ಕಾರಿನೊಳಗೆ ನಾಲ್ವರು ಮಕ್ಕಳು ಆಟವಾಡುತ್ತಾ ಕುಳಿತಿದ್ದ ವೇಳೆ ಕಾರು ಲಾಕ್ ಆಗಿದೆ. ಕಾರಿನಲ್ಲಿದ್ದ ಮಕ್ಕಳು ಕಾರಿನೊಳಗೆ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ದ್ವಾರಪುಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಮೃತರನ್ನು ಉದಯ್(8), ಚಾರುಮತಿ (8), ಚರಿಷ್ಮಾ (6) ಮತ್ತು ಮನಸ್ವಿ (6) ಎನ್ನಲಾಗಿದ್ದು, ಚಾರುಮತಿ ಮತ್ತು ಚರಿಷ್ಮಾ ಸಹೋದರಿಯರಾಗಿದ್ದಾರೆ, ಉಳಿದ ಇಬ್ಬರು ಅವರ ಸ್ನೇಹಿತರಾಗಿದ್ದಾರೆ.
ಬೇಸಿಗೆ ರಜೆಯ ಖುಷಿಯಲ್ಲಿದ್ದ ದ್ವಾರಪುಡಿ ಗ್ರಾಮದ ನಾಲ್ಕು ಮಕ್ಕಳು ಭಾನುವಾರ ಬೆಳಿಗ್ಗೆ ಆಟವಾಡಲು ಕಾರು ಒಳಗೆ ಹೋಗಿದ್ದಾರೆ. ಸಲ್ಪ ಸಮಯದಲ್ಲಿಯೇ ಸೆಂಟ್ರಲ್ ಲಾಕ್ ಆಗಿದ್ದು, ಈ ವಿಚಾರ ಮಕ್ಕಳಿಗೆ ಗೊತ್ತೇ ಇಲ್ಲ ಇದಾದ ಕೆಲ ಹೊತ್ತಿನ ಬಳಿಕ ಮಕ್ಕಳು ಉಸಿರಾಟದ ಸಮಸ್ಯೆಗೆ ಒಳಗಾಗಿ ಅಸ್ವಸ್ಥಗೊಂಡಿದ್ದಾರೆ. ಸ್ವಲ್ಪ ಹೊತ್ತಿನಲ್ಲೇ ಜೀವ ಸಹ ಹೋಗಿದೆ.
ಇನ್ನು, ಪೋಷಕರು ಮೂರು ಗಂಟೆಗಳ ಕಾಲ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಅಂತಿಮವಾಗಿ ಕಾರಿನ ಬಳಿ ಹೋದಾಗ ಮಕ್ಕಳು ಪ್ರಜ್ಞೆತಪ್ಪಿ ಬಿದ್ದಿದ್ದನ್ನು ಗಮನನಿಸಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯ ಪೊಲೀಸರು ಕಾರಿನ ಮಾಲೀಕರಿಗಾಗಿ ಹುಡುಕಾಟ ನಡೆಸಿದ್ದಾರೆ.
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…