ಕಾರಿನೊಳಗೆ ನಾಲ್ವರು ಮಕ್ಕಳು ಆಟವಾಡುತ್ತಾ ಕುಳಿತಿದ್ದ ವೇಳೆ ಕಾರು ಲಾಕ್ ಆಗಿದೆ. ಕಾರಿನಲ್ಲಿದ್ದ ಮಕ್ಕಳು ಕಾರಿನೊಳಗೆ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ದ್ವಾರಪುಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಮೃತರನ್ನು ಉದಯ್(8), ಚಾರುಮತಿ (8), ಚರಿಷ್ಮಾ (6) ಮತ್ತು ಮನಸ್ವಿ (6) ಎನ್ನಲಾಗಿದ್ದು, ಚಾರುಮತಿ ಮತ್ತು ಚರಿಷ್ಮಾ ಸಹೋದರಿಯರಾಗಿದ್ದಾರೆ, ಉಳಿದ ಇಬ್ಬರು ಅವರ ಸ್ನೇಹಿತರಾಗಿದ್ದಾರೆ.
ಬೇಸಿಗೆ ರಜೆಯ ಖುಷಿಯಲ್ಲಿದ್ದ ದ್ವಾರಪುಡಿ ಗ್ರಾಮದ ನಾಲ್ಕು ಮಕ್ಕಳು ಭಾನುವಾರ ಬೆಳಿಗ್ಗೆ ಆಟವಾಡಲು ಕಾರು ಒಳಗೆ ಹೋಗಿದ್ದಾರೆ. ಸಲ್ಪ ಸಮಯದಲ್ಲಿಯೇ ಸೆಂಟ್ರಲ್ ಲಾಕ್ ಆಗಿದ್ದು, ಈ ವಿಚಾರ ಮಕ್ಕಳಿಗೆ ಗೊತ್ತೇ ಇಲ್ಲ ಇದಾದ ಕೆಲ ಹೊತ್ತಿನ ಬಳಿಕ ಮಕ್ಕಳು ಉಸಿರಾಟದ ಸಮಸ್ಯೆಗೆ ಒಳಗಾಗಿ ಅಸ್ವಸ್ಥಗೊಂಡಿದ್ದಾರೆ. ಸ್ವಲ್ಪ ಹೊತ್ತಿನಲ್ಲೇ ಜೀವ ಸಹ ಹೋಗಿದೆ.
ಇನ್ನು, ಪೋಷಕರು ಮೂರು ಗಂಟೆಗಳ ಕಾಲ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಅಂತಿಮವಾಗಿ ಕಾರಿನ ಬಳಿ ಹೋದಾಗ ಮಕ್ಕಳು ಪ್ರಜ್ಞೆತಪ್ಪಿ ಬಿದ್ದಿದ್ದನ್ನು ಗಮನನಿಸಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯ ಪೊಲೀಸರು ಕಾರಿನ ಮಾಲೀಕರಿಗಾಗಿ ಹುಡುಕಾಟ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…