ಬಾಗಲಕೋಟೆ ಜಿಲ್ಲೆ: ಸ್ಮಶಾನ ಜಾಗಕ್ಕೆ ಒತ್ತಾಯಿಸಿ ಬಾಗಲಕೋಟೆ ತಾಲೂಕಿನ ಹಳ್ಳೂರು ಗ್ರಾಮಸ್ಥರು ಗ್ರಾ.ಪಂ ಕಚೇರಿಯ ಮುಂದೆ ಕಟ್ಟಿಗೆ ಹಾಕಿ ಶವ ಸಂಸ್ಕಾರಕ್ಕೆ ಮುಂದಾದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ಮೀಸಲಾಗಿದ್ದ ದಾನದ ಜಮೀನು ವಿವಾದಕ್ಕೊಳಗಾದ ಹಿನ್ನೆಲೆಯಲ್ಲಿ ಗ್ರಾಮದಲ್ಲೀಗ ಶವಸಂಸ್ಕಾರಕ್ಕೆ ತೊಂದರೆಯಾಗಿದೆ.
ಗ್ರಾಮದಲ್ಲಿ ಬುಧವಾರ ಮೃತಪಟ್ಟ ಸಂಗನಗೌಡ ಮೇಟಿ ಉರ್ಪ ಮುಗಳೊಳ್ಳಿ ಅವರ ಶವಸಂಸ್ಕಾರಕ್ಕೆ ಜಾಗದ ಸಮಸ್ಯೆಯಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಬೇಕಾಯಿತು.
ಸ್ಥಳಕ್ಕೆ ತಹಶಿಲ್ದಾರ ಮತ್ತು ಪೊಲೀಸರು ಆಗಮಿಸಿ ಗ್ರಾಮಸ್ಥರ ನಡುವೆ ಸಂಧಾನ ಮಾತುಕತೆ ನಡೆಸಿದರು.
ಈ ವೇಳೆ ಗ್ರಾಮಸ್ಥರು ಹಾಗೂ ಗ್ರಾ.ಪಂ ಅಧಿಕಾರಿಗಳ ನಡುವೆ ಜಟಾಪಟಿ ನಡೆದು ಕೊನೆಗೆ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲಾಯಿತು.
ವಿವಾದಿತ ಜಾಗದ ಕುರಿತು ವಿಚಾರಣೆ ಆಗಸ್ಟ್ 23ರಂದು ನ್ಯಾಯಾಲಯದಲ್ಲಿ ನಡೆಯಲಿದ್ದು, ಬಳಿಕವಷ್ಟೇ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಗ್ರಾಮಸ್ಥರು ಒಪ್ಪಿಗೆ ಸೂಚಿಸಿದರು.
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…