ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಶ್ರೀ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಯು ದಕ್ಷಿಣ ಭಾರತದಲ್ಲೇ ಹೆಚ್ಚು ಪ್ರಸಿದ್ಧಿ ಪಡೆದಿದೆ. ಈ ದನಗಳ ಜಾತ್ರೆ ಡಿ.20ರಿಂದ ಪ್ರಾರಂಭವಾಗಿದೆ. ತುಂಬು ಜಾತ್ರೆಗೆ ದೂರದ ಊರುಗಳಿಂದ ಹೊರಿಗಳೊಂದಿಗೆ ಸಾಲು ಸಾಲಾಗಿ ರೈತರು ಬರುತ್ತಿದ್ದಾರೆ. ದೂರದ ಊರುಗಳಿಂದ ಬಂದಿರುವ ರೈತರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹಾಗೂ ವಕೀಲ ಪ್ರತಾಪ್ ಹೇಳಿದರು.
ಘಾಟಿ ದನಗಳ ಜಾತ್ರೆಯಲ್ಲಿ ರೈತರಿಗೆ ಊಟ ವಿನಿಯೋಗದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಾನದಲ್ಲೇ ಶ್ರೇಷ್ಠದಾನ ಅನ್ನದಾನ. ದೂರದ ಊರುಗಳಿಂದ ರೈತರು ಜಾತ್ರೆಗೆ ಬಂದಿರುತ್ತಾರೆ. ಅವರ ಹಸಿವನ್ನ ನೀಗಿಸುವುದು ನಮ್ಮ ಕರ್ತವ್ಯ. ಆದ್ದರಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಅನ್ನದಾನವನ್ನು ಮೂರು ದಿನಗಳ ಕಾಲ ವಿತರಣೆ ಮಾಡಲಾಗುತ್ತದೆ. ರೈತರು ಇದನ್ನ ಸದುಪಯೋಗ ಪಡೆದುಕೊಳ್ಳಬೇಕು. ಇದರ ಜೊತೆಗೆ ಸುಮಾರು ನೂರು ಕೆ.ಜಿಯಷ್ಟು ಹಣ್ಣು ಹಂಪಲುಗಳನ್ನು ರೈತರಿಗೆ ವಿತರಣೆ ಮಾಡಿದ್ದೇವೆ ಎಂದರು.
ಈ ವೇಳೆ ಘಾಟಿ ಗ್ರಾಮ ಪಂಚಾಯಿತಿ ಸದಸ್ಯ ವಾಸು, ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ್ಯ ಆನಂದ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…