ಘಾಟಿಯ ವಿಶ್ವೇಶ್ವರಯ್ಯ ಪಿಕಪ್ ಡ್ಯಾಂ ಬಳಿ ಏಕಾಂತಕ್ಕೆ ಬಂದಿದ್ದ ಭಾವಿ ದಂಪತಿ: ಏಕಾಂತದಲ್ಲಿದ್ದವರ ಬಳಿ ಸುಲಿಗೆ ಮಾಡಿದ ಪೋಕರಿಗಳು: ಸುಲಿಗೆ ಮಾಡಿದ್ದ ಮೂವರು ಆರೋಪಿಗಳ ಬಂಧನ: ಬಂಧಿತರಿಂದ ಚಿನ್ನದ ಸರ, ಬೈಕ್, ಗೂಗಲ್ ಪೇ ಹಣ ಸೀಜ್….!: ಪಿಕಪ್ ಡ್ಯಾಂ ಬಳಿ ಪೊಲೀಸ್ ನಿಯೋಜನೆ ಮಾಡುವಂತೆ ಪ್ರವಾಸಿಗರ ಒತ್ತಾಯ….

ಬೆಂಗಳೂರು ನಗರಕ್ಕೆ ತೀರ ಸಮೀಪವಿರುವ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಭ್ರಹ್ಮಣ್ಯ ಕ್ಷೇತ್ರ. ಇದೇ ಕ್ಷೇತ್ರಕ್ಕೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಂದ ಭಕ್ತರು, ಪ್ರವಾಸಿಗರು ಬಂದು ದರ್ಶನ ಮಾಡಿ, ಇದೇ ಕ್ಷೇತ್ರದ ಬಳಿ ಸುಂದರ ಪಿಕಪ್ ಡ್ಯಾಂ….. ತುಂಬಿ ಜರಿ ಜರಿಯಾಗಿ ಜಲಪಾತದ ರೀತಿಯಲ್ಲಿ ಬಿಳ್ತಿರೋ ಡ್ಯಾಂ ಬಳಿ ಪ್ರವಾಸಿಗರ ದಂಡೇ ಬರುತ್ತದೆ….. ಇಲ್ಲಿ ಕೆಲಕಾಲ ಪ್ರಕೃತಿಯನ್ನು ಸವಿದು ಪ್ರವಾಸಿಗರು ಎಂಜಾಯ್ ಮಾಡುತ್ತಾರೆ. ಕೆಲವರು ಏಕಾಂತದಲ್ಲಿರಲು ಇಲ್ಲಿಗೆ ಭೇಟಿ ನೀಡುತ್ತಾರೆ.

ಇತ್ತೀಚೆಗೆ ಇಲ್ಲಿ ಸುಲಿಗೆ ಮಾಡುವ ಪೋಕರಿಗಳ ಗ್ಯಾಂಗ್ ಹುಟ್ಟಿಕೊಂಡಿದೆ.‌ ಹೀಗೆ ಡ್ಯಾಂಗೆ ಬರೋ ಪ್ರೇಮಿಗಳು ಹಾಗೂ ನವ ದಂಪತಿಗಳ ಬಳಿ ಸುಲಿಗೆ ಮಾಡವ ಯತ್ನಗಳು ನಡೆಯುತ್ತಿವೆ.

ಡ್ಯಾಂ ನೋಡುವ ಸಲುವಾಗಿ ಕಳೆದ ವಾರದ ಹಿಂದೆ ಭಾವಿ ದಂಪತಿ ಬಂದಿದ್ದರು. ಅವರು ಏಕಾಂತದಲ್ಲಿದ್ದಿದ್ದನ್ನು ಗಮನಿಸಿದ ಸುಲಿಗೆಕೋರರು, ಅವರನ್ನು ಟಾರ್ಗೆಟ್ ಮಾಡಿ ಸುಲಿಗೆ ಮಾಡಿ ಎಸ್ಕೆಪ್ ಆಗಿದ್ದಾರೆ. ಇದೀಗ ದೊಡ್ಡಬಳ್ಳಾಫುರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನ ಬಂಧಿಸಿದ್ದಾರೆ. ಇಂತಹ ಘಟನೆಗಳಿಂದ ಇಲ್ಲಿಗೆ ಬರೋ ಪ್ರವಾಸಿಗರು ಆತಂಕದಲ್ಲಿದ್ದಾರೆ.

