ಬಾಗಲಕೋಟೆ ಜಿಲ್ಲೆ: ಸ್ಮಶಾನ ಜಾಗಕ್ಕೆ ಒತ್ತಾಯಿಸಿ ಬಾಗಲಕೋಟೆ ತಾಲೂಕಿನ ಹಳ್ಳೂರು ಗ್ರಾಮಸ್ಥರು ಗ್ರಾ.ಪಂ ಕಚೇರಿಯ ಮುಂದೆ ಕಟ್ಟಿಗೆ ಹಾಕಿ ಶವ ಸಂಸ್ಕಾರಕ್ಕೆ ಮುಂದಾದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ಮೀಸಲಾಗಿದ್ದ ದಾನದ ಜಮೀನು ವಿವಾದಕ್ಕೊಳಗಾದ ಹಿನ್ನೆಲೆಯಲ್ಲಿ ಗ್ರಾಮದಲ್ಲೀಗ ಶವಸಂಸ್ಕಾರಕ್ಕೆ ತೊಂದರೆಯಾಗಿದೆ.
ಗ್ರಾಮದಲ್ಲಿ ಬುಧವಾರ ಮೃತಪಟ್ಟ ಸಂಗನಗೌಡ ಮೇಟಿ ಉರ್ಪ ಮುಗಳೊಳ್ಳಿ ಅವರ ಶವಸಂಸ್ಕಾರಕ್ಕೆ ಜಾಗದ ಸಮಸ್ಯೆಯಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಬೇಕಾಯಿತು.
ಸ್ಥಳಕ್ಕೆ ತಹಶಿಲ್ದಾರ ಮತ್ತು ಪೊಲೀಸರು ಆಗಮಿಸಿ ಗ್ರಾಮಸ್ಥರ ನಡುವೆ ಸಂಧಾನ ಮಾತುಕತೆ ನಡೆಸಿದರು.
ಈ ವೇಳೆ ಗ್ರಾಮಸ್ಥರು ಹಾಗೂ ಗ್ರಾ.ಪಂ ಅಧಿಕಾರಿಗಳ ನಡುವೆ ಜಟಾಪಟಿ ನಡೆದು ಕೊನೆಗೆ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲಾಯಿತು.
ವಿವಾದಿತ ಜಾಗದ ಕುರಿತು ವಿಚಾರಣೆ ಆಗಸ್ಟ್ 23ರಂದು ನ್ಯಾಯಾಲಯದಲ್ಲಿ ನಡೆಯಲಿದ್ದು, ಬಳಿಕವಷ್ಟೇ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಗ್ರಾಮಸ್ಥರು ಒಪ್ಪಿಗೆ ಸೂಚಿಸಿದರು.
ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…
ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,... 94, ನಾಟ್ ಔಟ್, ಶತಕಕ್ಕೆ 6 ಮಾತ್ರ ಬಾಕಿ, ಅವರು ಶತಕವನ್ನು ಪೂರೈಸಲಿ…
ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…
ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…
ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…