ತೂಬಗೆರೆ ಹೋಬಳಿಯ ಘಾಟಿ ಗ್ರಾಮದ ಕೆಲ ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ ಎಂಬುದು ಸುಳ್ಳು. ಈ ವಿಚಾರ ವದಂತಿ ಅಷ್ಟೇ. ಎಸ್.ಎಸ್ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಸದೃಢವಾಗಿದೆ. ಜೆಡಿಎಸ್ ಗೆ ಸೇರಿದ್ದಾರೆ ಎನ್ನಲಾದ ಯುವಕರ ಬಗ್ಗೆ ನಾವು ಎಲ್ಲಾ ಮೂಲಗಳಿಂದ ಮಾಹಿತಿ ಕಲೆ ಹಾಕಿದ್ದೇವೆ. ಇವರು ಯಾರೂ ಕಾಂಗ್ರೆಸ್ ಕಾರ್ಯಕರ್ತರಲ್ಲ. ಕಾಂಗ್ರೆಸ್ ಪಕ್ಷಕ್ಕೂ ಈ ಯುವಕರಿಗೂ ಯಾವುದೇ ಸಂಬಂಧವಿಲ್ಲ ಎಂದು ತೂಬಗೆರೆ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ ಸ್ಪಷ್ಟನೆ ನೀಡಿದ್ದಾರೆ.
ಯಾರೋ ಜೆಡಿಎಸ್ ಗೆ ಸೇರಿರಬಹುದು ಅಷ್ಟೇ. ನಮ್ಮ ಪಕ್ಷದವರಂತೂ ಜೆಡಿಎಸ್ ಗೆ ಸೇರ್ಪಡೆಗೊಂಡಿಲ್ಲ. ನಮ್ಮ ಕಾರ್ಯಕರ್ತರು ಬೇರೆ ಪಕ್ಷಕ್ಕೆ ಸೇರುವ ಅವಶ್ಯಕತೆ ಇಲ್ಲ. ಜೆಡಿಎಸ್ ನವರು ಸುಖಾಸುಮ್ಮನೆ ಕಾಂಗ್ರೆಸ್ ಪಕ್ಷದವರು ಜೆಡಿಎಸ್ ಗೆ ಸೇರಿದ್ದಾರೆ ಎಂದು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಮುಂಬರುವ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆ ಜೆಡಿಎಸ್ ಗಿಮಿಕ್ ಮಾಡಲು ಹೊರಟಿದೆ ಎಂದು ತಿಳಿಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…