ಮಡಿಕೇರಿ ನಗರದ ರಾಜಾ ಸೀಟ್ ಪಕ್ಕದಲ್ಲಿ ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಸಲ್ಲಿಸಿದ ದೂರನ್ನು ಮಾನ್ಯಗೊಳಿಸಿದ ಕರ್ನಾಟಕ ಲೋಕಾಯುಕ್ತ ತನಿಖೆ ಕೈಗೆತ್ತಿಕೊಂಡಿದೆ.
ಸುಮಾರು 4.55 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಗ್ರೇಟರ್ ರಾಜಾಸೀಟ್ ನ್ನು ಅಂದಿನ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿಯವರು 18-3-2023 ರಂದು ಲೋಕಾರ್ಪಣೆ ಮಾಡಿದ್ದರು.ಕಾಮಗಾರಿ ನಿರ್ವಹಣೆ ಮಾಡಿದ ಮಡಿಕೇರಿ ಪಿ.ಡಬ್ಲ್ಯೂ.ಡಿ ಇಲಾಖೆ ಕಾಮಗಾರಿ ಅಪೂರ್ಣವಾಗಿರುವ ಸಂಧರ್ಭದಲ್ಲಿ ತೋಟಗಾರಿಕೆ ಇಲಾಖೆಗೆ ಹಸ್ತಾಂತರ ಮಾಡದೇ ಲೋಕಾರ್ಪಣೆ ಮಾಡಿದ್ದು ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಈ ಹಿನ್ನಲೆಯಲ್ಲಿ ತೆನ್ನಿರ ಮೈನಾ ರವರು ದಿನಾಂಕ 20-3-2023 ರಂದು ಈ ಕಾಮಗಾರಿಯಲ್ಲಿ ಬಹುಕೋಟಿ ಅಕ್ರಮ ಹಾಗೂ ಕಳಪೆ ಕಾಮಗಾರಿ ನಡೆದಿದೆ ಎಂದು ಸವಿಸ್ತಾರವಾಗಿ ದಾಖಲೆಗಳೊಂದಿಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.
ಜೊತೆಗೆ ಸದರಿ ಕಾಮಗಾರಿಗೆ ಸಂಭಂದಿಸಿದಂತೆ ಮೂಲ ಎಂ.ಬಿ. ಪುಸ್ತಕವನ್ನು ನಾಶಪಡಿಸಿ ನಕಲಿ ಎಂ.ಬಿ.ಪುಸ್ತಕ ರಚಿಸಿ ಒಂದು ಕೋಟಿ 58 ಲಕ್ಷದ 43 ಸಾವಿರದ 136 ರೂಗಳನ್ನು ಕಾನೂನು ಬಾಹಿರವಾಗಿ ಪಾವತಿ ಮಾಡಿರುವುದನ್ನು ಉಲ್ಲೇಖಿಸಿ ಮೂಲ ಎಂ.ಬಿ.ಪುಸ್ತಕ ಸಂಖ್ಯೆ 12086 ರ ಧೃಡೀಕೃತ ದಾಖಲೆಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಿದ್ದರು.
ಈ ವಿವರಗಳನ್ನು ಪರಿಶೀಲಿಸಿ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಾಲಯ ಲೋಕಾಯುಕ್ತ ತಾಂತ್ರಿಕ ವಿಭಾಗದ ಅಧಿಕಾರಿ ತೇಜಶ್ರೀ ಬಿ.ಮುದ್ದೋಡಿ ಯವರನ್ನು ತನಿಖಾಧಿಕಾರಿಯಾಗಿ ನೇಮಿಸಿದ್ದು ದಿನಾಂಕ 14-10-2024 ರಂದು ಮತ್ತು 15-10-2024 ರಂದು ದೂರುದಾರರು ಹಾಗೂ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ತನಿಖೆ ನಡೆಸಲಿದ್ದಾರೆ.
ಈ ಕಾಮಗಾರಿಯಲ್ಲಿ ನಿರ್ವಹಣೆ ಹೊತ್ತಿದ್ದ ಕಿರಿಯ ಇಂಜಿನಿಯರ್ ಕೆ.ಎಲ್.ದೇವರಾಜ್ ರನ್ನು ಅಮಾನತು ಮಾಡಲಾಗಿತ್ತು.
ಸದರಿ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಅಕ್ರಮವೆಸಗಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದ್ದು ಶಿಕ್ಷೆಗೆ ಒಳಗಾಗಲಿದ್ದಾರೆ ಎಂದು ದೂರುದಾರ ತೆನ್ನಿರ ಮೈನಾ ತಿಳಿಸಿದ್ದಾರೆ.
ಈ ಹಿಂದೆ ಹಗರಣದ ಬಗ್ಗೆ ಕೆಲವರು ಫೋಟೋಗಳನ್ನು ತೆಗೆದು ಇವರುಗಳನ್ನು ಪ್ರಶ್ನಿಸಲು ಹೋದವರಿಗೆ ಅವರ ತೋಟ ಮತ್ತು ಮನೆಯ ಅಂಗಳವನ್ನು ಹೂ ಗಿಡ ಮತ್ತಿತರ ಗಿಡಗಳಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಿಂಗರಿಸಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದರು ಎಂದು ಹೇಳಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…