Categories: ಕೊಡಗು

ಗ್ರೇಟರ್ ರಾಜಾಸೀಟ್ ಯೋಜನೆಯಲ್ಲಿ ಬಹುಕೋಟಿ ಹಗರಣ ಆರೋಪ: ತನಿಖೆ ಆರಂಭಿಸಿದ ಲೋಕಾಯುಕ್ತ

ಮಡಿಕೇರಿ ನಗರದ ರಾಜಾ ಸೀಟ್ ಪಕ್ಕದಲ್ಲಿ ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಸಲ್ಲಿಸಿದ ದೂರನ್ನು ಮಾನ್ಯಗೊಳಿಸಿದ ಕರ್ನಾಟಕ ಲೋಕಾಯುಕ್ತ ತನಿಖೆ ಕೈಗೆತ್ತಿಕೊಂಡಿದೆ.

ಸುಮಾರು 4.55 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ  ಗ್ರೇಟರ್ ರಾಜಾಸೀಟ್ ನ್ನು ಅಂದಿನ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿಯವರು  18-3-2023 ರಂದು ಲೋಕಾರ್ಪಣೆ ಮಾಡಿದ್ದರು.ಕಾಮಗಾರಿ ನಿರ್ವಹಣೆ ಮಾಡಿದ ಮಡಿಕೇರಿ ಪಿ.ಡಬ್ಲ್ಯೂ.ಡಿ ಇಲಾಖೆ ಕಾಮಗಾರಿ ಅಪೂರ್ಣವಾಗಿರುವ ಸಂಧರ್ಭದಲ್ಲಿ ತೋಟಗಾರಿಕೆ ಇಲಾಖೆಗೆ ಹಸ್ತಾಂತರ ಮಾಡದೇ ಲೋಕಾರ್ಪಣೆ ಮಾಡಿದ್ದು ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಈ ಹಿನ್ನಲೆಯಲ್ಲಿ ತೆನ್ನಿರ ಮೈನಾ ರವರು ದಿನಾಂಕ 20-3-2023 ರಂದು ಈ ಕಾಮಗಾರಿಯಲ್ಲಿ ಬಹುಕೋಟಿ ಅಕ್ರಮ ಹಾಗೂ ಕಳಪೆ ಕಾಮಗಾರಿ ನಡೆದಿದೆ ಎಂದು ಸವಿಸ್ತಾರವಾಗಿ ದಾಖಲೆಗಳೊಂದಿಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ಜೊತೆಗೆ ಸದರಿ ಕಾಮಗಾರಿಗೆ ಸಂಭಂದಿಸಿದಂತೆ ಮೂಲ ಎಂ.ಬಿ. ಪುಸ್ತಕವನ್ನು ನಾಶಪಡಿಸಿ ನಕಲಿ ಎಂ.ಬಿ.ಪುಸ್ತಕ ರಚಿಸಿ ಒಂದು ಕೋಟಿ 58 ಲಕ್ಷದ 43 ಸಾವಿರದ 136 ರೂಗಳನ್ನು ಕಾನೂನು ಬಾಹಿರವಾಗಿ ಪಾವತಿ ಮಾಡಿರುವುದನ್ನು ಉಲ್ಲೇಖಿಸಿ ಮೂಲ ಎಂ.ಬಿ.ಪುಸ್ತಕ ಸಂಖ್ಯೆ 12086 ರ ಧೃಡೀಕೃತ ದಾಖಲೆಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಿದ್ದರು.

ಈ ವಿವರಗಳನ್ನು ಪರಿಶೀಲಿಸಿ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಾಲಯ ಲೋಕಾಯುಕ್ತ ತಾಂತ್ರಿಕ ವಿಭಾಗದ ಅಧಿಕಾರಿ ತೇಜಶ್ರೀ ಬಿ.ಮುದ್ದೋಡಿ ಯವರನ್ನು ತನಿಖಾಧಿಕಾರಿಯಾಗಿ ನೇಮಿಸಿದ್ದು ದಿನಾಂಕ  14-10-2024 ರಂದು ಮತ್ತು 15-10-2024 ರಂದು ದೂರುದಾರರು ಹಾಗೂ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ತನಿಖೆ ನಡೆಸಲಿದ್ದಾರೆ.

ಈ ಕಾಮಗಾರಿಯಲ್ಲಿ ನಿರ್ವಹಣೆ ಹೊತ್ತಿದ್ದ ಕಿರಿಯ ಇಂಜಿನಿಯರ್ ಕೆ.ಎಲ್.ದೇವರಾಜ್ ರನ್ನು ಅಮಾನತು ಮಾಡಲಾಗಿತ್ತು.

ಸದರಿ ಪ್ರಕರಣದಲ್ಲಿ‌ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಅಕ್ರಮವೆಸಗಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದ್ದು ಶಿಕ್ಷೆಗೆ ಒಳಗಾಗಲಿದ್ದಾರೆ ಎಂದು ದೂರುದಾರ ತೆನ್ನಿರ ಮೈನಾ ತಿಳಿಸಿದ್ದಾರೆ.

ಈ ಹಿಂದೆ ಹಗರಣದ ಬಗ್ಗೆ ಕೆಲವರು ಫೋಟೋಗಳನ್ನು ತೆಗೆದು ಇವರುಗಳನ್ನು ಪ್ರಶ್ನಿಸಲು ಹೋದವರಿಗೆ ಅವರ ತೋಟ ಮತ್ತು ಮನೆಯ ಅಂಗಳವನ್ನು ಹೂ ಗಿಡ ಮತ್ತಿತರ ಗಿಡಗಳಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು  ಸಿಂಗರಿಸಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದರು ಎಂದು ಹೇಳಲಾಗಿದೆ.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

9 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

9 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

11 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

12 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

14 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

20 hours ago