ಘಾಟಿಯ ವಿಶ್ವೇಶ್ವರಯ್ಯ ಪಿಕಪ್ ಡ್ಯಾಂ ಬಳಿ ಏಕಾಂತಕ್ಕೆ ಬಂದಿದ್ದ ಭಾವಿ ದಂಪತಿ: ಏಕಾಂತದಲ್ಲಿದ್ದವರ ಬಳಿ ಸುಲಿಗೆ ಮಾಡಿದ ಪೋಕರಿಗಳು: ಸುಲಿಗೆ ಮಾಡಿದ್ದ ಮೂವರು ಆರೋಪಿಗಳ ಬಂಧನ: ಬಂಧಿತರಿಂದ ಚಿನ್ನದ ಸರ, ಬೈಕ್, ಗೂಗಲ್ ಪೇ ಹಣ ಸೀಜ್….!: ಪಿಕಪ್ ಡ್ಯಾಂ ಬಳಿ ಪೊಲೀಸ್ ನಿಯೋಜನೆ ಮಾಡುವಂತೆ ಪ್ರವಾಸಿಗರ ಒತ್ತಾಯ….

ಬೆಂಗಳೂರು ನಗರಕ್ಕೆ ತೀರ ಸಮೀಪವಿರುವ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಭ್ರಹ್ಮಣ್ಯ ಕ್ಷೇತ್ರ. ಇದೇ ಕ್ಷೇತ್ರಕ್ಕೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಂದ ಭಕ್ತರು, ಪ್ರವಾಸಿಗರು ಬಂದು ದರ್ಶನ ಮಾಡಿ, ಇದೇ ಕ್ಷೇತ್ರದ ಬಳಿ ಸುಂದರ ಪಿಕಪ್ ಡ್ಯಾಂ….. ತುಂಬಿ ಜರಿ ಜರಿಯಾಗಿ ಜಲಪಾತದ ರೀತಿಯಲ್ಲಿ ಬಿಳ್ತಿರೋ ಡ್ಯಾಂ ಬಳಿ ಪ್ರವಾಸಿಗರ ದಂಡೇ ಬರುತ್ತದೆ….. ಇಲ್ಲಿ ಕೆಲಕಾಲ ಪ್ರಕೃತಿಯನ್ನು ಸವಿದು ಪ್ರವಾಸಿಗರು ಎಂಜಾಯ್ ಮಾಡುತ್ತಾರೆ. ಕೆಲವರು ಏಕಾಂತದಲ್ಲಿರಲು ಇಲ್ಲಿಗೆ ಭೇಟಿ ನೀಡುತ್ತಾರೆ.

ಇತ್ತೀಚೆಗೆ ಇಲ್ಲಿ ಸುಲಿಗೆ ಮಾಡುವ ಪೋಕರಿಗಳ ಗ್ಯಾಂಗ್ ಹುಟ್ಟಿಕೊಂಡಿದೆ.‌ ಹೀಗೆ ಡ್ಯಾಂಗೆ ಬರೋ ಪ್ರೇಮಿಗಳು ಹಾಗೂ ನವ ದಂಪತಿಗಳ ಬಳಿ ಸುಲಿಗೆ ಮಾಡವ ಯತ್ನಗಳು ನಡೆಯುತ್ತಿವೆ.

ಡ್ಯಾಂ ನೋಡುವ ಸಲುವಾಗಿ ಕಳೆದ ವಾರದ ಹಿಂದೆ ಭಾವಿ ದಂಪತಿ ಬಂದಿದ್ದರು. ಅವರು ಏಕಾಂತದಲ್ಲಿದ್ದಿದ್ದನ್ನು ಗಮನಿಸಿದ ಸುಲಿಗೆಕೋರರು, ಅವರನ್ನು ಟಾರ್ಗೆಟ್ ಮಾಡಿ ಸುಲಿಗೆ ಮಾಡಿ ಎಸ್ಕೆಪ್ ಆಗಿದ್ದಾರೆ. ಇದೀಗ ದೊಡ್ಡಬಳ್ಳಾಫುರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನ ಬಂಧಿಸಿದ್ದಾರೆ. ಇಂತಹ ಘಟನೆಗಳಿಂದ ಇಲ್ಲಿಗೆ ಬರೋ ಪ್ರವಾಸಿಗರು ಆತಂಕದಲ್ಲಿದ್ದಾರೆ.

