಗದ ಸಮಸ್ಯೆಯಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಬೇಕಾಯಿತು.
ಸ್ಥಳಕ್ಕೆ ತಹಶಿಲ್ದಾರ ಮತ್ತು ಪೊಲೀಸರು ಆಗಮಿಸಿ ಗ್ರಾಮಸ್ಥರ ನಡುವೆ ಸಂಧಾನ ಮಾತುಕತೆ ನಡೆಸಿದರು.
ಈ ವೇಳೆ ಗ್ರಾಮಸ್ಥರು ಹಾಗೂ ಗ್ರಾ.ಪಂ ಅಧಿಕಾರಿಗಳ ನಡುವೆ ಜಟಾಪಟಿ ನಡೆದು ಕೊನೆಗೆ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲಾಯಿತು.
ವಿವಾದಿತ ಜಾಗದ ಕುರಿತು ವಿಚಾರಣೆ ಆಗಸ್ಟ್ 23ರಂದು ನ್ಯಾಯಾಲಯದಲ್ಲಿ ನಡೆಯಲಿದ್ದು, ಬಳಿಕವಷ್ಟೇ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಗ್ರಾಮಸ್ಥರು ಒಪ್ಪಿಗೆ ಸೂಚಿಸಿದರು.
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…