ಕಾರಿನೊಳಗೆ ನಾಲ್ವರು ಮಕ್ಕಳು ಆಟವಾಡುತ್ತಾ ಕುಳಿತಿದ್ದ ವೇಳೆ ಕಾರು ಲಾಕ್ ಆಗಿದೆ. ಕಾರಿನಲ್ಲಿದ್ದ ಮಕ್ಕಳು ಕಾರಿನೊಳಗೆ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ದ್ವಾರಪುಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಮೃತರನ್ನು ಉದಯ್(8), ಚಾರುಮತಿ (8), ಚರಿಷ್ಮಾ (6) ಮತ್ತು ಮನಸ್ವಿ (6) ಎನ್ನಲಾಗಿದ್ದು, ಚಾರುಮತಿ ಮತ್ತು ಚರಿಷ್ಮಾ ಸಹೋದರಿಯರಾಗಿದ್ದಾರೆ, ಉಳಿದ ಇಬ್ಬರು ಅವರ ಸ್ನೇಹಿತರಾಗಿದ್ದಾರೆ.
ಬೇಸಿಗೆ ರಜೆಯ ಖುಷಿಯಲ್ಲಿದ್ದ ದ್ವಾರಪುಡಿ ಗ್ರಾಮದ ನಾಲ್ಕು ಮಕ್ಕಳು ಭಾನುವಾರ ಬೆಳಿಗ್ಗೆ ಆಟವಾಡಲು ಕಾರು ಒಳಗೆ ಹೋಗಿದ್ದಾರೆ. ಸಲ್ಪ ಸಮಯದಲ್ಲಿಯೇ ಸೆಂಟ್ರಲ್ ಲಾಕ್ ಆಗಿದ್ದು, ಈ ವಿಚಾರ ಮಕ್ಕಳಿಗೆ ಗೊತ್ತೇ ಇಲ್ಲ ಇದಾದ ಕೆಲ ಹೊತ್ತಿನ ಬಳಿಕ ಮಕ್ಕಳು ಉಸಿರಾಟದ ಸಮಸ್ಯೆಗೆ ಒಳಗಾಗಿ ಅಸ್ವಸ್ಥಗೊಂಡಿದ್ದಾರೆ. ಸ್ವಲ್ಪ ಹೊತ್ತಿನಲ್ಲೇ ಜೀವ ಸಹ ಹೋಗಿದೆ.
ಇನ್ನು, ಪೋಷಕರು ಮೂರು ಗಂಟೆಗಳ ಕಾಲ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಅಂತಿಮವಾಗಿ ಕಾರಿನ ಬಳಿ ಹೋದಾಗ ಮಕ್ಕಳು ಪ್ರಜ್ಞೆತಪ್ಪಿ ಬಿದ್ದಿದ್ದನ್ನು ಗಮನನಿಸಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯ ಪೊಲೀಸರು ಕಾರಿನ ಮಾಲೀಕರಿಗಾಗಿ ಹುಡುಕಾಟ ನಡೆಸಿದ್ದಾರೆ.
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…