ಕಾರಿನೊಳಗೆ ನಾಲ್ವರು ಮಕ್ಕಳು ಆಟವಾಡುತ್ತಾ ಕುಳಿತಿದ್ದ ವೇಳೆ ಕಾರು ಲಾಕ್ ಆಗಿದೆ. ಕಾರಿನಲ್ಲಿದ್ದ ಮಕ್ಕಳು ಕಾರಿನೊಳಗೆ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ದ್ವಾರಪುಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಮೃತರನ್ನು ಉದಯ್(8), ಚಾರುಮತಿ (8), ಚರಿಷ್ಮಾ (6) ಮತ್ತು ಮನಸ್ವಿ (6) ಎನ್ನಲಾಗಿದ್ದು, ಚಾರುಮತಿ ಮತ್ತು ಚರಿಷ್ಮಾ ಸಹೋದರಿಯರಾಗಿದ್ದಾರೆ, ಉಳಿದ ಇಬ್ಬರು ಅವರ ಸ್ನೇಹಿತರಾಗಿದ್ದಾರೆ.
ಬೇಸಿಗೆ ರಜೆಯ ಖುಷಿಯಲ್ಲಿದ್ದ ದ್ವಾರಪುಡಿ ಗ್ರಾಮದ ನಾಲ್ಕು ಮಕ್ಕಳು ಭಾನುವಾರ ಬೆಳಿಗ್ಗೆ ಆಟವಾಡಲು ಕಾರು ಒಳಗೆ ಹೋಗಿದ್ದಾರೆ. ಸಲ್ಪ ಸಮಯದಲ್ಲಿಯೇ ಸೆಂಟ್ರಲ್ ಲಾಕ್ ಆಗಿದ್ದು, ಈ ವಿಚಾರ ಮಕ್ಕಳಿಗೆ ಗೊತ್ತೇ ಇಲ್ಲ ಇದಾದ ಕೆಲ ಹೊತ್ತಿನ ಬಳಿಕ ಮಕ್ಕಳು ಉಸಿರಾಟದ ಸಮಸ್ಯೆಗೆ ಒಳಗಾಗಿ ಅಸ್ವಸ್ಥಗೊಂಡಿದ್ದಾರೆ. ಸ್ವಲ್ಪ ಹೊತ್ತಿನಲ್ಲೇ ಜೀವ ಸಹ ಹೋಗಿದೆ.
ಇನ್ನು, ಪೋಷಕರು ಮೂರು ಗಂಟೆಗಳ ಕಾಲ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಅಂತಿಮವಾಗಿ ಕಾರಿನ ಬಳಿ ಹೋದಾಗ ಮಕ್ಕಳು ಪ್ರಜ್ಞೆತಪ್ಪಿ ಬಿದ್ದಿದ್ದನ್ನು ಗಮನನಿಸಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯ ಪೊಲೀಸರು ಕಾರಿನ ಮಾಲೀಕರಿಗಾಗಿ ಹುಡುಕಾಟ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…