Categories: ಕೊಡಗು

ಗ್ರೇಟರ್ ರಾಜಾಸೀಟ್ ಅಕ್ರಮ ಆರೋಪ: ತನಿಖೆ ಆರಂಭಿಸಿದ ಲೋಕಾಯುಕ್ತ

ಮಡಿಕೇರಿಯಲ್ಲಿ‌ ನಿರ್ಮಾಣವಾಗಿರುವ ಗ್ರೇಟರ್ ರಾಜಾ ಸೀಟ್ ಕಾಮಗಾರಿಯಲ್ಲಿ ಬಹು ಅಕ್ರಮ ನಡೆದಿದೆ ಹಾಗೂ ನಕಲಿ ಎಂ.ಬಿ.ಪುಸ್ತಕ ಸೃಷ್ಟಿಸಿ ಅಪರಾಧ ಎಸಗಿದ್ದಾರೆ ಎಂದು ಅಂದಿನ ಲೋಕೋಪಯೋಗಿ ಜ್ಯೂನಿಯರ್ ಇಂಜಿನಿಯರ್ ಕೆ.ಎಲ್.ದೇವರಾಜ್ ಮತ್ತು ಮೇಲಾಧಿಕಾರಿಗಳ ವಿರುದ್ಧ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಕರ್ನಾಟಕ ಲೋಕಾಯುಕ್ತ ಕ್ಕೆ ಸಲ್ಲಿಸಿದ್ದ ದೂರಿನ ಹಿನ್ನಲೆಯಲ್ಲಿ ಇಂದು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ತಾಂತ್ರಿಕ ವಿಭಾಗದ ತನಿಖಾಧಿಕಾರಿ ತೇಜಶ್ರೀ ಬಿ.ಮದ್ದೋಡಿ ಲೋಕೋಪಯೋಗಿ ಅಧಿಕಾರಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿ ದಾಖಲೆಗಳನ್ನು ಪರಿಶೀಲಿಸಿ ಸಂಗ್ರಹಿಸಿದರು.

ಆರಂಭದಲ್ಲಿ ಆರೋಪಿತ ಕಿರಿಯ ಇಂಜಿನಿಯರ್ ಎಂ.ಬಿ‌.ಪುಸ್ತಕ ಅಸಲಿ ಎಂದು ವಾದಿಸಿದರೂ ಕೊನೆಗೆ ತನಿಖಾಧಿಕಾರಿ ಎಲ್ಲಾ ಕೋನಗಳಲ್ಲಿ ಪರಿಶೀಲಿಸಿ ನಕಲಿ ಎನ್ನಲು ಒಟ್ಟು ಐದು ಆಧಾರಗಳನ್ನು ಗುರುತಿಸಿ ನೋಟ್ ಮಾಡಿಕೊಂಡರು.

ಕಾರ್ಯಪಾಲಕ ಅಭಿಯಂತರರಾದ ಸಿದ್ದೇ ಗೌಡ ರವರು ಕಾಮಗಾರಿಗಳ ವಿವರಣೆಗಳನ್ನು ಸಹಾಯಕ ಕಾರ್ಯಪಾಲಕ ಅಭಿಯಂತರರು ವರದಿ ಮಾಡಿ ಸಲ್ಲಿಸಿದ್ದನ್ನು ಲೋಕಾಯುಕ್ತ ಅಧಿಕಾರಿಣಿ ತೇಜಶ್ರೀ ರವರಿಗೆ ನೀಡಿದರು.

ನಂತರ ದೂರುದಾರ ತೆನ್ನಿರ ಮೈನಾ ಮತ್ತು ಲೋಕೋಪಯೋಗಿ ಅಧಿಕಾರಿಗಳೊಂದಿಗೆ ತೇಜಶ್ರೀ ರವರು ರಾಜಾಸೀಟ್ ಗೆ ತೆರಳಿ ಸ್ಥಳ ಪರಿಶೀಲನೆ ಮಾಡಿದರು.

2023 ರ ಮಾರ್ಚ್ 18 ರಂದು ಲೋಕಾರ್ಪಣೆ ಆದ ಗ್ರೇಟರ್ ರಾಜಾ ಸೀಟ್ ಇನ್ನೂ ತೋಟಗಾರಿಕೆ ಇಲಾಖೆಗೆ ಹಸ್ತಾಂತರ ಮಾಡದೇ ಇರುವ ಬಗ್ಗೆ ಲೋಕೋಪಯೋಗಿ ಇಂಜಿನಿಯರ್ ಗಳಿಂದ ವಿವರಣೆ ಪಡೆದರು. ಉತ್ತರ ನೀಡಲು ತಡಬಡಿಸಿದ ಇಂಜಿನಿಯರ್ ಅನ್ನು ತರಾಟೆಗೆ ತೆಗೆದುಕೊಂಡರು.

ಅಲ್ಲಲ್ಲಿ ಬಿರುಕು ಬಿಟ್ಟ ಕಾಮಗಾರಿಗಳು,ಹಾರಿಹೋದ ಹೆಂಚುಗಳು , ಕರೆಂಟ್ ಸಂಪರ್ಕ ಇಲ್ಲದ ಲೈಟುಗಳು. ಒಡೆದು ಹೋದ ಗ್ರಾನೆಟ್ ಕಲ್ಲುಗಳು
ಯದ್ವಾ ತದ್ವಾ ಹರಿದಾಡಿದ್ದ ಇಂಟರ್ ಲಾಕ್ ,ದೂರ ದೂರ ಇರುವ ಗಿಡಗಳು ಸೇರಿದಂತೆ ಎಲ್ಲವನ್ನೂ ತಮ್ಮ ಸಿಬ್ಬಂದಿಯಿಂದ ಚಿತ್ರೀಕರಿಸಿಕೊಂಡರು.

ನಾಳೆ ದಿನ ನಿರ್ವಹಣೆ ಹೊತ್ತ ಎ.ಇ.ಇ ಮತ್ತು ಇ.ಇ ರವರಿಗೆ ಮಡಿಕೇರಿಗೆ ಬಂದು ತನಿಖೆಗೆ ಹಾಜರಾಗಲು ಸೂಚನೆಯನ್ನು ನೀಡಿದ್ದಾರೆ.ನಾಳೆ ಪೂರ್ಣವಾಗಿ ತನಿಖೆ ನಡೆಯಲಿದೆ.

ಈ ಸಂದರ್ಭದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ತೆನ್ನಿರ ಮೈನಾ ರವರು ಈಗಾಗಲೇ ಕಿರಿಯ ಇಂಜಿನಿಯರ್ ಕೆ.ಎಲ್.ದೇವರಾಜ್ ನಕಲಿ ಎಂಬಿ ಪುಸ್ತಕ ರಚಿಸಿ ಅಪರಾಧ ಎಸಗಿದ್ದು ಕಂಡು ಬಂದಿದ್ದು ಮುಂದೆ ಅಕ್ರಮದ ವಿವರಗಳು ಬಹಿರಂಗವಾಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂಧರ್ಭದಲ್ಲಿ ಮಡಿಕೇರಿ ನಗರ ಸಭೆಯ ಅಧ್ಯಕ್ಷರಾದ ಹೆಚ್.ಎಂ.ನಂದಕುಮಾರ್ ಉಪಸ್ಥಿತರಿದ್ದು, ಕಾಮಗಾರಿಯ ಗುಣಮಟ್ಟದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

9 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

9 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

12 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago