ಮಡಿಕೇರಿ ನಗರದ ರಾಜಾ ಸೀಟ್ ಪಕ್ಕದಲ್ಲಿ ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಸಲ್ಲಿಸಿದ ದೂರನ್ನು ಮಾನ್ಯಗೊಳಿಸಿದ ಕರ್ನಾಟಕ ಲೋಕಾಯುಕ್ತ ತನಿಖೆ ಕೈಗೆತ್ತಿಕೊಂಡಿದೆ.
ಸುಮಾರು 4.55 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಗ್ರೇಟರ್ ರಾಜಾಸೀಟ್ ನ್ನು ಅಂದಿನ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿಯವರು 18-3-2023 ರಂದು ಲೋಕಾರ್ಪಣೆ ಮಾಡಿದ್ದರು.ಕಾಮಗಾರಿ ನಿರ್ವಹಣೆ ಮಾಡಿದ ಮಡಿಕೇರಿ ಪಿ.ಡಬ್ಲ್ಯೂ.ಡಿ ಇಲಾಖೆ ಕಾಮಗಾರಿ ಅಪೂರ್ಣವಾಗಿರುವ ಸಂಧರ್ಭದಲ್ಲಿ ತೋಟಗಾರಿಕೆ ಇಲಾಖೆಗೆ ಹಸ್ತಾಂತರ ಮಾಡದೇ ಲೋಕಾರ್ಪಣೆ ಮಾಡಿದ್ದು ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಈ ಹಿನ್ನಲೆಯಲ್ಲಿ ತೆನ್ನಿರ ಮೈನಾ ರವರು ದಿನಾಂಕ 20-3-2023 ರಂದು ಈ ಕಾಮಗಾರಿಯಲ್ಲಿ ಬಹುಕೋಟಿ ಅಕ್ರಮ ಹಾಗೂ ಕಳಪೆ ಕಾಮಗಾರಿ ನಡೆದಿದೆ ಎಂದು ಸವಿಸ್ತಾರವಾಗಿ ದಾಖಲೆಗಳೊಂದಿಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.
ಜೊತೆಗೆ ಸದರಿ ಕಾಮಗಾರಿಗೆ ಸಂಭಂದಿಸಿದಂತೆ ಮೂಲ ಎಂ.ಬಿ. ಪುಸ್ತಕವನ್ನು ನಾಶಪಡಿಸಿ ನಕಲಿ ಎಂ.ಬಿ.ಪುಸ್ತಕ ರಚಿಸಿ ಒಂದು ಕೋಟಿ 58 ಲಕ್ಷದ 43 ಸಾವಿರದ 136 ರೂಗಳನ್ನು ಕಾನೂನು ಬಾಹಿರವಾಗಿ ಪಾವತಿ ಮಾಡಿರುವುದನ್ನು ಉಲ್ಲೇಖಿಸಿ ಮೂಲ ಎಂ.ಬಿ.ಪುಸ್ತಕ ಸಂಖ್ಯೆ 12086 ರ ಧೃಡೀಕೃತ ದಾಖಲೆಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಿದ್ದರು.
ಈ ವಿವರಗಳನ್ನು ಪರಿಶೀಲಿಸಿ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಾಲಯ ಲೋಕಾಯುಕ್ತ ತಾಂತ್ರಿಕ ವಿಭಾಗದ ಅಧಿಕಾರಿ ತೇಜಶ್ರೀ ಬಿ.ಮುದ್ದೋಡಿ ಯವರನ್ನು ತನಿಖಾಧಿಕಾರಿಯಾಗಿ ನೇಮಿಸಿದ್ದು ದಿನಾಂಕ 14-10-2024 ರಂದು ಮತ್ತು 15-10-2024 ರಂದು ದೂರುದಾರರು ಹಾಗೂ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ತನಿಖೆ ನಡೆಸಲಿದ್ದಾರೆ.
ಈ ಕಾಮಗಾರಿಯಲ್ಲಿ ನಿರ್ವಹಣೆ ಹೊತ್ತಿದ್ದ ಕಿರಿಯ ಇಂಜಿನಿಯರ್ ಕೆ.ಎಲ್.ದೇವರಾಜ್ ರನ್ನು ಅಮಾನತು ಮಾಡಲಾಗಿತ್ತು.
ಸದರಿ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಅಕ್ರಮವೆಸಗಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದ್ದು ಶಿಕ್ಷೆಗೆ ಒಳಗಾಗಲಿದ್ದಾರೆ ಎಂದು ದೂರುದಾರ ತೆನ್ನಿರ ಮೈನಾ ತಿಳಿಸಿದ್ದಾರೆ.
ಈ ಹಿಂದೆ ಹಗರಣದ ಬಗ್ಗೆ ಕೆಲವರು ಫೋಟೋಗಳನ್ನು ತೆಗೆದು ಇವರುಗಳನ್ನು ಪ್ರಶ್ನಿಸಲು ಹೋದವರಿಗೆ ಅವರ ತೋಟ ಮತ್ತು ಮನೆಯ ಅಂಗಳವನ್ನು ಹೂ ಗಿಡ ಮತ್ತಿತರ ಗಿಡಗಳಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಿಂಗರಿಸಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದರು ಎಂದು ಹೇಳಲಾಗಿದೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…