ತೂಬಗೆರೆ ಹೋಬಳಿಯ ಘಾಟಿ ಗ್ರಾಮದ ಕೆಲ ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ ಎಂಬುದು ಸುಳ್ಳು. ಈ ವಿಚಾರ ವದಂತಿ ಅಷ್ಟೇ. ಎಸ್.ಎಸ್ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಸದೃಢವಾಗಿದೆ. ಜೆಡಿಎಸ್ ಗೆ ಸೇರಿದ್ದಾರೆ ಎನ್ನಲಾದ ಯುವಕರ ಬಗ್ಗೆ ನಾವು ಎಲ್ಲಾ ಮೂಲಗಳಿಂದ ಮಾಹಿತಿ ಕಲೆ ಹಾಕಿದ್ದೇವೆ. ಇವರು ಯಾರೂ ಕಾಂಗ್ರೆಸ್ ಕಾರ್ಯಕರ್ತರಲ್ಲ. ಕಾಂಗ್ರೆಸ್ ಪಕ್ಷಕ್ಕೂ ಈ ಯುವಕರಿಗೂ ಯಾವುದೇ ಸಂಬಂಧವಿಲ್ಲ ಎಂದು ತೂಬಗೆರೆ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ ಸ್ಪಷ್ಟನೆ ನೀಡಿದ್ದಾರೆ.
ಯಾರೋ ಜೆಡಿಎಸ್ ಗೆ ಸೇರಿರಬಹುದು ಅಷ್ಟೇ. ನಮ್ಮ ಪಕ್ಷದವರಂತೂ ಜೆಡಿಎಸ್ ಗೆ ಸೇರ್ಪಡೆಗೊಂಡಿಲ್ಲ. ನಮ್ಮ ಕಾರ್ಯಕರ್ತರು ಬೇರೆ ಪಕ್ಷಕ್ಕೆ ಸೇರುವ ಅವಶ್ಯಕತೆ ಇಲ್ಲ. ಜೆಡಿಎಸ್ ನವರು ಸುಖಾಸುಮ್ಮನೆ ಕಾಂಗ್ರೆಸ್ ಪಕ್ಷದವರು ಜೆಡಿಎಸ್ ಗೆ ಸೇರಿದ್ದಾರೆ ಎಂದು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಮುಂಬರುವ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆ ಜೆಡಿಎಸ್ ಗಿಮಿಕ್ ಮಾಡಲು ಹೊರಟಿದೆ ಎಂದು ತಿಳಿಸಿದ್ದಾರೆ.
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…