ಬಾಗಲಕೋಟೆ ಜಿಲ್ಲೆ: ಸ್ಮಶಾನ ಜಾಗಕ್ಕೆ ಒತ್ತಾಯಿಸಿ ಬಾಗಲಕೋಟೆ ತಾಲೂಕಿನ ಹಳ್ಳೂರು ಗ್ರಾಮಸ್ಥರು ಗ್ರಾ.ಪಂ ಕಚೇರಿಯ ಮುಂದೆ ಕಟ್ಟಿಗೆ ಹಾಕಿ ಶವ ಸಂಸ್ಕಾರಕ್ಕೆ ಮುಂದಾದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ಮೀಸಲಾಗಿದ್ದ ದಾನದ ಜಮೀನು ವಿವಾದಕ್ಕೊಳಗಾದ ಹಿನ್ನೆಲೆಯಲ್ಲಿ ಗ್ರಾಮದಲ್ಲೀಗ ಶವಸಂಸ್ಕಾರಕ್ಕೆ ತೊಂದರೆಯಾಗಿದೆ.
ಗ್ರಾಮದಲ್ಲಿ ಬುಧವಾರ ಮೃತಪಟ್ಟ ಸಂಗನಗೌಡ ಮೇಟಿ ಉರ್ಪ ಮುಗಳೊಳ್ಳಿ ಅವರ ಶವಸಂಸ್ಕಾರಕ್ಕೆ ಜಾಗದ ಸಮಸ್ಯೆಯಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಬೇಕಾಯಿತು.
ಸ್ಥಳಕ್ಕೆ ತಹಶಿಲ್ದಾರ ಮತ್ತು ಪೊಲೀಸರು ಆಗಮಿಸಿ ಗ್ರಾಮಸ್ಥರ ನಡುವೆ ಸಂಧಾನ ಮಾತುಕತೆ ನಡೆಸಿದರು.
ಈ ವೇಳೆ ಗ್ರಾಮಸ್ಥರು ಹಾಗೂ ಗ್ರಾ.ಪಂ ಅಧಿಕಾರಿಗಳ ನಡುವೆ ಜಟಾಪಟಿ ನಡೆದು ಕೊನೆಗೆ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲಾಯಿತು.
ವಿವಾದಿತ ಜಾಗದ ಕುರಿತು ವಿಚಾರಣೆ ಆಗಸ್ಟ್ 23ರಂದು ನ್ಯಾಯಾಲಯದಲ್ಲಿ ನಡೆಯಲಿದ್ದು, ಬಳಿಕವಷ್ಟೇ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಗ್ರಾಮಸ್ಥರು ಒಪ್ಪಿಗೆ ಸೂಚಿಸಿದರು.
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…