ಬಾಗಲಕೋಟೆ ಜಿಲ್ಲೆ: ಸ್ಮಶಾನ ಜಾಗಕ್ಕೆ ಒತ್ತಾಯಿಸಿ ಬಾಗಲಕೋಟೆ ತಾಲೂಕಿನ ಹಳ್ಳೂರು ಗ್ರಾಮಸ್ಥರು ಗ್ರಾ.ಪಂ ಕಚೇರಿಯ ಮುಂದೆ ಕಟ್ಟಿಗೆ ಹಾಕಿ ಶವ ಸಂಸ್ಕಾರಕ್ಕೆ ಮುಂದಾದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ಮೀಸಲಾಗಿದ್ದ ದಾನದ ಜಮೀನು ವಿವಾದಕ್ಕೊಳಗಾದ ಹಿನ್ನೆಲೆಯಲ್ಲಿ ಗ್ರಾಮದಲ್ಲೀಗ ಶವಸಂಸ್ಕಾರಕ್ಕೆ ತೊಂದರೆಯಾಗಿದೆ.
ಗ್ರಾಮದಲ್ಲಿ ಬುಧವಾರ ಮೃತಪಟ್ಟ ಸಂಗನಗೌಡ ಮೇಟಿ ಉರ್ಪ ಮುಗಳೊಳ್ಳಿ ಅವರ ಶವಸಂಸ್ಕಾರಕ್ಕೆ ಜಾಗದ ಸಮಸ್ಯೆಯಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಬೇಕಾಯಿತು.
ಸ್ಥಳಕ್ಕೆ ತಹಶಿಲ್ದಾರ ಮತ್ತು ಪೊಲೀಸರು ಆಗಮಿಸಿ ಗ್ರಾಮಸ್ಥರ ನಡುವೆ ಸಂಧಾನ ಮಾತುಕತೆ ನಡೆಸಿದರು.
ಈ ವೇಳೆ ಗ್ರಾಮಸ್ಥರು ಹಾಗೂ ಗ್ರಾ.ಪಂ ಅಧಿಕಾರಿಗಳ ನಡುವೆ ಜಟಾಪಟಿ ನಡೆದು ಕೊನೆಗೆ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲಾಯಿತು.
ವಿವಾದಿತ ಜಾಗದ ಕುರಿತು ವಿಚಾರಣೆ ಆಗಸ್ಟ್ 23ರಂದು ನ್ಯಾಯಾಲಯದಲ್ಲಿ ನಡೆಯಲಿದ್ದು, ಬಳಿಕವಷ್ಟೇ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಗ್ರಾಮಸ್ಥರು ಒಪ್ಪಿಗೆ ಸೂಚಿಸಿದರು.
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…