ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ

ಜಿಬಿಎ ಅಡಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣ ಎಂದು 5 ನಗರ ಪಾಲಿಕೆಗಳನ್ನು ರಚಿಸಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಇನ್ನು ಇತಿಹಾಸದ ಪುಟ ಸೇರಿದ್ದು, ಬೆಂಗಳೂರಿನ ಆಡಳಿತ ಸುಧಾರಣೆಗಾಗಿ ರಾಜ್ಯ ಸರ್ಕಾರ ಬಿಬಿಎಂಪಿಯನ್ನು ಗ್ರೇಟರ್​ ಬೆಂಗಳೂರು ಪ್ರಾಧಿಕಾರದಡಿ ಐದು ಮಹಾನಗರ ಪಾಲಿಕೆಗಳನ್ನಾಗಿ ರಚನೆ ಮಾಡಿ ಮಂಗಳವಾರ ಅಧಸೂಚನೆ ಹೊರಡಿಸಿದೆ.

ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಅಂಗೀಕರಿಸಲಾದ 2024ರ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯಡಿಯಲ್ಲಿ ಬಿಬಿಎಂಪಿಯನ್ನು ಐದು ಮಹಾನಗರ ಪಾಲಿಕೆಗಳಾಗಿ ರಚನೆ ಮಾಡಿ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ.

ಈ ಕ್ರಮವು ಬೆಂಗಳೂರು ಪಶ್ಚಿಮ ನಗರ ಮಹಾನಗರ ಪಾಲಿಕೆ, ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ, ಬೆಂಗಳೂರು ಉತ್ತರ ಮಹಾನಗರ ಪಾಲಿಕೆ, ಬೆಂಗಳೂರು ಪೂರ್ವ ಮಹಾನಗರ ಬಾಲಿಕೆ ಮತ್ತು ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆಗಳ ರಚನೆಗೆ ದಾರಿ ಮಾಡಿಕೊಡುತ್ತದೆ. ಅಧಿಸೂಚನೆಯಲ್ಲಿ ಐದು ನಿಗಮಗಳ ಗಡಿಗಳನ್ನು ಸಹ ನಿಗದಿಪಡಿಸಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ)ದ ಅಡಿಯಲ್ಲಿ ಹೊಸದಾಗಿ ರಚನೆಯಾದ ಮಹಾನಗರ ಪಾಲಿಗಳಿಗೆ ವ್ಯಾಪಕ ಆಡಳಿತಾತ್ಮಕ ಅನುಭವ ಹೊಂದಿರುವ ಹಿರಿಯ ಅಧಿಕಾರಿಗಳನ್ನು ಆಯುಕ್ತರನ್ನಾಗಿ ನೇಮಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ ತಿಳಿಸಿದ್ದರು.

“ನಾವು ಈ ಐದು ಮಹಾನಗರ ಪಾಲಿಕೆಗೆಳಿಗೆ ಅಧಿಕಾರಿಗಳ ನೇಮಕಾತಿಯ ಬಗ್ಗೆ ಚರ್ಚಿಸಿದ್ದೇವೆ ಮತ್ತು ಈಗಾಗಲೇ ಸ್ಥಳೀಯವಾಗಿ ಸೇವೆ ಸಲ್ಲಿಸುತ್ತಿರುವವರನ್ನು ನೇಮಿಸಲು ನಿರ್ಧರಿಸಲಾಗಿದೆ” ಎಂದು ಹೇಳಿದರು.

ಜಿಬಿಎಗೆ ಮುಖ್ಯಮಂತ್ರಿಗಳು ಪದನಿಮಿತ್ತ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಬೆಂಗಳೂರು ಅಭಿವೃದ್ಧಿ ಸಚಿವರು ಪದನಿಮಿತ್ತ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ ಎಂದರು.

ಜಿಬಿಎ ಐದು ಪಾಲಿಕೆಗಳ ಆಯುಕ್ತರನ್ನಾಗಿ ಹಿರಿಯ ಅಧಿಕಾರಿಗಳ ನೇಮಕ

ಆಡಳಿತಾತ್ಮಕ ಅನುಭವವಿರುವ, ಉಪ ಆಯುಕ್ತರುಗಳಾಗಿ ಕೆಲಸ ನಿರ್ವಹಿಸಿರುವ ಹಿರಿಯ ಅಧಿಕಾರಿಗಳನ್ನು ಇಂದಿನಿಂದ ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಆಯುಕ್ತರನ್ನಾಗಿ ನೇಮಕ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಯಾವ, ಯಾವ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈಗ ಸ್ಥಳೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನೇ ಪಾಲಿಕೆಗಳಿಗೆ ನಿಯೋಜನೆ ಮಾಡಲಾಗುವುದು ಎಂದು‌ ತಿಳಿಸಿದ್ದಾರೆ..

Ramesh Babu

Journalist

Recent Posts

ನೇಕಾರಿಕೆ ಪರಂಪರೆಗೆ ಆಧುನಿಕ ಸವಾಲುಗಳು: ಅಸ್ತಿತ್ವಕ್ಕಾಗಿ ದೊಡ್ಡಬಳ್ಳಾಪುರ ನೇಕಾರರ ಹೋರಾಟ: ಅವನತಿಯತ್ತ ಸಾಗುತ್ತಿದೆ ಸುವರ್ಣಯುಗದ ವೈಭವ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…

21 hours ago

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026: ಇಂದಿನಿಂದ ಬಿಎಲ್ಒ ಗಳು ಮನೆ ಮನೆ ಭೇಟಿ- ಡಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳ‍ವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…

24 hours ago

ನಂದಿಬೆಟ್ಟದ ತಪ್ಪಲಿನಲ್ಲಿ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಜಿಂಕೆ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…

2 days ago

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಚಾಲಕ

ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗೇಟ್ ಸಮೀಪ ಹಾದುಹೋಗಿರುವ ದಾಬಸ್ ಪೇಟೆ - ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರೊಂದು ಚಾಲಕನ…

2 days ago

ನೀಟ್ ಅಕ್ರಮ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದ ಕೇಂದ್ರ ಸರ್ಕಾರ- ಟಿ. ವೆಂಕಟರಮಣಯ್ಯ ಆರೋಪ

ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ದೊಡ್ಡಬಳ್ಳಾಪುರದಲ್ಲಿ…

2 days ago

ಅತಿ ಶೀಘ್ರದಲ್ಲಿ ಸಿಎಂ ಡಿಕೆಶಿ ಘಾಟಿಗೆ ಭೇಟಿ- ಆರ್.ವಿ ಮಹೇಶ್ ಕುಮಾರ್

ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ…

2 days ago