ಗ್ರಾ.ಪಂ ಮುಂದೆ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು: ಏಕೆ ಗೊತ್ತಾ‌….?

ಬಾಗಲಕೋಟೆ ಜಿಲ್ಲೆ: ಸ್ಮಶಾನ ಜಾಗಕ್ಕೆ ಒತ್ತಾಯಿಸಿ ಬಾಗಲಕೋಟೆ ತಾಲೂಕಿನ ಹಳ್ಳೂರು ಗ್ರಾಮಸ್ಥರು ಗ್ರಾ.ಪಂ ಕಚೇರಿಯ ಮುಂದೆ ಕಟ್ಟಿಗೆ ಹಾಕಿ ಶವ ಸಂಸ್ಕಾರಕ್ಕೆ ಮುಂದಾದ ಘಟನೆ ಬುಧವಾರ ಮುಂಜಾನೆ ನಡೆದಿದೆ.

ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ಮೀಸಲಾಗಿದ್ದ ದಾನದ ಜಮೀನು ವಿವಾದಕ್ಕೊಳಗಾದ ಹಿನ್ನೆಲೆಯಲ್ಲಿ ಗ್ರಾಮದಲ್ಲೀಗ ಶವಸಂಸ್ಕಾರಕ್ಕೆ ತೊಂದರೆಯಾಗಿದೆ.

ಗ್ರಾಮದಲ್ಲಿ ಬುಧವಾರ ಮೃತಪಟ್ಟ ಸಂಗನಗೌಡ ಮೇಟಿ ಉರ್ಪ ಮುಗಳೊಳ್ಳಿ ಅವರ ಶವಸಂಸ್ಕಾರಕ್ಕೆ ಜಾಗದ ಸಮಸ್ಯೆಯಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಬೇಕಾಯಿತು.

ಸ್ಥಳಕ್ಕೆ ತಹಶಿಲ್ದಾರ ಮತ್ತು ಪೊಲೀಸರು ಆಗಮಿಸಿ ಗ್ರಾಮಸ್ಥರ ನಡುವೆ ಸಂಧಾನ ಮಾತುಕತೆ ನಡೆಸಿದರು.

ಈ ವೇಳೆ ಗ್ರಾಮಸ್ಥರು ಹಾಗೂ ಗ್ರಾ.ಪಂ ಅಧಿಕಾರಿಗಳ ನಡುವೆ ಜಟಾಪಟಿ ನಡೆದು ಕೊನೆಗೆ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲಾಯಿತು.

ವಿವಾದಿತ ಜಾಗದ ಕುರಿತು ವಿಚಾರಣೆ ಆಗಸ್ಟ್‌ 23ರಂದು ನ್ಯಾಯಾಲಯದಲ್ಲಿ ನಡೆಯಲಿದ್ದು, ಬಳಿಕವಷ್ಟೇ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಗ್ರಾಮಸ್ಥರು ಒಪ್ಪಿಗೆ ಸೂಚಿಸಿದರು.

Ramesh Babu

Journalist

Recent Posts

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 hour ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

2 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

5 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

5 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

8 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

18 hours ago