ಅಂದಹಾಗೆ ಡ್ಯಾಂ ನೋಡಲು ಈ ಹಿಂದೆ ಬಂದಿದ್ದ ಪ್ರೇಮಿಗಳು ಮರ ಗಿಡಗಳ ಕೆಳಗೆ ಇದ್ದಾಗ ಬೆದರಿಸಿ ಹಣ ಸೇರಿದಂತೆ ಚಿನ್ನಾಭರಣವನ್ನ ಖದೀಮರು ದೋಚಿ ಎಸ್ಕೆಪ್ ಆಗಿದ್ದರು. ಜೊತೆಗೆ  ಕಳೆದ ವಾರ ನವದಂಪತಿ ಬಂದಾಗ ಹೊಂಚು ಹಾಕಿದ್ದ ಖದೀಮರು ಜೋಡಿಯ ಬಳಿ ದರೋಡೆ ಮಾಡಿ ಓಡಿ ಹೋಗಿದ್ದರು. ಇದೀಗ ಪೊಲೀಸರು ಡ್ಯಾಂ ಬಳಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ಅಕ್ರಂ ಪಾಷ, ನಜೀರ್ ಮತ್ತು ಜಮೀರ್ ಎಂಬ ಮೂವರು ಆರೋಪಿಗಳನ್ನ ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಮೂವರು ಆರೋಪಿಗಳಿಂದ ಚಿನ್ನದ ಸರ, ಒಂದು ಬೈಕ್, ಉಂಗುರ ಮತ್ತು ಗೋಗಲ್ ಪೇ ಮಾಡಿಸಿಕೊಂಡಿದ್ದ 60 ಸಾವಿರ ಹಣವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಘಟನೆಯಿಂದಾಗಿ ಡ್ಯಾಂ ಬಳಿ ಒಂಟಿ ಒಂಟಿಯಾಗಿ ಪ್ರವಾಸಿಗರು ಬರಲು ಎದುರುತ್ತಿದ್ದಾರೆ. ಮಳೆಯಿಂದಾಗಿ ಸುಂದರ ಜರಿ ಜರಿ ಜಲಪಾತ ನೋಡಲು ಬರೋ ಪ್ರವಾಸಿಗರು ಖದೀಮರ ಆತಂಕದಲ್ಲಿದ್ದು, ಡ್ಯಾಂ ಬಳಿ ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡುವಂತೆ ಮನವಿ ಮಾಡಿದ್ದಾರೆ.

ಒಟ್ಟಾರೆ, ಘಾಟಿ ಸುಬ್ರಹ್ಮಣ್ಯದ ವಿಶ್ವೇಶ್ವರಯ್ಯ ಪಿಕಪ್ ಡ್ಯಾಂ ಬಳಿ ಪ್ರೇಮಿಗಳು , ನವದಂಪತಿಗಳನ್ನ ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದವರು ಇದೀಗ ಜೈಲು ಕಂಬಿ ಎಣೆಸುತ್ತಿದ್ದಾರೆ. ಮಳೆಯಿಂದಾಗಿ ಡ್ಯಾಂ ತುಂಬಿ ಸುಂದರ ಜಲಪಾತ ಸೃಷ್ಟಿಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರವಾಸಿಗರನ್ನ ಆಕರ್ಷಿಸಲಿದೆ. ಈ ನಿಟ್ಟಿನಲ್ಲಿ ಡ್ಯಾಂ ಬಳಿ ಪೊಲೀಸರನ್ನ ನಿಯೋಜನೆ ಮಾಡಿದರೆ ಒಳ್ಳೆಯದು ಅನ್ನೋದು ಇಲ್ಲಿಗೆ ಬರೋ ಪ್ರವಾಸಿಗರ ಮಾತಾಗಿದೆ.

Ramesh Babu

Journalist

Recent Posts

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಬೃಹತ್ ಪಾದಯಾತ್ರೆ

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…

43 minutes ago

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…

4 hours ago

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳಲ್ಲಿ ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

6 hours ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

12 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

13 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

14 hours ago