ಅಂದಹಾಗೆ ಡ್ಯಾಂ ನೋಡಲು ಈ ಹಿಂದೆ ಬಂದಿದ್ದ ಪ್ರೇಮಿಗಳು ಮರ ಗಿಡಗಳ ಕೆಳಗೆ ಇದ್ದಾಗ ಬೆದರಿಸಿ ಹಣ ಸೇರಿದಂತೆ ಚಿನ್ನಾಭರಣವನ್ನ ಖದೀಮರು ದೋಚಿ ಎಸ್ಕೆಪ್ ಆಗಿದ್ದರು. ಜೊತೆಗೆ  ಕಳೆದ ವಾರ ನವದಂಪತಿ ಬಂದಾಗ ಹೊಂಚು ಹಾಕಿದ್ದ ಖದೀಮರು ಜೋಡಿಯ ಬಳಿ ದರೋಡೆ ಮಾಡಿ ಓಡಿ ಹೋಗಿದ್ದರು. ಇದೀಗ ಪೊಲೀಸರು ಡ್ಯಾಂ ಬಳಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ಅಕ್ರಂ ಪಾಷ, ನಜೀರ್ ಮತ್ತು ಜಮೀರ್ ಎಂಬ ಮೂವರು ಆರೋಪಿಗಳನ್ನ ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಮೂವರು ಆರೋಪಿಗಳಿಂದ ಚಿನ್ನದ ಸರ, ಒಂದು ಬೈಕ್, ಉಂಗುರ ಮತ್ತು ಗೋಗಲ್ ಪೇ ಮಾಡಿಸಿಕೊಂಡಿದ್ದ 60 ಸಾವಿರ ಹಣವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಘಟನೆಯಿಂದಾಗಿ ಡ್ಯಾಂ ಬಳಿ ಒಂಟಿ ಒಂಟಿಯಾಗಿ ಪ್ರವಾಸಿಗರು ಬರಲು ಎದುರುತ್ತಿದ್ದಾರೆ. ಮಳೆಯಿಂದಾಗಿ ಸುಂದರ ಜರಿ ಜರಿ ಜಲಪಾತ ನೋಡಲು ಬರೋ ಪ್ರವಾಸಿಗರು ಖದೀಮರ ಆತಂಕದಲ್ಲಿದ್ದು, ಡ್ಯಾಂ ಬಳಿ ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡುವಂತೆ ಮನವಿ ಮಾಡಿದ್ದಾರೆ.

ಒಟ್ಟಾರೆ, ಘಾಟಿ ಸುಬ್ರಹ್ಮಣ್ಯದ ವಿಶ್ವೇಶ್ವರಯ್ಯ ಪಿಕಪ್ ಡ್ಯಾಂ ಬಳಿ ಪ್ರೇಮಿಗಳು , ನವದಂಪತಿಗಳನ್ನ ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದವರು ಇದೀಗ ಜೈಲು ಕಂಬಿ ಎಣೆಸುತ್ತಿದ್ದಾರೆ. ಮಳೆಯಿಂದಾಗಿ ಡ್ಯಾಂ ತುಂಬಿ ಸುಂದರ ಜಲಪಾತ ಸೃಷ್ಟಿಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರವಾಸಿಗರನ್ನ ಆಕರ್ಷಿಸಲಿದೆ. ಈ ನಿಟ್ಟಿನಲ್ಲಿ ಡ್ಯಾಂ ಬಳಿ ಪೊಲೀಸರನ್ನ ನಿಯೋಜನೆ ಮಾಡಿದರೆ ಒಳ್ಳೆಯದು ಅನ್ನೋದು ಇಲ್ಲಿಗೆ ಬರೋ ಪ್ರವಾಸಿಗರ ಮಾತಾಗಿದೆ.

Ramesh Babu

Journalist

Recent Posts

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

3 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

9 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

13 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

13 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

15 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

17 hours ago